SAGARA | ಶಿವಮೊಗ್ಗ ಜಿಲ್ಲೆಯ ಸಾಗರ ತಾಲೂಕಿನ ಕಳಸವಳ್ಳಿ ಗ್ರಾಮದ ಶರಾವತಿ ಹಿನ್ನೀರಿನಲ್ಲಿ ಬುಧವಾರ ತೆಪ್ಪ ಮಗುಚಿ ಮೂರು ಯುವಕರು ನಾಪತ್ತೆಯಾಗಿದ್ದು ಇಂದು ಮೂವರ ಮೃತದೇಹಗಳು ಪತ್ತೆಯಾಗಿವೆ.
ಕಳಸವಳ್ಳಿಯ ಶರಾವತಿ ಹಿನ್ನೀರಿನಲ್ಲಿ ನಿನ್ನೆ ಈ ಒಂದು ದುರಂತ ಸಂಭವಿಸಿತ್ತು. ಸಿಗಂದೂರಿನ ಚೇತನ ಜೈನ್ (28), ಗಿಣಿವಾರದ ರಾಜು (28) ಹಾಗೂ ಹುಲಿದೇವರಬನದ ಸಂದೀಪ್ (30) ಮೃತ ದುರ್ಧೈವಿಗಳು ಎಂದು ತಿಳಿದುಬಂದಿದೆ.
ಯುವಕರ ಮೃತದೇಹ ಇದೀಗ ಪತ್ತೆಯಾಗಿದೆ. ಘಟನೆಗೆ ಸಂಬಂಧಿಸಿದಂತೆ ಕಾರ್ಗಲ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಘಟನೆ ಹಿನ್ನೆಲೆ :
ನಿನ್ನೆ ಶರಾವತಿ ಹಿನ್ನೀರಿನಲ್ಲಿ ತೆಪ್ಪದಲ್ಲಿದ್ದ ಚೇತನ್ ಸಂದೀಪ್ ರಾಜು ಎನ್ನುವವರು ಕಣ್ಮರೆಯಾಗಿದ್ದರು. ಇವರು ಸಿಗಂದೂರು, ಹುಲಿದೇವರ ಬನ ಮತ್ತು ಗಿಣಿವಾರದವರು ಎಂದು ತಿಳಿದು ಬಂದಿದೆ. ಈ ವೇಳೆ ಇನ್ನಿಬ್ಬರು ಯುವಕರು ದಡ ಸೇರಿದ್ದಾರೆ. ಶರಾವತಿ ಹಿನ್ನೀರಿನಲ್ಲಿ ನಾಪತ್ತೆಯಾಗಿರುವ ಮೂವರು ಯುವಕರು ಮೃತಪಟ್ಟಿದ್ದಾರೆ. ತೆಪ್ಪದಲ್ಲಿ ಒಟ್ಟು ಐವರು ಯುವಕರು ಪ್ರಯಾಣಿಸುತ್ತಿದ್ದರು. ನಿನ್ನೆಯಿಂದ ಶರಾವತಿ ನೀರಿನಲ್ಲಿ ಅಗ್ನಿಶಾಮಕ ಸಿಬ್ಬಂದಿಗಳು ಮತ್ತು ಈಶ್ವರ್ ಮಲ್ಪೆ ತಂಡ ಶೋಧಕಾರ್ಯ ನಡೆಸಿತ್ತು. 40 ಅಡಿ ಆಳದಲ್ಲಿ ಇದೀಗ ಮೂವರು ಯುವಕರ ಮೃತದೇಹಗಳು ಪತ್ತೆಯಾಗಿವೆ.

ಅವರು MalnadTimes.com ನ ಸಂಪಾದಕರಾಗಿ ಸೇವೆ ಸಲ್ಲಿಸುತ್ತಿದ್ದಾರೆ. ಸ್ಥಳೀಯ ಪತ್ರಿಕೋದ್ಯಮದ ಮೇಲಿನ ನಿಷ್ಠೆ ಮತ್ತು ಸಾಮಾಜಿಕ ಜವಾಬ್ದಾರಿಯೊಂದಿಗೆ, ಅವರು ಮಲ್ನಾಡು ಪ್ರದೇಶದ ಜನಜೀವನ, ಪರಿಸರ, ಕೃಷಿ, ಶಿಕ್ಷಣ ಮತ್ತು ಅಭಿವೃದ್ಧಿ ಸಂಬಂಧಿತ ವಿಷಯಗಳನ್ನು ಪ್ರಾಮಾಣಿಕವಾಗಿ ಹಾಗೂ ನಿರಂತರವಾಗಿ ಹಂಚಿಕೊಂಡು ಬರುತ್ತಿದ್ದಾರೆ. ನಿಖರತೆ, ನೈತಿಕತೆ ಮತ್ತು ಸಾರ್ವಜನಿಕ ಹಿತಚಿಂತನೆಯಾದರೂ ಅವರ ಸಂಪಾದಕೀಯ ನಿಲುವುಗಳ ಹತ್ತಿರ ಇರುತ್ತದೆ. Malnad Times ನ್ನು ವಿಶ್ವಾಸಾರ್ಹ ಸುದ್ದಿಮೂಲವಾಗಿಸಲು ಅವರು ನಿರಂತರ ಶ್ರಮಿಸುತ್ತಿದ್ದಾರೆ.