ರಿಪ್ಪನ್ಪೇಟೆ ; ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲೂಕಿನ ಅರಸಾಳು ಗ್ರಾಮ ಪಂಚಾಯಿತಿ ವ್ಯಾಪ್ತಿಯ 9ನೇ ಮೈಲಿಕಲ್ಲು ಹಾಗೂ ಸೂಡೂರು ಗೇಟ್ ನಡುವಿನ ತಿರುವಿನಲ್ಲಿ ಶನಿವಾರ ಸಂಜೆ ವಾಹನ ಡಿಕ್ಕಿ ಹೊಡೆದ ಪರಿಣಾಮ ಸ್ಕೂಟಿ ಸವಾರ ಸ್ಥಳದಲ್ಲೇ ಮೃತಪಟ್ಟ ಘಟನೆ ನಡೆದಿದೆ.
ಆಯನೂರು ಸಮೀಪದ ಹೊಸೂರು ನಿವಾಸಿ ನಿವೃತ್ತ ಸಹಾಯಕ ಕೃಷಿ ಅಧಿಕಾರಿ ಸುಬ್ರಹ್ಮಣ್ಯ ಜಿ.ಎಸ್ (65) ಮೃತ ದುರ್ದೈವಿ. ತೀರ್ಥಹಳ್ಳಿ ತಾಲ್ಲೂಕಿನ ಅಂಬುತೀರ್ಥ ಗ್ರಾಮದ ಸಂಬಂಧಿಕರ ಮನೆಯಲ್ಲಿ ವೈಕುಂಠ ಸಮಾರಾಧನೆ ಕಾರ್ಯಕ್ರಮ ಮುಗಿಸಿಕೊಂಡು ಊರಿಗೆ ಹಿಂದಿರುಗುತ್ತಿದ್ದಾಗ ಈ ದುರ್ಘಟನೆ ಸಂಭವಿಸಿದೆ.

ಇವರಿಗೆ ಪತ್ನಿ ಹಾಗೂ ಪುತ್ರಿ ಇದ್ದಾರೆ. ಘಟನೆ ಸಂಬಂಧ ರಿಪ್ಪನ್ಪೇಟೆ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಮಲೆನಾಡಿನ ಹೆಬ್ಬಾಗಿಲು ಶಿವಮೊಗ್ಗದ ಸ್ಥಳೀಯ ನ್ಯೂಸ್ ವೆಬ್ಸೈಟ್ಗಳಲ್ಲಿ ಪ್ರತಿನಿಧಿಯಾಗಿ ವೃತ್ತಿ ಜೀವನ ಪ್ರಾರಂಭ. ಪತ್ರಿಕೋದ್ಯಮದಲ್ಲಿ 7 ವರ್ಷಗಳ ಅನುಭವ. ಜಿಲ್ಲಾ ಮಟ್ಟದ ದಿನಪತ್ರಿಕೆಗಳಲ್ಲಿ ಹಾಗೂ ವೆಬ್ಸೈಟ್ಗಳಲ್ಲಿ ಮಲೆನಾಡಿಗೆ ಸಂಬಂಧಿಸಿದ ವಿಷಯಗಳ ಲೇಖನಗಳನ್ನು ಬರೆದಿದ್ದೇನೆ. ಪ್ರಸ್ತುತ ‘ಮಲ್ನಾಡ್ ಟೈಮ್ಸ್’ ಡಿಜಿಟಲ್ ನಲ್ಲಿ ಸಂಪಾದಕನಾಗಿ ಮುಂದುವರೆದಿದ್ದೇನೆ.





