ಹೊಸನಗರ ; ಬೈಕ್ ಸಮೇತ ಸೇತುವೆ ಮೇಲಿಂದ ಹಿನ್ನೀರಿಗೆ ಬಿದ್ದು ನಿವೃತ್ತ ಮುಖ್ಯ ಶಿಕ್ಷಕ ಸಾವು !

Written by Mahesha Hindlemane

Updated on:

ಹೊಸನಗರ ; ನಿವೃತ್ತ ಮುಖ್ಯ ಶಿಕ್ಷಕನೊಬ್ಬ ಸೇತುವೆ ಮೇಲೆ ಬೈಕಿನಲ್ಲಿ ಹೋಗುತ್ತಿದ್ದಾಗ ನಿಯಂತ್ರಣ ತಪ್ಪಿ ಬೈಕ್ ಸಮೇತ ಹಿನ್ನೀರಿಗೆ ಬಿದ್ದು ಮೃತಪಟ್ಟ ಘಟನೆ ತಾಲೂಕಿನ ನಗರ ಸಮೀಪದ ಸೋಮವಾರಪೇಟೆ ಎಂಬಲ್ಲಿ ಶನಿವಾರ ಬೆಳಗ್ಗೆ ನಡೆದಿದೆ.

WhatsApp Group Join Now
Telegram Group Join Now
Instagram Group Join Now
📢 Stay Updated! Join our WhatsApp Channel Now →

ಸಂಪೇಕಟ್ಟೆ ಸರ್ಕಾರಿಯಲ್ಲಿ ಮುಖ್ಯ ಶಿಕ್ಷಕರಾಗಿ ಕೆಲವು ತಿಂಗಳ ಹಿಂದೆಯಷ್ಟೇ ನಿವೃತ್ತಿಯಾಗಿದ್ದ ಗಣೇಶ್ (61) ಮೃತ ದುರ್ಧೈವಿ. ಗಣೇಶ್ ಶನಿವಾರ ಬೆಳಗ್ಗೆ ಪತ್ನಿ ವೀಣಾರನ್ನು ಅವರು ಕರ್ತವ್ಯ ನಿರ್ವಹಿಸುತ್ತಿರುವ ಅರಮನೆಕೊಪ್ಪ ಗ್ರಾ.ಪಂ.ಗೆ ಬಿಟ್ಟು ವಾಪಾಸ್ ನಗರಕ್ಕೆ ಬಂದಿದ್ದರು. ಬಳಿಕ ಕಾರ್ಯನಿಮಿತ್ತ ಬಸವನಬ್ಯಾಣದ ಕಡೆ ಹೋಗುತ್ತಿರುವಾಗ ಈ ದುರ್ಘಟನೆ ನಡೆದಿದೆ.

ಹಿನ್ನೀರಿನಲ್ಲಿ ಬಿದ್ದಿದ್ದ ಬೈಕ್ ಮತ್ತು ವ್ಯಕ್ತಿಯ ಮೃತದೇಹ ನೋಡಿದ ಯಾರೋ ಸ್ಥಳೀಯರು ಸುದ್ದಿ ಮುಟ್ಟಿಸಿದ್ದಾರೆ. ಕೂಡಲೇ ಘಟನಾ ಸ್ಥಳಕ್ಕೆ ದೌಡಾಯಿಸಿದ ನಗರ ಠಾಣೆ ಪೊಲೀಸರು ಉಕ್ಕಡದ ಮೂಲಕ ಕಾರ್ಯಾಚರಣೆ ನಡೆಸಿ ಮೃತದೇಹವನ್ನು ದಡಕ್ಕೆ ತಂದಿದ್ದಾರೆ. ಬಳಿಕ ಸ್ಥಳೀಯರ ಸಹಕಾರದಿಂದ ಬೈಕ್‌ ಅನ್ನು ಮೇಲಕ್ಕೆತ್ತಿದ್ದಾರೆ.

ಬಿದನೂರು ಮಾರಿಕಾಂಬಾ ಜಾತ್ರೆ ನಡೆಯುತ್ತಿದ್ದು ಶನಿವಾರ ಕೊನೆಯ ದಿನವಾಗಿದೆ. ಬೆಳಗ್ಗೆಯಷ್ಟೇ ಮೃತ ಗಣೇಶ್ ಕೂಡ ದೇಗುಲಕ್ಕೆ ಬಂದು ದೇವಿಯ ದರ್ಶನ ಮಾಡಿ ಹೋಗಿದ್ದರು. ದೇವಸ್ಥಾನದ ಅಣತಿ ದೂರದಲ್ಲೇ ಗಣೇಶ್ ಮನೆ ಇದ್ದು ಕುಟುಂಬಸ್ಥರ ರೋಧನೆ ಮುಗಿಲು ಮುಟ್ಟಿದೆ.

ಈ ಸಂಬಂಧ ಮೃತನ ಪತ್ನಿ ವೀಣಾ ನಗರ ಠಾಣೆಗೆ ದೂರು ಸಲ್ಲಿಸಿದ್ದು, ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.

Leave a Comment