RIPPONPETE ; ಇಲ್ಲಿನ ಬಿಎಸ್ಎನ್ಎಲ್ ಕಛೇರಿ ಸರಿಯಾದ ನಿರ್ವಹಣೆಯಿಲ್ಲದೇ ದೂರವಾಣಿ ಗ್ರಾಹಕರು ಪಡಬಾರದ ಕಷ್ಟ ಪಡುವಂತಾಗಿದೆ.
ಕೇಂದ್ರ ಸರ್ಕಾರದ ಖಾಸಗೀಕರಣದಿಂದಾಗಿ ಇಲ್ಲಿನ ಸುಸಜ್ಜಿತ ಕಟ್ಟಡ ಮತ್ತು ಕಟ್ಟಡದಲ್ಲಿನ ಬೆಲೆಬಾಳುವಂತಹ ಪೀಠೋಪಕರಣಗಳು ತುಕ್ಕು ಹಿಡಿಯವಂತಾಗಿ ಗ್ರಾಹಕರಿಗೆ ಸೇವಾ ಸೌಲಭ್ಯಗಳಿಲ್ಲದೆ ವಂಚಿತರನ್ನಾಗಿಸಿದೆ.
ಕಳೆದ ಒಂದು ತಿಂಗಳಿಂದ ನೆಟ್ ಇಲ್ಲದೆ ಸರ್ವರ್ ಸಮಸ್ಯೆ ಉಂಟಾಗಿದ್ದು ಸಾಕಷ್ಟು ಗ್ರಾಹಕರು ಹಿಡಿ ಶಾಪ ಹಾಕುವಂತಾಗಿದ್ದು ಪಡಿತರ ಬ್ಯಾಂಕ್ ಖಾಸಗಿ ಹಣಕಾಸು ಸಂಸ್ಥೆಯಲ್ಲಿ ಸರ್ವರ್ ಸಮಸ್ಯೆಯಿಂದಾಗಿ ಬಾಂಡ್ ಪೇಪರ್ ಹಾಗೂ ಗ್ರಾಮ ಒನ್ನಲ್ಲಿ ಸಹ ಅಗತ್ಯ ದಾಖಲೆ ಪತ್ರಕ್ಕಾಗಿ ನಿತ್ಯ ನಾಗರೀಕರು ಅಲೆಯುವಂತಾಗಿದೆ. ಈ ಬಗ್ಗೆ ಕಛೇರಿಯ ಅಧಿಕಾರಿಗಳಿಗೆ ದೂರು ಕೊಡಲು ಕಛೇರಿಯೇ ಬಂದ್ ಆಗಿ ನಾಲ್ಕೈದು ವರ್ಷಗಳಾಗಿ ಹೋಗಿದೆ. ಗ್ರಾಮೀಣ ರೈತ ನಾಗರೀಕರು ಹಾಗೂ ವಿದ್ಯಾರ್ಥಿಗಳ ಸಮಸ್ಯೆಯನ್ನು ಯಾರ ಬಳಿ ಹೇಳಿಕೊಳ್ಳದ ಸ್ಥಿತಿ ನಿರ್ಮಾಣವಾಗಿದೆ.

ಜನಪ್ರತಿನಿಧಿಗಳಲ್ಲಿ ಹೇಳಿಕೊಳ್ಳಲು ಹೋದರೆ ಕಿವಿಯ ಮೇಲೆ ಹಾಕಿಕೊಳ್ಳದೆ ಹಾಗೆಯೇ ಇಲ್ಲದ ಸಬೂಬು ಹೇಳಿಕೊಂಡು ಹೋಗುತ್ತಾರೆ. ಕಛೇರಿಯ ಬಳಿ ಪ್ರತಿಭಟನೆ ಮಾಡೋಣ ಅಂದರೆ ಮುಚ್ಚಿದ ಗೇಟ್ ಓಪನ್ ಮಾಡದಂತಾಗಿದೆ.
ಒಟ್ಟಾರೆಯಾಗಿ ಗ್ರಾಹಕರಿಗಿಲ್ಲದ ದೂರವಾಣಿ ಸೌಲಭ್ಯ ಇನ್ನಾರಿಗೆ ಬೇಕು ಎಂಬಂತಾಗಿದೆ.
