Karnataka Rain

Karnataka Rain : ಕರಾವಳಿ–ಮಲೆನಾಡು ಭಾಗದಲ್ಲಿ ಭಾರಿ ಮಳೆಯ ಎಚ್ಚರಿಕೆ !

Karnataka Rain:ಭಾರತೀಯ ಹವಾಮಾನ ಇಲಾಖೆ (IMD) ಹಾಗೂ ಕರ್ನಾಟಕ ರಾಜ್ಯ ಪ್ರಕೃತಿಕ ವಿಪತ್ತು ನಿರ್ವಹಣಾ ಕೇಂದ್ರ (KSNDMC) ಪ್ರಕಟಿಸಿರುವ ತಾಜಾ ಮುನ್ಸೂಚನೆಯ ಪ್ರಕಾರ, ಮುಂದಿನ 7 ದಿನಗಳವರೆಗೆ ರಾಜ್ಯದ ಕರಾವಳಿ ಹಾಗೂ ಮಲೆನಾಡು ಭಾಗಗಳಲ್ಲಿ ಜೋರಾದ ಗಾಳಿಯೊಂದಿಗೆ ಚದುರಿದಿಂದ ವ್ಯಾಪಕವಾಗಿ ಹಗುರದಿಂದ ಭಾರಿ ಮಳೆಯ ಸಾಧ್ಯತೆ ಇದೆ.

WhatsApp Group Join Now
Telegram Group Join Now
Instagram Group Join Now

ಇಂದು ಮತ್ತು ನಾಳೆ (ಗುರುವಾರ ಮತ್ತು ಶುಕ್ರವಾರ) ಕರಾವಳಿ ಹಾಗೂ ಮಲೆನಾಡು ಜಿಲ್ಲೆಗಳಲ್ಲಿ ಕೆಲವು ಕಡೆಗಳಲ್ಲಿ ಅತಿ ಭಾರಿ ಮಳೆಯ ಸಾಧ್ಯತೆ. ಅಲ್ಲದೆ, ಈ ಭಾಗಗಳಿಗೆ ಹೊಂದಿಕೊಂಡಿರುವ ಒಳನಾಡಿನ ಕೆಲ ಜಿಲ್ಲೆಗಳಲ್ಲಿ ಅಲ್ಲಲ್ಲಿ ಹಗುರದಿಂದ ಸಾಧಾರಣ ಮಳೆಯಾಗಬಹುದು.

ಹೀಗಾಗಿ, ಸಾರ್ವಜನಿಕರು, ರೈತರು, ಪ್ರವಾಸಿಗರು ಮತ್ತು ಮೀನುಗಾರರು ಮುನ್ನೆಚ್ಚರಿಕೆ ವಹಿಸಲು KSNDMC ಹಾಗೂ IMD ಸೂಚನೆ ನೀಡಿವೆ.

Malnad Times App ಡೌನ್‌ಲೋಡ್ ಮಾಡಿಶಿವಮೊಗ್ಗ ಮತ್ತು ಮಲೆನಾಡಿನ ಸುದ್ದಿಗಳನ್ನು ತಕ್ಷಣ ಪಡೆಯಿರಿ.
GET IT ONGoogle Play

ಮುನ್ನೆಚ್ಚರಿಕೆ:

  • ಕಡಲ ತೀರ ಪ್ರದೇಶಗಳಲ್ಲಿ ಮುನ್ನೆಚ್ಚರಿಕೆ ವಹಿಸಿ, ಅಗತ್ಯವಿದ್ದರೆ ಸ್ಥಳಾಂತರವಾಗಿ .
  • ಗುಡ್ಡ ಪ್ರದೇಶಗಳಲ್ಲಿ ನೆರೆ/ಗುಡ್ಡ ಕುಸಿತದ ಸಾಧ್ಯತೆ ಇರುವ ಕಾರಣದಿಂದ ಗ್ರಾಮಸ್ಥರು ಎಚ್ಚರಿಕೆಯಿಂದ ಇರಲಿ.
  • ಪ್ರವಾಸ, ಬೆಟ್ಟಾರೋಹಣ ಅಥವಾ ನದಿತೀರದ ಚಟುವಟಿಕೆಗಳನ್ನು ತಾತ್ಕಾಲಿಕವಾಗಿ ಕೈ ಬಿಡಿ .
  • ಸಂಬಂಧಿತ ಇಲಾಖೆ ಸೂಚನೆ ಪಾಲಿಸಿ.

