ನಿವೃತ್ತ ಪ್ರಾಚಾರ್ಯ ಕರುಣಾಕರ್ ನಿಧನ !

Written by Mahesh Hindlemane

Updated on:

ರಿಪ್ಪನ್‌ಪೇಟೆ ; ಹೊಸನಗರ, ಸಾಗರ ಸರ್ಕಾರಿ ಪ್ರಥಮ ದರ್ಜೆ ಕಾಲೇಜ್‌ನ ನಿವೃತ್ತ ಪ್ರಾಚಾರ್ಯ, ಇಂಗ್ಲೀಷ್ ಪ್ರಾಧ್ಯಾಪಕ, ತೀರ್ಥಹಳ್ಳಿ ವಾಗ್ದೇವಿ ಬಿ.ಎಡ್ ಕಾಲೇಜು ಮಾಲೀಕರಾಗಿ ಸೇವೆ ಸಲ್ಲಿಸುತ್ತಿದ್ದ ಡಾ‌. ಕೆ. ಕರುಣಾಕರ್ (64) ಇಂದು ಮುಂಜಾನೆ 6:30ಕ್ಕೆ ನಿಧನ ಹೊಂದಿದ್ದಾರೆ.

WhatsApp Group Join Now
Telegram Group Join Now
Instagram Group Join Now

ಮೃತರಿಗೆ ಪತ್ನಿ, ಇಬ್ಬರು ಪುತ್ರರಿದ್ದಾರೆ. ಮೃತರ ಅಂತ್ಯಕ್ರಿಯೆ ಇಂದು ಸಂಜೆ ಹೊಸನಗರ ತಾಲ್ಲೂಕಿನ ಹುಂಚ ಗ್ರಾಮದಲ್ಲಿ ವೀರಶೈವ ಸಂಪ್ರದಾಯದಂತೆ ಹಿಂದೂ ರುದ್ರಭೂಮಿಯಲ್ಲಿ ಜರುಗಲಿದೆ‌.

ಸಂತಾಪ :

ಕರುಣಾಕರ್ ನಿಧನದ ಸುದ್ಧಿ ತಿಳಿದ ತಕ್ಷಣ ಹೊಸನಗರ ಕೊಡಚಾದ್ರಿ ಕಾಲೇಜ್ ಪ್ರಾಂಶುಪಾಲ ಉಮೇಶ್, ಗ್ರಂಥಪಾಲಕ ಲೋಕೇಶ್, ನಿವೃತ್ತ ಪ್ರಾಂಶುಪಾಲ ಮಾರ್ಷಲ್ ಶರಾಮ್ ಹಾಗೂ ಕೊಡಚಾದ್ರಿ ಕಾಲೇಜಿನ ಉಪನ್ಯಾಸಕ ವೃಂದ ಮೃತರ ಮನೆಗೆ ತೆರಳಿ ಸಂತಾಪ ಸೂಚಿಸುವುದರ ಜೊತೆಗೆ ಮೃತರ ಕುಟುಂಬಕ್ಕೆ ಸಂತ್ವಾನ ಹೇಳಿದರು.

Author Profile

Mahesh Hindlemane
Mahesh Hindlemane
ಅವರು MalnadTimes.com ನ ಸಂಪಾದಕರಾಗಿ ಸೇವೆ ಸಲ್ಲಿಸುತ್ತಿದ್ದಾರೆ. ಸ್ಥಳೀಯ ಪತ್ರಿಕೋದ್ಯಮದ ಮೇಲಿನ ನಿಷ್ಠೆ ಮತ್ತು ಸಾಮಾಜಿಕ ಜವಾಬ್ದಾರಿಯೊಂದಿಗೆ, ಅವರು ಮಲ್ನಾಡು ಪ್ರದೇಶದ ಜನಜೀವನ, ಪರಿಸರ, ಕೃಷಿ, ಶಿಕ್ಷಣ ಮತ್ತು ಅಭಿವೃದ್ಧಿ ಸಂಬಂಧಿತ ವಿಷಯಗಳನ್ನು ಪ್ರಾಮಾಣಿಕವಾಗಿ ಹಾಗೂ ನಿರಂತರವಾಗಿ ಹಂಚಿಕೊಂಡು ಬರುತ್ತಿದ್ದಾರೆ. ನಿಖರತೆ, ನೈತಿಕತೆ ಮತ್ತು ಸಾರ್ವಜನಿಕ ಹಿತಚಿಂತನೆಯಾದರೂ ಅವರ ಸಂಪಾದಕೀಯ ನಿಲುವುಗಳ ಹತ್ತಿರ ಇರುತ್ತದೆ. Malnad Times ನ್ನು ವಿಶ್ವಾಸಾರ್ಹ ಸುದ್ದಿಮೂಲವಾಗಿಸಲು ಅವರು ನಿರಂತರ ಶ್ರಮಿಸುತ್ತಿದ್ದಾರೆ.

Leave a Comment