ರಿಪ್ಪನ್ಪೇಟೆ ; ಇಲ್ಲಿನ ಬಸ್ ನಿಲ್ದಾಣದಲ್ಲಿ ವ್ಯಕ್ತಿಯೋರ್ವ ಕುಳಿತಲ್ಲಿಯೇ ಸಾವನ್ನಪ್ಪಿರುವ ಘಟನೆ ನಡೆದಿದೆ.
ವಿನಾಯಕ ವೃತ್ತದ ಬಸ್ ನಿಲ್ದಾಣದಲ್ಲಿ ಕೆದಲುಗುಡ್ಡೆ ಗ್ರಾಮದ ಷಣ್ಮುಖಪ್ಪ (50) ಹೃದಯಾಘಾತದಿಂದ ಮೃತ ಪಟ್ಟಿರಬಹುದೆಂದು ಹೇಳಲಾಗಿದೆ.
ಮೃತ ವ್ಯಕ್ತಿ ತೀವ್ರ ಮದ್ಯ ವ್ಯಸನಿಯಾಗಿದ್ದು ಕಳೆದೆರಡು ದಿನಗಳಿಂದ ಮನೆಗೆ ತೆರಳದೇ ಬಸ್ ನಿಲ್ದಾಣದಲ್ಲಿಯೇ ತಂಗಿದ್ದ ಎನ್ನಲಾಗಿದೆ.
ಈ ಸುದ್ದಿ ಹರಡುತ್ತಿದ್ದಂತೆ ರಿಪ್ಪನ್ಪೇಟೆ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಮುಂದಿನ ಕ್ರಮ ಕೈಗೊಂಡಿದ್ದಾರೆ.

ಮಲೆನಾಡಿನ ಹೆಬ್ಬಾಗಿಲು ಶಿವಮೊಗ್ಗದ ಸ್ಥಳೀಯ ನ್ಯೂಸ್ ವೆಬ್ಸೈಟ್ಗಳಲ್ಲಿ ಪ್ರತಿನಿಧಿಯಾಗಿ ವೃತ್ತಿ ಜೀವನ ಪ್ರಾರಂಭ. ಪತ್ರಿಕೋದ್ಯಮದಲ್ಲಿ 7 ವರ್ಷಗಳ ಅನುಭವ. ಜಿಲ್ಲಾ ಮಟ್ಟದ ದಿನಪತ್ರಿಕೆಗಳಲ್ಲಿ ಹಾಗೂ ವೆಬ್ಸೈಟ್ಗಳಲ್ಲಿ ಮಲೆನಾಡಿಗೆ ಸಂಬಂಧಿಸಿದ ವಿಷಯಗಳ ಲೇಖನಗಳನ್ನು ಬರೆದಿದ್ದೇನೆ. ಪ್ರಸ್ತುತ ‘ಮಲ್ನಾಡ್ ಟೈಮ್ಸ್’ ಡಿಜಿಟಲ್ ನಲ್ಲಿ ಸಂಪಾದಕನಾಗಿ ಮುಂದುವರೆದಿದ್ದೇನೆ.





