ಅಗ್ನಿಶಾಮಕ ದಳದ ಸಿಬ್ಬಂದಿಗಳಿಂದ ಬಾವಿಗೆ ಬಿದ್ದ ಮಹಿಳೆ ರಕ್ಷಣೆ !

Written by malnadtimes.com

Updated on:

THIRTHAHALLI ; ಬಾವಿಗೆ ಬಿದ್ದಿದ್ದ ಮಹಿಳೆಯನ್ನು ಅಗ್ನಿಶಾಮಕ ದಳದ ಸಿಬ್ಬಂದಿಗಳು ರಕ್ಷಿಸಿದ ಘಟನೆ ತಾಲೂಕಿನ ಕುಡುಮಲ್ಲಿಗೆಯಲ್ಲಿ ನಡೆದಿದೆ.

WhatsApp Group Join Now
Telegram Group Join Now
Instagram Group Join Now

ಇಂದು ಮಧ್ಯಾಹ್ನ ಇಂದಿರಾನಗರದ ಚೌಡಿಕಟ್ಟಿ ಹತ್ತಿರದ ಸರ್ಕಾರಿ ಬಾವಿಗೆ ಗುಲಾಬಿ ಪೂಜಾರ್ತಿ (58) ಎಂಬ ಮಹಿಳೆ ಆಕಸ್ಮಿಕವಾಗಿ ಕಾಲುಜಾರಿ ಬಾವಿಗೆ ಬಿದ್ದಿದ್ದು ವಿಷಯ ತಿಳಿದು ತೀರ್ಥಹಳ್ಳಿ ಅಗ್ನಿಶಾಮಕ ಠಾಣೆಯ ಸಿಬ್ಬಂದಿಗಳು ಘಟನಾ ಸ್ಥಳಕ್ಕೆ ಧಾವಿಸಿ ಮಹಿಳೆಯನ್ನು ರಕ್ಷಿಸಿದ್ದಾರೆ.

ಅಗ್ನಿಶಾಮಕ ದಳದ ಸಿಬ್ಬಂದಿಗಳಾದ ಸಂತೋಷ್ ಶೆಟ್ಟಿ, ಚಾಲಕರಾದ ಪ್ರಶಾಂತ್ ಕುಮಾರ್ ಹಾಗೂ ಶರತ್ ಎಂ, ಶಶಿಕುಮಾರ್, ನಿಂಗಪ್ಪ ಇಟ್ಟಣ್ಣನವರ್ ಸ್ಥಳಕ್ಕೆ ಧಾವಿಸಿ ಸ್ಥಳೀಯರ ಸಹಕಾರದೊಂದಿಗೆ ಗುಲಾಬಿ ಪೂಜಾರ್ತಿಯನ್ನು ಸುರಕ್ಷಿತವಾಗಿ ಮೇಲಕ್ಕೆತ್ತುವಲ್ಲಿ ಯಶಸ್ವಿಯಾಗಿದ್ದಾರೆ.

Leave a Comment