RIPPONPETE ಮಳೆಯ ನಡುವೆಯೂ ವೈಭವದೊಂದಿಗೆ ಜರುಗಿದ ಕೆಂಚನಾಲ ಮಾರಿಕಾಂಬ ದೇವಿ ಜಾತ್ರಾ ಮಹೋತ್ಸವ

Written by Mahesha Hindlemane

Published on:

RIPPONPETE | ಇಂದು ಜರುಗಿದ ಇತಿಹಾಸ ಪ್ರಸಿದ್ದ ಕೆಂಚನಾಲ ಮಾರಿಕಾಂಬ ದೇವಿಯ ಮಳೆಗಾಲದ ಜಾತ್ರಾ ಮಹೋತ್ಸವವು ವೈಭವದೊಂದಿಗೆ ಸಂಪನ್ನಗೊಂಡಿತು.

WhatsApp Group Join Now
Telegram Group Join Now
Instagram Group Join Now
📢 Stay Updated! Join our WhatsApp Channel Now →

ವರ್ಷದಲ್ಲಿ ಎರಡು ಬಾರಿ ಅಂದರೆ ಮಳೆಗಾಲದಲ್ಲಿ ಮಂಗಳವಾರ ಬೇಸಿಗೆಯಲ್ಲಿ ಬುಧವಾರದಂದು ಶ್ರೀ ಮಾರಿಕಾಂಬಾ ದೇವಿ ಜಾತ್ರೆ ಆಚರಿಸುವುದು ಇಲ್ಲಿನ ವಿಶೇಷ.

ಇಂದು ಮುಂಜಾನೆ ಆರು ಗಂಟೆಯಿಂದ ಸಂಜೆ 6 ಗಂಟೆಯವರೆಗೆ ದೇವಿಗೆ ವಿಶೇಷ ಅಲಂಕಾರ ಪೂಜೆ ಮತ್ತು ಮಹಾಮಂಗಳಾರತಿ ನಡೆದು ನಂತರ ಕೋಳಿ, ಕುರಿಗಳ ಹರಕೆ ಬಲಿ ಪೂಜೆ ಜರುಗುತ್ತದೆ.

ಜಿಲ್ಲೆ, ಹೊರ ಜಿಲ್ಲೆ, ಸುತ್ತಮುತ್ತಲ ಗ್ರಾಮಗಳಿಂದ ಆಗಮಿಸಿದ ಸಾವಿರಾರು ಭಕ್ತರು ಸರತಿ ಸಾಲಿನಲ್ಲಿ ನಿಂತು ದೇವಿಗೆ ಹಣ್ಣು-ಕಾಯಿ ಸಮರ್ಪಿಸಿ ದರ್ಶನಾಶೀರ್ವಾದ ಪಡೆದರು.

ಬೇಡಿದ ವರ ಕರುಣಿಸುವ ಮಾರಿಕಾಂಬೆ :

ವಿವಾಹವಾಗದವರು ಮತ್ತು ಸಂತಾನ ಭಾಗ್ಯ ಹೀಗೆ ಹತ್ತು ಹಲವು ಬೇಡಿಕೆಯನ್ನು ದೇವಿಯಲ್ಲಿಟ್ಟು ಪ್ರಾರ್ಥಿಸಿದರೆ ಕೇವಲ ಅರು ತಿಂಗಳಲ್ಲಿ ಇಷ್ಟಾರ್ಥ ನೆರವೇರುವುದು ಎಂಬ ನಂಬಿಕೆಯಿಂದ ಭಕ್ತರ ಸಮೂಹ ವರ್ಷದಿಂದ ವರ್ಷಕ್ಕೆ ಹೆಚ್ಚು ಆಕರ್ಷಿತವಾಗಿದ್ದು ಜಾತ್ರಾ ಮಹೋತ್ಸವದಲ್ಲಿ ಹರಕೆ ಸಮರ್ಪಿಸಲು ಭಕ್ತರ ದಂಡು ತಂಡೋಪ-ತಂಡವಾಗಿ ಹರಿದು ಬರುತ್ತದೆ.

ಜಿಲ್ಲೆ, ಹೊರ ಜಿಲ್ಲೆಯಿಂದ ಸುಮಾರು 20 ಸಹಸ್ರಕ್ಕೂ ಅಧಿಕ ಭಕ್ತರು ಜಾತ್ರಾ ಮಹೋತ್ಸವದಲ್ಲಿ ಪಾಲ್ಗೊಂಡು ದೇವಿಯ ದರ್ಶನ ಪಡೆದರು.

ರಕ್ಷಣಾ ಇಲಾಖೆಯಿಂದ ಬಂದೋಬಸ್ತ್ ಏರ್ಪಡಿಸಲಾಗಿತ್ತು. ದೇವಾಲಯ ಸಮಿತಿ ಇದ್ದರು.

Leave a Comment