ಶಿವಮೊಗ್ಗ : ನಿವೃತ್ತ ಉಪ ಅರಣ್ಯ ಸಂರಕ್ಷಣಾಧಿಕಾರಿ (ಎಸಿಎಫ್) ಬಿ. ಶಿವಪ್ಪ ಶನಿವಾರ ಬೆಳಗ್ಗೆ ನಿಧನರಾದರು.
ಅವರ ಪಾರ್ಥಿವ ಶರೀರದ ಅಂತಿಮ ದರ್ಶನವನ್ನು ಶಿವಮೊಗ್ಗ ನಗರದ ವಿನೋಬನಗರ ಬಡಾವಣೆಯ 7ನೇ ತಿರುವಿನಲ್ಲಿರುವ 60 ಅಡಿ ರಸ್ತೆಯ ಅವರ ಸ್ವಗೃಹ ‘ವೆಂಕಟೇಶ್ವರ’ದಲ್ಲಿ ಸಾರ್ವಜನಿಕರ ದರ್ಶನಕ್ಕೆ ಇಡಲಾಗಿತ್ತು. ಈ ವೇಳೆ ಬಂಧು-ಮಿತ್ರರು, ಅರಣ್ಯ ಇಲಾಖೆಯ ಸಿಬ್ಬಂದಿಗಳು ಹಾಗೂ ಸಾರ್ವಜನಿಕರು ಆಗಮಿಸಿ ಮೃತರಿಗೆ ಅಂತಿಮ ನಮನ ಸಲ್ಲಿಸಿದರು.
ಬಳಿಕ, ಶಿವಮೊಗ್ಗ ನಗರದ ವಿದ್ಯಾನಗರದಲ್ಲಿರುವ ರೋಟರಿ ಚಿತಾಗಾರದಲ್ಲಿ ಮೃತರ ಅಂತ್ಯಸಂಸ್ಕಾರ ನೆರವೇರಿಸಲಾಯಿತು.
Malnad Times App ಡೌನ್ಲೋಡ್ ಮಾಡಿಶಿವಮೊಗ್ಗ ಮತ್ತು ಮಲೆನಾಡಿನ ಸುದ್ದಿಗಳನ್ನು ತಕ್ಷಣ ಪಡೆಯಿರಿ.