Read More :ಮನೆ ಕಟ್ಟುವವರಿಗೆ ಬಿಗ್ ಶಾಕ್ ! ಈ ನಿಯಮ ಪಾಲಿಸದಿದ್ದರೆ ನೀರು ಹಾಗೂ ವಿದ್ಯುತ್‌ ಸಂಪರ್ಕ ಕಡಿತ !

ಮಾಹಿತಿ ಮತ್ತು ಮೂಲ: ಈ ವರದಿಯನ್ನು Malnad Times ಸಂಪಾದಕೀಯ ತಂಡವು ಲಭ್ಯ ಮಾಹಿತಿಯ ಆಧಾರದಲ್ಲಿ ಪರಿಶೀಲಿಸಿದೆ.

Koushik G K

MalnadTimes.com ವೆಬ್‌ಸೈಟ್‌ನ ಸ್ಥಾಪಕ ಮತ್ತು ನಿರ್ವಾಹಕರಾಗಿದ್ದಾರೆ. ಅಕ್ಟೋಬರ್ 3 2019 ರಲ್ಲಿ ಈ ತಾಣವನ್ನು ಆರಂಭಿಸಿದ ಅವರು, ಮೊದಲಿಗೆ ಐಟಿ ಕ್ಷೇತ್ರದಲ್ಲಿ ಕೆಲಸ ಮಾಡಿದ ಅನುಭವ ಹೊಂದಿದ್ದಾರೆ. ತಮ್ಮ ತಾಂತ್ರಿಕ ಪರಿಣತಿಯನ್ನು ಮತ್ತು ಸ್ಥಳೀಯ ಸುದ್ದಿಗಳ ಪ್ರೀತಿಯನ್ನು ಒಂದಾಗಿಸಿ, ಮಲ್ನಾಡಿನ ಜನತೆಗೆ ನಿಖರವಾದ, ವಿಶ್ವಾಸಾರ್ಹ ಹಾಗೂ ಸಮಗ್ರ ಸುದ್ದಿಗಳನ್ನು ತಲುಪಿಸುವ ನಿಟ್ಟಿನಲ್ಲಿ ಈ ತಾಣವನ್ನು ರೂಪಿಸಿದ್ದಾರೆ. Malnad Times ಮೂಲಕ  ಶಿವಮೊಗ್ಗ ಮತ್ತು ಮಲ್ನಾಡು ಭಾಗದ ಸಮುದಾಯದ ಧ್ವನಿಯಾಗಿ, ಗ್ರಾಮೀಣ ಬದುಕು, ಪರಿಸರ, ಕೃಷಿ, ಶಿಕ್ಷಣ, ಮತ್ತು ಸಾರ್ವಜನಿಕ ವಿಚಾರಗಳನ್ನು ತಲುಪಿಸುವ ಪ್ರಯತ್ನದಲ್ಲಿ ತೊಡಗಿದ್ದಾರೆ.ಈ ತಾಣದ ನಿರ್ವಹಣೆ, ತಾಂತ್ರಿಕ ಹಾಗೂ ಸಂಪಾದಕೀಯ ಕಾರ್ಯಗಳಲ್ಲಿ ನಿತ್ಯ ಭಾಗವಹಿಸುತ್ತಿದ್ದಾರೆ.Contact No -7022818650