Crime News

ತೆಂಗಿನ ಸಸಿಗಳನ್ನು ಕಡಿದು ವಿಕೃತಿ ಮೆರೆದ ಕಿಡಿಗೇಡಿಗಳು, ದಾಖಲಾಯ್ತು ದೂರು

Ripponpete | ಕಿಡಿಗೇಡಿಗಳು ರಾತ್ರೋರಾತ್ರಿ 10ಕ್ಕೂ ಹೆಚ್ಚು ತೆಂಗಿನ ಗಿಡಗಳನ್ನು (Cocoanut) ಕಡಿದು ವಿಕೃತಿ ಮೆರೆದ ಘಟನೆ ಶಿವಮೊಗ್ಗ (Shivamogga) ಜಿಲ್ಲೆಯ ಹೊಸನಗರ (Hosanagara) ತಾಲ್ಲೂಕಿನ ಹೆದ್ದಾರಿಪುರ (Heddaripura) ಗ್ರಾ.ಪಂ. ವ್ಯಾಪ್ತಿಯ ವಡಾಹೊಸಹಳ್ಳಿ (Vadahosalli) ಗ್ರಾಮದಲ್ಲಿ ನಡೆದಿದೆ.

WhatsApp Group Join Now
Telegram Group Join Now
Instagram Group Join Now
📢 Stay Updated! Join our WhatsApp Channel Now →

ಲಕ್ಷ್ಮಮ್ಮ ಎಂಬುವರಿಗೆ ಸೇರಿದ ತೋಟದಲ್ಲಿ 10ಕ್ಕೂ ಹೆಚ್ಚು ತೆಂಗಿನ ಗಿಡಗಳನ್ನು ಕಿಡಿಗೇಡಿಗಳು ಕಡಿದು ಹಾಕಿದ್ದು ಈ ಘಟನೆಗೆ ಸಂಬಂಧಿಸಿದಂತೆ ತೋಟದ ಮಾಲೀಕರು ರಿಪ್ಪನ್‌ಪೇಟೆ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ.

ವಡಾಹೊಸಹಳ್ಳಿ ಗ್ರಾಮದಲ್ಲಿರುವ ಲಕ್ಷ್ಮಮ್ಮ ಕೋಂ ಗೋಪಾಲ ರವರ ತೋಟದ ಮಧ್ಯೆ ಮತ್ತು ಅಂಚುಗಳಲ್ಲಿ ತೆಂಗಿನ ಮರಗಳನ್ನು ಕಡಿಯಲಾಗಿದೆ. ತೋಟದ ಅಂಚಿನಲ್ಲಿ ಮನೆ ಇದ್ದು ಬುಧವಾರ ತಡರಾತ್ರಿ ಈ ಕೃತ್ಯ ನಡೆದಿರುವ ಶಂಕೆ ವ್ಯಕ್ತವಾಗಿದೆ.

ವಡಾಹೊಸಳ್ಳಿ ಗ್ರಾಮದ ಸ.ನಂ.28ರಲ್ಲಿ 1.20 ಎಕರೆ ಜಮೀನನ್ನು ಸುಮಾರು ವರ್ಷಗಳಿಂದ ಬಗ‌ಹುಕುಂ ಸಾಗುವಳಿ ಮಾಡುತ್ತಿರುವ ಲಕ್ಷ್ಮಮ್ಮ ಈ ಜಮೀನಿಗೆ ಸುತ್ತಲು ಕಲ್ಲು ಕಂಬದ ಬೇಲಿ ನಿರ್ಮಿಸಿದ್ದಾರೆ. ಜಮೀನಿನ ಮಂಜೂರಾತಿಗಾಗಿ ಈ ಹಿಂದೆಯೇ ಫಾರಂ ನಂ. 53ಯಡಿ ಅರ್ಜಿ ಸಲ್ಲಿಸಿದ್ದಾರೆ.

ಮೇ 29 ರಂದು ಮಧ್ಯರಾತ್ರಿ ಸುಮಾರು 2-00 ಗಂಟೆ ಸುಮಾರಿಗೆ ಕಿಡಿಗೇಡಿಗಳು ಈ ಕೃತ್ಯವೆಸಗಿರುವ ಶಂಕೆ ವ್ಯಕ್ತವಾಗಿದೆ.ಈ ಬಗ್ಗೆ ಅದೇ ಗ್ರಾಮದ ಅನುಮಾನಾಸ್ಪದ ಐವರು ವ್ಯಕ್ತಿಗಳ ಮೇಲೆ ತೋಟದ ಮಾಲೀಕರು ದೂರು ನೀಡಿದ್ದಾರೆ.

Adike Price 30 ಮೇ 2024 | ರಾಜ್ಯದ ಪ್ರಮುಖ ಮಾರುಕಟ್ಟೆಗಳಲ್ಲಿ ಇಂದಿನ ಅಡಿಕೆ ರೇಟ್ ಎಷ್ಟಿದೆ ?

ಮಾಹಿತಿ ಮತ್ತು ಮೂಲ: ಈ ವರದಿಯ ಮಾಹಿತಿ ವರದಿಗಾರರು, ಅಧಿಕೃತ ಪ್ರಕಟಣೆಗಳು ಅಥವಾ ಸ್ಥಳದಲ್ಲಿನ ವಿಶ್ವಾಸಾರ್ಹ ಮೂಲಗಳಿಂದ ಪರಿಶೀಲಿಸಲಾಗಿದೆ.

Mahesh Hindlemane

ಮಲೆನಾಡಿನ ಹೆಬ್ಬಾಗಿಲು ಶಿವಮೊಗ್ಗದ ಸ್ಥಳೀಯ ನ್ಯೂಸ್ ವೆಬ್‌ಸೈಟ್‌ಗಳಲ್ಲಿ ಪ್ರತಿನಿಧಿಯಾಗಿ ವೃತ್ತಿ ಜೀವನ ಪ್ರಾರಂಭ. ಪತ್ರಿಕೋದ್ಯಮದಲ್ಲಿ 8 ವರ್ಷಗಳ ಅನುಭವ. ಜಿಲ್ಲಾ ಮಟ್ಟದ ದಿನಪತ್ರಿಕೆಗಳಲ್ಲಿ ಹಾಗೂ ವೆಬ್‌ಸೈಟ್‌ಗಳಲ್ಲಿ ಮಲೆನಾಡಿಗೆ ಸಂಬಂಧಿಸಿದ ವಿಷಯಗಳ ಲೇಖನಗಳನ್ನು ಬರೆದಿದ್ದೇನೆ. ಪ್ರಸ್ತುತ <strong>'ಮಲ್ನಾಡ್ ಟೈಮ್ಸ್'</strong> ಡಿಜಿಟಲ್ ನಲ್ಲಿ ಸಂಪಾದಕನಾಗಿ ಮುಂದುವರೆದಿದ್ದೇನೆ. <a href="mailto:[email protected]">[email protected]</a>