ಪತ್ನಿ ಮೇಲೆ ಮಾರಣಾಂತಿಕ ಹಲ್ಲೆ ನಡೆಸಿ ನಾಪತ್ತೆಯಾಗಿದ್ದ ಪತಿ ಶವ ನದಿಯಲ್ಲಿ ಪತ್ತೆ !

Written by malnadtimes.com

Updated on:

RIPPONPETE ; ಪತ್ನಿ ಮೇಲೆ ಮಾರಣಾಂತಿಕ ಹಲ್ಲೆ ನಡೆಸಿ ನಾಪತ್ತೆಯಾಗಿದ್ದ ವ್ಯಕ್ತಿಯ ಶವ ನದಿಯಲ್ಲಿ ಪತ್ತೆಯಾದ ಘಟನೆ ವರದಿಯಾಗಿದೆ.

WhatsApp Group Join Now
Telegram Group Join Now
Instagram Group Join Now

ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲೂಕಿನ ಕೋಡೂರು ಗ್ರಾಪಂ ವ್ಯಾಪ್ತಿಯ ಸುರುಳಿಕೊಪ್ಪದ ಸದಾನಂದ ಭಟ್ ಆತ್ಮಹತ್ಯೆಗೆ ಶರಣಾದ ವ್ಯಕ್ತಿ. ಈತ ತನ್ನ ಪತ್ನಿ ಮೇಲೆ ಮಾರಣಾಂತಿಕ ಹಲ್ಲೆ ನಡೆಸಿ ನಂತರ ಪಟಗುಪ್ಪ ಸೇತುವೆ ಮೇಲೆ ಕಾರು ನಿಲ್ಲಿಸಿ ನದಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾನೆ.

ಘಟನಾ ವಿವರ :

ಸುರುಳಿಕೊಪ್ಪ ಗ್ರಾಮದ ಸದಾನಂದ ಭಟ್ ಮತ್ತು ಆತನ ಪತ್ನಿ ಸಬೀತಾ ನಡುವೆ ಗುರುವಾರ ಕೌಟುಂಬಿಕ ಕಾರಣಗಳಿಗಾಗಿ ಜಗಳ ನಡೆದಿದೆ. ಜಗಳ ವಿಕೋಪಕ್ಕೆ ತಿರುಗಿ ಪತ್ನಿ ಸಬೀತಾ ಮೇಲೆ ಪತಿ ಮಾರಣಾಂತಿಕ ಹಲ್ಲೆ ನಡೆಸಿದ್ದಾನೆ. ಹಲ್ಲೆಯಿಂದ ಗಂಭೀರ ಗಾಯಗೊಂಡಿದ್ದಾರೆ. ಆಕೆ ಬದುಕುವುದು ಕಷ್ಟ ಎಂದು ತಿಳಿದು ಹೆದರಿದ ಸದಾನಂದ ಭಟ್ ತನ್ನ ಕಾರನ್ನು ಚಲಾಯಿಸಿಕೊಂಡು ಹೋಗಿ ಸೇತುವೆ ಮೇಲೆ ಕಾರು ನಿಲ್ಲಿಸಿ ನಾಪತ್ತೆಯಾಗಿದ್ದನು.

ಗಾಯಗೊಂಡ ಸಬೀತಾ ರವರನ್ನು ರಿಪ್ಪನ್‌ಪೇಟೆ ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ಕರೆತಂದು ಪ್ರಾಥಮಿಕ ಚಿಕಿತ್ಸೆ ನೀಡಿ ಹೆಚ್ಚಿನ ಚಿಕಿತ್ಸೆಗೆ ಶಿವಮೊಗ್ಗಕ್ಕೆ ರವಾನಿಸಲಾಗಿದೆ.

ಪಟಗುಪ್ಪ ಸೇತುವೆ

ಈ ಬಗ್ಗೆ ಪ್ರಕರಣ ದಾಖಲಿಸಿಕೊಂಡ ರಿಪ್ಪನ್‌ಪೇಟೆ ಪೊಲೀಸರು ಆರೋಪಿ ಸದಾನಂದ ಭಟ್ ಶೋಧ ನಡೆಸಿದ್ದಾರೆ ಆದರೆ ಆರೋಪಿಯ ಕಾರು ಪಟಗುಪ್ಪ ಸೇತುವೆ ಬಳಿ ದೊರಕಿದ್ದು ಯಾವುದೇ ಸುಳಿವು ಸಿಕ್ಕಿರಲಿಲ್ಲ ನಂತರ ಕಾರನ್ನು ಹೊಸನಗರ ಪೊಲೀಸರು ವಶಪಡಿಸಿಕೊಂಡಿದ್ದರು. ಶುಕ್ರವಾರ ಬೆಳಗ್ಗೆ ಆರೋಪಿ ಸದಾನಂದ ಭಟ್ ಮೃತದೇಹ ಪಟಗುಪ್ಪ ಸೇತುವೆ ಬಳಿಯಲ್ಲಿ ಪತ್ತೆಯಾಗಿದೆ.

ಈ ಘಟನೆಗೆ ಸಂಬಂಧಿಸಿದಂತೆ ರಿಪ್ಪನ್‌ಪೇಟೆ ಹಾಗೂ ಹೊಸನಗರ ಪೊಲೀಸ್ ಠಾಣೆಯಲ್ಲಿ ಎರಡು ಪ್ರತ್ಯೇಕ ಪ್ರಕರಣ ದಾಖಲಾಗಿದೆ.

Leave a Comment