RIPPONPETE | ಇಲ್ಲಿನ ಗ್ರಾಮ ಪಂಚಾಯತಿ ವ್ಯಾಪ್ತಿಯಲ್ಲಿ ಸೊಳ್ಳೆಗಳ ಕಾಟದಿಂದಾಗಿ ಡೆಂಘೀ (Dengue) ರೋಗದ ಉಲ್ಬಣ ಹೆಚ್ಚಾಗಿದ್ದು ಇದರಿಂದಾಗಿ ನಾಗರೀಕರಲ್ಲಿ ತೀವ್ರ ಆತಂಕಕ್ಕೆ ಕಾರಣವಾಗಿದೆ. ರೋಗ ನಿಯಂತ್ರಣಕ್ಕೆ ಫಾಗಿಂಗ್ ಮಾಡಲು ಮುಂದಾಗಿದೆ.
ಕಳೆದ 15-20 ದಿನಗಳಿಂದ ರಿಪ್ಪನ್ಪೇಟೆ ಸುತ್ತಮುತ್ತ ಡೆಂಘೀ ಪ್ರಕರಣಗಳು ಹೆಚ್ಚಾಗಿ ಕಾಣಿಸಿಕೊಂಡು ಜ್ವರದ ಬಾಧೆಯಲ್ಲಿ ಜನತೆ ಹೈರಾಣರಾಗಿದ್ದಾರೆ. ಇದನ್ನು ಮನಗಂಡ ಗ್ರಾಮಾಡಳಿತ ಭಾನುವಾರ ಸಂಜೆ ಡೆಂಘೀ ರೋಗ ಹರಡುವಿಕೆಗೆ ಕಾರಣವಾದ ಸೊಳ್ಳೆ ಸಂತತಿಗಳನ್ನು ನಿಯಂತ್ರಿಸುವ ನಿಟ್ಟಿನಲ್ಲಿ ಪಟ್ಟಣದ ಪ್ರಮುಖ ರಸ್ತೆ ಮತ್ತು ಇತರ ಬೀದಿ, ಬಡಾವಣೆಯಲ್ಲಿ ಫಾಗಿಂಗ್ ಕಾರ್ಯಾಚರಣೆ ನಡೆಸಿದರು. ಈ ಮೂಲಕ ಸಾಂಕ್ರಾಮಿಕ ರೋಗಗಳ ಹರಡುವಿಕೆಯನ್ನು ನಿಯಂತ್ರಿಸಲು ಕ್ರಮ ಕೈಗೊಂಡಿದ್ದು ಫಾಗಿಂಗ್ ಮೂಲಕ ಒಂದು ಹಂತದವರೆಗೆ ಡೆಂಘೀ, ಮಲೇರಿಯಾ ಬಾಧಿಸಿದ ರೋಗಿಗಳಿಗೆ ಕಚ್ಚಿದ ಸೊಳ್ಳೆಗಳನ್ನು ನಾಶಡಿಸಲು ಸಾಧ್ಯವಾಗುವುದೆಂದು ಗ್ರಾಮ ಪಂಚಾಯಿತಿ ಅಭಿವೃದ್ಧಿ ಆಧಿಕಾರಿ ಮಧುಸೂದನ್ ಮಾಧ್ಯಮದವರಿಗೆ ವಿವರಿಸಿದರು.

ರಿಪ್ಪನ್ಪೇಟೆಯ ಹೊಸನಗರ – ಸಾಗರ ರಸ್ತೆಯ ಮಸೀದಿ ಬಡಾವಣೆಯಲ್ಲಿ ಹೋಟೆಲ್ ಮನೆಗಳ ಕಲುಷಿತ ನೀರು ಚರಂಡಿಗೆ ಬರುತ್ತಿದ್ದು ಇದರಿಂದಾಗಿ ನೀರು ಸರಾಗವಾಗಿ ಹರಿದು ಹೋಗದೆ ಇರುವುದರಿಂದಾಗಿ ನಿವಾಸಿಗಳು ಹೈರಾಣಾಗಿದ್ದಾರೆ. ಈ ಬಗ್ಗೆ ಹೋಟೆಲ್ ಮತ್ತು ರೆಸ್ಟೋರೆಂಟ್ ಹಾಗೂ ಮನೆಯವರಿಗೂ ತಿಳುವಳಿಕೆ ನೋಟಿಸ್ ನೀಡುವ ಮೂಲಕ ಕಲುಷಿತ ನೀರನ್ನು ಇಂಗು ಗುಂಡಿಗೆ ಹೋಗುವಂತೆ ಮಾಡಿಕೊಳ್ಳಲು ಸೂಚನೆ ನೀಡಲಾಗಿದೆ. ಆದರೂ ಪಂಚಾಯಿತಿ ಆದೇಶವನ್ನು ಉಲ್ಲಂಘಿಸಿ ಹಲವರು ತಮ್ಮ ಹೋಟೆಲ್, ಮನೆಯ ಕಲುಷಿತ ನೀರು ಚರಂಡಿಗೆ ಹರಿಬಿಡುತ್ತಿದ್ದಾರೆಂದು ಹೇಳಿ ತಕ್ಷಣ ಇವರ ವಿರುದ್ದ ಕ್ರಮ ಜರುಗಿಸಲಾಗುವುದೆಂದು ಗ್ರಾಮಾಡಳಿತದವರು ಮುಂಜಾಗ್ರತಾ ಕ್ರಮವಾಗಿ ಸ್ವಚ್ಚತಾ ಕಾರ್ಯಕೈಗೊಳ್ಳಲಾಗುತ್ತಿದ್ದರೂ ಕೂಡಾ ಹಲವರು ನಿರ್ಲಕ್ಷ್ಯ ಧೋರಣೆ ಅನುಸರಿಸುತ್ತಿದ್ದಾರೆಂದು ಅಸಮದಾನ ವ್ಯಕ್ತಪಡಿಸಿ ಜಾಗೃತಿ ಮೂಡಿಸುವ ಕೆಲಸವನ್ನು ಸಹ ಮಾಡಲಾಗುತ್ತಿದ್ದು ಸಹಕರಿಸುವಂತೆ ಮನವಿ ಮಾಡಿದ್ದಾರೆ.
