ರಿಪ್ಪನ್ಪೇಟೆ : ಪರಿಸರ ಸಂರಕ್ಷಣೆ ನಮ್ಮೆಲ್ಲರ ಬದುಕಿನ ಭಾಗವಾಗಬೇಕು. ಗಿಡ-ಮರಗಳನ್ನು ಬೆಳೆಸುವ ಮೂಲಕ ಪ್ರಾಣಿ-ಪಕ್ಷಿಗಳು ಸೇರಿದಂತೆ ಸಮಸ್ತ ಭೂ ಮಂಡಲವನ್ನು ಸ್ವಚ್ಚವಾಗಿಟ್ಟುಕೊಂಡು ಮುಂದಿನ ಪೀಳಿಗೆಗೆ ಹಸ್ತಾಂತರಿಸುವ ಗುರುತರ ಹೊಣೆಗಾರಿಕೆಯನ್ನು ಅರ್ಥ ಮಾಡಿಕೊಳ್ಳಬೇಕು. ಹವಾಮಾನ ವೈಪರಿತ್ಯ ತಡೆಗಟ್ಟಲು ಜನರಲ್ಲಿ ಪರಿಸರದ ಜಾಗೃತಿ ಮೂಡಿಸುವುದು ಇಂದಿನ ಕಾಲಮಾನದ ಅಗತ್ಯವಾಗಿದೆ ಎಂದು ರಿಪ್ಪನ್ಪೇಟೆ ಠಾಣೆಯ ಪಿಎಸ್ಐ ರಾಜುರೆಡ್ಡಿ ಕರೆ ನೀಡಿದರು.
ರಿಪ್ಪನ್ಪೇಟೆಯ ರೋಟರಿ ಕ್ಲಬ್ನವರು ಆಯೋಜಿಸಲಾದ ವನಮಹೋತ್ಸವ ಕಾರ್ಯಕ್ರಮದಲ್ಲಿ ಭಾಗವಹಿಸಿ ಗಿಡ ನೆಡುವ ಮೂಲಕ ಚಾಲನೆ ನೀಡಿ ಮಾತನಾಡಿದ ಅವರು, ಸಕಾಲದಲ್ಲಿ ಮಳೆ ಬಾರದೆ ರೈತರು ಕಂಗಾಲಾಗಿದ್ದಾರೆ. ದುರಾಸೆಯಿಂದಾಗಿ ಅರಣ್ಯ ನಾಶ ನಿತ್ಯ ಅವ್ಯಾಹತವಾಗಿ ನಡೆಯುತ್ತಿದ್ದು ಇದರಿಂದಾಗಿ ಮಳೆ ಕಡಿಮೆಯಾಗಲು ಕಾರಣವಾಗಿದೆ. ಇನ್ನಾದರೂ ಅರಣ್ಯ ಉಳಿಸಿ ಪರಿಸರ ರಕ್ಷಣೆ ಮಾಡಬೇಕಾಗಿದೆ ಎಂದರು.

ರೋಟರಿ ಕ್ಲಬ್ ಆಧ್ಯಕ್ಷ ರವೀಂದ್ರ ಬಲ್ಲಾಳ್, ರೋಟರಿ ಕ್ಲಬ್ ಸಂಸ್ಥಾಪಕ ಅಧ್ಯಕ್ಷ ಎಂ.ಬಿ.ಲಕ್ಷ್ಮಣ ಗೌಡ, ಜೆ.ರಾಧಾಕೃಷ್ಣ, ರಮೇಶ ಎಸ್.ಹೆಬ್ಬಾರ್ (ರಾಮು ಹೆಬ್ಬಾರ್), ಹೆಚ್.ಎಂ.ವರ್ತೇಶಗೌಡ ಹುಗುಡಿ, ಗಣೇಶ ಎನ್.ಕಾಮತ್, ಎಂ.ಬಿ.ಮಂಜುನಾಥ, ತಾನಾರಾಮ, ನಿವೃತ್ತ ಮುಖ್ಯೋಪಾಧ್ಯಾಯ ರಾಧಾಕೃಷ್ಣ, ಹೆಚ್.ಎಸ್.ಸುಧೀಂದ್ರ ಹೆಬ್ಬಾರ್, ಸಂತೋಷ, ದೇವದಾಸ ಆಚಾರ್, ಸದಾನಂದ, ಸುಖೇಶ್, ಇನ್ನಿತರರು ಹಾಜರಿದ್ದರು.

ಮಲೆನಾಡಿನ ಹೆಬ್ಬಾಗಿಲು ಶಿವಮೊಗ್ಗದ ಸ್ಥಳೀಯ ನ್ಯೂಸ್ ವೆಬ್ಸೈಟ್ಗಳಲ್ಲಿ ಪ್ರತಿನಿಧಿಯಾಗಿ ವೃತ್ತಿ ಜೀವನ ಪ್ರಾರಂಭ. ಪತ್ರಿಕೋದ್ಯಮದಲ್ಲಿ 7 ವರ್ಷಗಳ ಅನುಭವ. ಜಿಲ್ಲಾ ಮಟ್ಟದ ದಿನಪತ್ರಿಕೆಗಳಲ್ಲಿ ಹಾಗೂ ವೆಬ್ಸೈಟ್ಗಳಲ್ಲಿ ಮಲೆನಾಡಿಗೆ ಸಂಬಂಧಿಸಿದ ವಿಷಯಗಳ ಲೇಖನಗಳನ್ನು ಬರೆದಿದ್ದೇನೆ. ಪ್ರಸ್ತುತ ‘ಮಲ್ನಾಡ್ ಟೈಮ್ಸ್’ ಡಿಜಿಟಲ್ ನಲ್ಲಿ ಸಂಪಾದಕನಾಗಿ ಮುಂದುವರೆದಿದ್ದೇನೆ.





