ತೀರ್ಥಹಳ್ಳಿ : ಇಲ್ಲಿನ ಸೀಬಿನಕೆರೆ ನಿವಾಸಿ ಮತ್ತು ಉಡುಪಿಯಲ್ಲಿ ಡಾನ್ಸ್ ಮಾಸ್ಟರ್ ಆಗಿ ಕಾರ್ಯನಿರ್ವಹಿಸುತ್ತಿದ್ದ ರಾಕೇಶ್ (29) ಮಂಗಳವಾರ ರಾತ್ರಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
ದಸರಾ ಹಬ್ಬದ ಸಂದರ್ಭದಲ್ಲಿ ಹುಲಿವೇಷ ಧರಿಸಿ ನೃತ್ಯ ಮಾಡುತ್ತಿದ್ದ ರಾಕೇಶ್, ಮನೆಯಲ್ಲಿ ಯಾರೂ ಇಲ್ಲದ ವೇಳೆ ನೇಣು ಹಾಕಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
ಕಳೆದ ಮೂರ್ನಾಲ್ಕು ವರ್ಷಗಳಿಂದ ದಸರಾ ಕಾರ್ಯಕ್ರಮದಲ್ಲಿ ಹುಲಿವೇಷ ಧರಿಸಿ ನೃತ್ಯ ಮಾಡುವ ಮೂಲಕ ಜನಮನ ಗೆದ್ದಿದ್ದ ರಾಕೇಶ್, ಈ ಘಟನೆಯಿಂದ ತೀರ್ಥಹಳ್ಳಿ ಪಟ್ಟಣದಲ್ಲಿ ನೀರವ ಮೌನ ಆವರಿಸಿದೆ. ಈ ಸಂಬಂಧ ತೀರ್ಥಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಮಲೆನಾಡಿನ ಹೆಬ್ಬಾಗಿಲು ಶಿವಮೊಗ್ಗದ ಸ್ಥಳೀಯ ನ್ಯೂಸ್ ವೆಬ್ಸೈಟ್ಗಳಲ್ಲಿ ಪ್ರತಿನಿಧಿಯಾಗಿ ವೃತ್ತಿ ಜೀವನ ಪ್ರಾರಂಭ. ಪತ್ರಿಕೋದ್ಯಮದಲ್ಲಿ 7 ವರ್ಷಗಳ ಅನುಭವ. ಜಿಲ್ಲಾ ಮಟ್ಟದ ದಿನಪತ್ರಿಕೆಗಳಲ್ಲಿ ಹಾಗೂ ವೆಬ್ಸೈಟ್ಗಳಲ್ಲಿ ಮಲೆನಾಡಿಗೆ ಸಂಬಂಧಿಸಿದ ವಿಷಯಗಳ ಲೇಖನಗಳನ್ನು ಬರೆದಿದ್ದೇನೆ. ಪ್ರಸ್ತುತ ‘ಮಲ್ನಾಡ್ ಟೈಮ್ಸ್’ ಡಿಜಿಟಲ್ ನಲ್ಲಿ ಸಂಪಾದಕನಾಗಿ ಮುಂದುವರೆದಿದ್ದೇನೆ.