ಈ ಸಂದರ್ಭದಲ್ಲಿ ಪಂಚಾಯ್ತಿ ಸಿಬ್ಬಂದಿಗಳಾದ ನಾಗೇಶ್ ಮೊರೆ, ರಾಜೇಶ್, ಸಿಬ್ಬಂದಿವರ್ಗ ಹಾಜರಿದ್ದರು.
Read More
WBCIS | ಶಿವಮೊಗ್ಗ ಜಿಲ್ಲೆಯ ರೈತರೇ ಗಮನಿಸಿ, ಹವಾಮಾನಾಧರಿತ ಬೆಳೆ ವಿಮೆ ನೋಂದಣಿಗೆ ಇದು ಸಕಾಲ !
LPG Gas Price | ಇಂದಿನಿಂದ ಗ್ಯಾಸ್ ಸಿಲಿಂಡರ್ ಬೆಲೆಯಲ್ಲಿ ಭಾರಿ ಇಳಿಕೆ !ಇಲ್ಲಿದೆ ಮಾಹಿತಿ
ಓಮ್ನಿ ಮತ್ತು ಬೈಕ್ ನಡುವೆ ಅಪಘಾತ, ಸವಾರ ಸ್ಥಳದಲ್ಲೇ ಸಾವು !
Author Profile

- ಅವರು MalnadTimes.com ನ ಸಂಪಾದಕರಾಗಿ ಸೇವೆ ಸಲ್ಲಿಸುತ್ತಿದ್ದಾರೆ. ಸ್ಥಳೀಯ ಪತ್ರಿಕೋದ್ಯಮದ ಮೇಲಿನ ನಿಷ್ಠೆ ಮತ್ತು ಸಾಮಾಜಿಕ ಜವಾಬ್ದಾರಿಯೊಂದಿಗೆ, ಅವರು ಮಲ್ನಾಡು ಪ್ರದೇಶದ ಜನಜೀವನ, ಪರಿಸರ, ಕೃಷಿ, ಶಿಕ್ಷಣ ಮತ್ತು ಅಭಿವೃದ್ಧಿ ಸಂಬಂಧಿತ ವಿಷಯಗಳನ್ನು ಪ್ರಾಮಾಣಿಕವಾಗಿ ಹಾಗೂ ನಿರಂತರವಾಗಿ ಹಂಚಿಕೊಂಡು ಬರುತ್ತಿದ್ದಾರೆ. ನಿಖರತೆ, ನೈತಿಕತೆ ಮತ್ತು ಸಾರ್ವಜನಿಕ ಹಿತಚಿಂತನೆಯಾದರೂ ಅವರ ಸಂಪಾದಕೀಯ ನಿಲುವುಗಳ ಹತ್ತಿರ ಇರುತ್ತದೆ. Malnad Times ನ್ನು ವಿಶ್ವಾಸಾರ್ಹ ಸುದ್ದಿಮೂಲವಾಗಿಸಲು ಅವರು ನಿರಂತರ ಶ್ರಮಿಸುತ್ತಿದ್ದಾರೆ.
Latest entries
ShivamoggaJune 3, 2025ಸಂಪತ್ತಿನೊಂದಿಗೆ ಒಂದಿಷ್ಟಾದರೂ ಧರ್ಮ ಪ್ರಜ್ಞೆ ಅವಶ್ಯಕ ; ರಂಭಾಪುರಿ ಜಗದ್ಗುರುಗಳು
RipponpeteJune 3, 2025ಅಮ್ಮನಘಟ್ಟ ಶ್ರೀಜೇನುಕಲ್ಲಮ್ಮ ದೇವಸ್ಥಾನದ 108 ಮೆಟ್ಟಿಲುಗಳ ನಿರ್ಮಾಣಕ್ಕೆ ಸಂಸದ ಬಿ.ವೈ. ರಾಘವೇಂದ್ರ ಶಿಲನ್ಯಾಸ
RipponpeteJune 2, 2025ಕೊಪ್ಪಳ ಗವಿಸಿದ್ದೇಶ್ವರ ಮಠದ ಶ್ರೀಗಳು ಶಿವಮೊಗ್ಗ ಬೆಕ್ಕಿನಕಲ್ಮಠಕ್ಕೆ ಭೇಟಿ
RipponpeteJune 1, 2025ಶ್ರುತಪಂಚಮಿ ಆಚರಣೆ | ಜೈನಧರ್ಮ ಸಿದ್ಧಾಂತಗಳು ಜೀವನ ಮೌಲ್ಯಗಳನ್ನು ವರ್ಧಿಸುತ್ತದೆ ; ಹೊಂಬುಜ ಶ್ರೀಗಳು