Hosanagara

ಖ್ಯಾತ ಉದ್ಯಮಿ ಎಸ್ ಆರ್ ಪ್ರಭಾಕರ್ ನಿಧನ : ಗಣ್ಯರ ಸಂತಾಪ

ಹೊಸನಗರ ; ತಾಲೂಕಿನ ಹೆಸರಾಂತ ಉದ್ಯಮಿ, ಕೃಷಿಕ ಕೋಡೂರು ಸಮೀಪದ ಗೌಡಕೊಪ್ಪ ವಾಸಿ ಎಸ್.ಆರ್. ಪ್ರಭಾಕರ್ (86) ಶನಿವಾರ ಬೆಳಗ್ಗೆ 7:30ಕ್ಕೆ ನಿಧನರಾದರು.

WhatsApp Group Join Now
Telegram Group Join Now
Instagram Group Join Now
📢 Stay Updated! Join our WhatsApp Channel Now →

ಕಳೆದ ಕೆಲವು ತಿಂಗಳಿನಿಂದ ವಯೋಸಹಜ ಖಾಯಿಲೆಯಿಂದ ಬಳಲುತ್ತಿದ್ದ ಮೃತರು, 90 ದಶಕದಲ್ಲಿ ತಾಲೂಕಿನ ಮೂಲಕ ಹಲವು ಶ್ರೀ ರಾಮಪ್ರಕಾಶ್ ಖಾಸಗಿ ಬಸ್‌ಗಳನ್ನು ಅಂತರ್ ಜಿಲ್ಲೆಗಳಿಗೆ ಸಾರಿಗೆ ಸಂಪರ್ಕ ಕಲ್ಪಿಸುವ ಸಾರಿಗೆ ಉದ್ಯಮದಲ್ಲಿ ಖ್ಯಾತಿ ಹೊಂದಿ, ಹಲವು ಕುಟುಂಬಗಳಿಗೆ ನೌಕರಿ ನೀಡುವ ಮೂಲಕ ಆಸರೆ ನೀಡಿದ್ದರು.

ಕಾಂಗ್ರೆಸ್ ಮುಖಂಡರಾಗಿದ್ದ ಮೃತರಿಗೆ ಪತ್ನಿ ಸಹಿತ ಅರಣ್ಯ ಗುತ್ತಿಗೆದಾರ ಎಸ್.ಪಿ.ಸುರೇಶ್ ಸೇರಿದಂತೆ ಮೂವರು ಪುತ್ರರಿದ್ದಾರೆ.

Malnad Times App ಡೌನ್‌ಲೋಡ್ ಮಾಡಿಶಿವಮೊಗ್ಗ ಮತ್ತು ಮಲೆನಾಡಿನ ಸುದ್ದಿಗಳನ್ನು ತಕ್ಷಣ ಪಡೆಯಿರಿ.
GET IT ONGoogle Play
ಲೇಖನವನ್ನು ಮುಂದುವರಿಸಿ ಓದಿ

ಸಂತಾಪ :

ಮೃತರ ಆತ್ಮಕ್ಕೆ ದೇವರು ಚಿರಶಾಂತಿ ನೀಡಿ ಕುಟುಂಬಕ್ಕೆ ನೋವು ಭರಿಸುವ ಶಕ್ತಿ ನೀಡಲಿ ಎಂದು ಸಾಗರ ಕ್ಷೇತ್ರದ ಶಾಸಕ ಗೋಪಾಲಕೃಷ್ಣ ಬೇಳೂರು, ಮಾಜಿ ಸಚಿವ ಕಿಮ್ಮನೆ ರತ್ನಾಕರ್, ಜಿಲ್ಲಾ ಪಂಚಾಯತಿ ಮಾಜಿ ಅಧ್ಯಕ್ಷ ಕಲಗೋಡು ರತ್ನಾಕರ್, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಬಿ.ಜಿ.ಚಂದ್ರಮೌಳಿ, ತಾಲೂಕು ಬ್ರಾಹ್ಮಣ ಮಹಾಸಭಾ ಸೇರಿದಂತೆ ಹಲವು ಗಣ್ಯರು ಸಂತಾಪ ಸೂಚಿಸಿದ್ದಾರೆ..

ಮಾಹಿತಿ ಮತ್ತು ಮೂಲ: ಈ ವರದಿಯ ಮಾಹಿತಿ ವರದಿಗಾರರು, ಅಧಿಕೃತ ಪ್ರಕಟಣೆಗಳು ಅಥವಾ ಸ್ಥಳದಲ್ಲಿನ ವಿಶ್ವಾಸಾರ್ಹ ಮೂಲಗಳಿಂದ ಪರಿಶೀಲಿಸಲಾಗಿದೆ.

Mahesh Hindlemane

ಮಲೆನಾಡಿನ ಹೆಬ್ಬಾಗಿಲು ಶಿವಮೊಗ್ಗದ ಸ್ಥಳೀಯ ನ್ಯೂಸ್ ವೆಬ್‌ಸೈಟ್‌ಗಳಲ್ಲಿ ಪ್ರತಿನಿಧಿಯಾಗಿ ವೃತ್ತಿ ಜೀವನ ಪ್ರಾರಂಭ. ಪತ್ರಿಕೋದ್ಯಮದಲ್ಲಿ 8 ವರ್ಷಗಳ ಅನುಭವ. ಜಿಲ್ಲಾ ಮಟ್ಟದ ದಿನಪತ್ರಿಕೆಗಳಲ್ಲಿ ಹಾಗೂ ವೆಬ್‌ಸೈಟ್‌ಗಳಲ್ಲಿ ಮಲೆನಾಡಿಗೆ ಸಂಬಂಧಿಸಿದ ವಿಷಯಗಳ ಲೇಖನಗಳನ್ನು ಬರೆದಿದ್ದೇನೆ. ಪ್ರಸ್ತುತ <strong>'ಮಲ್ನಾಡ್ ಟೈಮ್ಸ್'</strong> ಡಿಜಿಟಲ್ ನಲ್ಲಿ ಸಂಪಾದಕನಾಗಿ ಮುಂದುವರೆದಿದ್ದೇನೆ. <a href="mailto:[email protected]">[email protected]</a>