ರಿಪ್ಪನ್ಪೇಟೆ : ಹಿರಿಯ ಪತ್ರಕರ್ತ ಪ್ರಶಾಂತ ರಿಪ್ಪನ್ಪೇಟೆ ಇವರ ತಂದೆಯವರಾದ ಶಿಕ್ಷಣ ಪ್ರೇಮಿ ಬಿ.ಶೇಖರಪ್ಪ ಮಾಸ್ಟರ್ ಇವರ ಅಗಲಿಕೆಗೆ ಬಾಳೆಹೊನ್ನೂರು ಶ್ರೀ ರಂಭಾಪುರಿ ಡಾ. ವೀರಸೋಮೇಶ್ವರ ಜಗದ್ಗುರುಗಳು ತಮ್ಮ ಸಂತಾಪ ವ್ಯಕ್ತಪಡಿಸಿದ್ದಾರೆ.
ಶಿಕ್ಷಕರಾಗಿ ಅತ್ಯಂತ ದಕ್ಷತೆ ಪ್ರಾಮಾಣಿಕತೆಯಿಂದ ಸೇವೆ ಸಲ್ಲಿಸಿದ ಅವರು ಮಕ್ಕಳಲ್ಲಿ ದೇಶಾಭಿಮಾನ ರಾಷ್ಟ್ರಾಭಿಮಾನ ಮೂಡಿಸುವ ಕೆಲಸ ಮಾಡಿದ್ದಾರೆ. ನಿವೃತ್ತಿ ಹೊಂದಿದ ನಂತರವೂ ಅವರು ಧಾರ್ಮಿಕ ಸಾಮಾಜಿಕ ಶೈಕ್ಷಣಿಕೆ ಕ್ಷೇತ್ರಗಳಲ್ಲಿ ಕ್ರಿಯಾಶೀಲರಾಗಿ ಕಾರ್ಯ ನಿರ್ವಹಿಸುತ್ತಿದ್ದರು.
ಶ್ರೀ ರಂಭಾಪುರಿ ಪೀಠದೊಂದಿಗೆ ನಿಕಟ ಸಂಪರ್ಕ ಹೊಂದಿದ್ದರು. ಅವರ ಅಗಲಿಕೆ ನೋವಿನ ವಿಷಯವಾಗಿದೆ. ಅಗಲಿದ ಅವರ ಪವಿತ್ರ ಆತ್ಮಕ್ಕೆ ದಯಾಘನನಾದ ಪರಮಾತ್ಮನು ಚಿರಶಾಂತಿ ನೀಡಲಿ ಅವರು ಕುಟುಂಬ ವರ್ಗದವರಿಗೆ ಅವರ ಅಗಲಿಕೆಯ ನೋವನ್ನು ಸಹಿಸುವ ಶಕ್ತಿಯನ್ನು ನೀಡಲಿ ಎಂದು ರಂಭಾಪುರಿ ಜಗದ್ಗುರುಗಳು ತಮ್ಮ ಸಂತಾಪ ಸೂಚಕ ಸಂದೇಶದಲ್ಲಿ ತಿಳಿಸಿದ್ದಾರೆ.

