Ripponpete

ಆನೆ ದಾಳಿ, ಮೃತ ವ್ಯಕ್ತಿ ಕುಟುಂಬಕ್ಕೆ 15 ಲಕ್ಷ ರೂ. ಪರಿಹಾರದ ಚೆಕ್ ವಿತರಣೆ

RIPPONPETE | ಅರಸಾಳು ಗ್ರಾಮ ಪಂಚಾಯತಿ ವ್ಯಾಪ್ತಿಯ ಬಸವಾಪುರ ಗ್ರಾಮದ ರೈತ ತಿಮ್ಮಪ್ಪ ಕಳೆದ ಮೂರು ತಿಂಗಳ ಹಿಂದೆ ದರಗೆಲೆ ತರಲು ಕಾಡಿಗೆ ಹೋದಾಗ ಕಾಡಾನೆ ತುಳಿತಕ್ಕೆ ಒಳಗಾಗಿ ಮೃತಪಟ್ಟಿದ್ದರು.

WhatsApp Group Join Now
Telegram Group Join Now
Instagram Group Join Now

ಧರೆ ಕುಸಿತದಿಂದ ಸಂಪರ್ಕ ಕಡಿತಗೊಳ್ಳುವ ಆತಂಕ, ಘಟನಾ ಸ್ಥಳಕ್ಕೆ ಮಾಜಿ ಸಚಿವ ಕಿಮ್ಮನೆ ಭೇಟಿ, ಪರಿಶೀಲನೆ

📢 Stay Updated! Join our WhatsApp Channel Now →

ಸಾಗರ ವಿಧಾನಸಭಾ ಕ್ಷೇತ್ರದ ಶಾಸಕ ಬೇಳೂರು ಗೋಪಾಲಕೃಷ್ಣ ಗುರುವಾರ ನೊಂದ ಕುಟುಂಬದವರ ಮನೆಗೆ ತೆರಳಿ ರಾಜ್ಯ ಸರ್ಕಾರದ ವತಿಯಿಂದ 15 ಲಕ್ಷ ರೂ. ಪರಿಹಾರದ ಚೆಕ್ ವಿತರಿಸಿದರು.

ಈ ಸಂದರ್ಭದಲ್ಲಿ ಮಾತನಾಡಿದ ಅವರು, ವನ್ಯ ಪ್ರಾಣಿಗಳು ಹಾಗೂ ಮಾನವ ನಡುವಿನ ಸಂಘರ್ಷವನ್ನು ತಡೆಯುವ ನಿಟ್ಟಿನಲ್ಲಿ ವಿಶೇಷ ಕಾರ್ಯ ಯೋಜನೆಯನ್ನು ಹಮ್ಮಿಕೊಳ್ಳುವ ಅಗತ್ಯತೆ ಯಾವುದೇ ಸರ್ಕಾರವಿದ್ದರೂ ತುರ್ತಾಗಿ ಆಗಬೇಕಿದೆ ಎಂದರು.

Malnad Times App ಡೌನ್‌ಲೋಡ್ ಮಾಡಿಶಿವಮೊಗ್ಗ ಮತ್ತು ಮಲೆನಾಡಿನ ಸುದ್ದಿಗಳನ್ನು ತಕ್ಷಣ ಪಡೆಯಿರಿ.
GET IT ONGoogle Play
ಲೇಖನವನ್ನು ಮುಂದುವರಿಸಿ ಓದಿ

ಈ ಸಂದರ್ಭದಲ್ಲಿ ತಹಶೀಲ್ದಾರ್ ರಶ್ಮಿ ಹಾಲೇಶ್, ಭೂ ಕಂದಾಯ ಇಲಾಖೆ ಅಧಿಕಾರಿಗಳು, ಡಿಎಫ್ಒ ಹನುಮಂತಪ್ಪ, ಅರಣ್ಯ ಇಲಾಖೆ ಅಧಿಕಾರಿಗಳು, ಸ್ಥಳೀಯ ಗ್ರಾಮ ಪಂಚಾಯತಿ ಜನಪ್ರತಿನಿಧಿಗಳು ಮತ್ತು ಬಸವಾಪುರ ಗ್ರಾಮಸ್ಥರು ಹಾಜರಿದ್ದರು.

ಅಬ್ಬರ ಮುಗಿಸಿದ ‘ಪುಷ್ಯ’, ಲಿಂಗನಮಕ್ಕಿ ಜಲಾಶಯ ಭರ್ತಿಗೆ 5 ಅಡಿ ನೀರು ಬಾಕಿ !

ಮಾಹಿತಿ ಮತ್ತು ಮೂಲ: ಈ ವರದಿಯ ಮಾಹಿತಿ ವರದಿಗಾರರು, ಅಧಿಕೃತ ಪ್ರಕಟಣೆಗಳು ಅಥವಾ ಸ್ಥಳದಲ್ಲಿನ ವಿಶ್ವಾಸಾರ್ಹ ಮೂಲಗಳಿಂದ ಪರಿಶೀಲಿಸಲಾಗಿದೆ.

Mahesh Hindlemane

ಮಲೆನಾಡಿನ ಹೆಬ್ಬಾಗಿಲು ಶಿವಮೊಗ್ಗದ ಸ್ಥಳೀಯ ನ್ಯೂಸ್ ವೆಬ್‌ಸೈಟ್‌ಗಳಲ್ಲಿ ಪ್ರತಿನಿಧಿಯಾಗಿ ವೃತ್ತಿ ಜೀವನ ಪ್ರಾರಂಭ. ಪತ್ರಿಕೋದ್ಯಮದಲ್ಲಿ 8 ವರ್ಷಗಳ ಅನುಭವ. ಜಿಲ್ಲಾ ಮಟ್ಟದ ದಿನಪತ್ರಿಕೆಗಳಲ್ಲಿ ಹಾಗೂ ವೆಬ್‌ಸೈಟ್‌ಗಳಲ್ಲಿ ಮಲೆನಾಡಿಗೆ ಸಂಬಂಧಿಸಿದ ವಿಷಯಗಳ ಲೇಖನಗಳನ್ನು ಬರೆದಿದ್ದೇನೆ. ಪ್ರಸ್ತುತ <strong>'ಮಲ್ನಾಡ್ ಟೈಮ್ಸ್'</strong> ಡಿಜಿಟಲ್ ನಲ್ಲಿ ಸಂಪಾದಕನಾಗಿ ಮುಂದುವರೆದಿದ್ದೇನೆ. <a href="mailto:[email protected]">[email protected]</a>