ಒಂದು ಕಾಲದಲ್ಲಿ ಬಿ.ಎಸ್.ಎನ್.ಎಲ್ ನಿಸ್ತಂತು ಫೋನ್ಗೆ ಗ್ರಾಹಕರು ಮುಗಿಬೀಳುತ್ತಿದ್ದು ಮೊಬೈಲ್ ಫೋನ್ ಬಂದ ಮೇಲೆ ಇಲ್ಲದ ಸಮಸ್ಯೆಯಿಂದಾಗಿ ಗ್ರಾಹಕರು ಹೈರಾಣಾಗಿ ಹೋಗಿದ್ದಾರೆ.
ಇನ್ನಾದರೂ ಬಿ.ಎಸ್.ಎನ್.ಎಲ್. ಅಧಿಕಾರಿಗಳು ಇತ್ತ ಗಮನಹರಿಸಿ ಗ್ರಾಹಕರ ಸಮಸ್ಯೆಗೆ ಪರಿಹಾರ ಕಲ್ಪಿಸುವರೇ ಕಾದು ನೋಡಬೇಕಾಗಿದೆ.
Author Profile

- ಅವರು MalnadTimes.com ನ ಸಂಪಾದಕರಾಗಿ ಸೇವೆ ಸಲ್ಲಿಸುತ್ತಿದ್ದಾರೆ. ಸ್ಥಳೀಯ ಪತ್ರಿಕೋದ್ಯಮದ ಮೇಲಿನ ನಿಷ್ಠೆ ಮತ್ತು ಸಾಮಾಜಿಕ ಜವಾಬ್ದಾರಿಯೊಂದಿಗೆ, ಅವರು ಮಲ್ನಾಡು ಪ್ರದೇಶದ ಜನಜೀವನ, ಪರಿಸರ, ಕೃಷಿ, ಶಿಕ್ಷಣ ಮತ್ತು ಅಭಿವೃದ್ಧಿ ಸಂಬಂಧಿತ ವಿಷಯಗಳನ್ನು ಪ್ರಾಮಾಣಿಕವಾಗಿ ಹಾಗೂ ನಿರಂತರವಾಗಿ ಹಂಚಿಕೊಂಡು ಬರುತ್ತಿದ್ದಾರೆ. ನಿಖರತೆ, ನೈತಿಕತೆ ಮತ್ತು ಸಾರ್ವಜನಿಕ ಹಿತಚಿಂತನೆಯಾದರೂ ಅವರ ಸಂಪಾದಕೀಯ ನಿಲುವುಗಳ ಹತ್ತಿರ ಇರುತ್ತದೆ. Malnad Times ನ್ನು ವಿಶ್ವಾಸಾರ್ಹ ಸುದ್ದಿಮೂಲವಾಗಿಸಲು ಅವರು ನಿರಂತರ ಶ್ರಮಿಸುತ್ತಿದ್ದಾರೆ.
Latest entries
RipponpeteJune 4, 2025ಅಮ್ಮನಘಟ್ಟ ನೂತನ ಶಿಲಾಮಯ ದೇವಾಲಯ ಲೋಕಾರ್ಪಣೆ ; ದೇವಸ್ಥಾನದಲ್ಲಿ ಜಾತಿ ಭೇದ ಭಾವನೆ ಬೇಡ
ShivamoggaJune 3, 2025ಸಂಪತ್ತಿನೊಂದಿಗೆ ಒಂದಿಷ್ಟಾದರೂ ಧರ್ಮ ಪ್ರಜ್ಞೆ ಅವಶ್ಯಕ ; ರಂಭಾಪುರಿ ಜಗದ್ಗುರುಗಳು
RipponpeteJune 3, 2025ಅಮ್ಮನಘಟ್ಟ ಶ್ರೀಜೇನುಕಲ್ಲಮ್ಮ ದೇವಸ್ಥಾನದ 108 ಮೆಟ್ಟಿಲುಗಳ ನಿರ್ಮಾಣಕ್ಕೆ ಸಂಸದ ಬಿ.ವೈ. ರಾಘವೇಂದ್ರ ಶಿಲನ್ಯಾಸ
RipponpeteJune 2, 2025ಕೊಪ್ಪಳ ಗವಿಸಿದ್ದೇಶ್ವರ ಮಠದ ಶ್ರೀಗಳು ಶಿವಮೊಗ್ಗ ಬೆಕ್ಕಿನಕಲ್ಮಠಕ್ಕೆ ಭೇಟಿ