ರಿಪ್ಪನ್‌ಪೇಟೆ ಹಿಂದೂ ಮಹಾಸಭಾ ಗಣಪತಿ ತಾವರೆಕೆರೆಯಲ್ಲಿ ಜಲಸ್ತಂಭನ

Written by Mahesha Hindlemane

Published on:

ರಿಪ್ಪನ್‌ಪೇಟೆ ; ಇಲ್ಲಿನ ಕರ್ನಾಟಕ ಪ್ರಾಂತೀಯ ಹಿಂದೂ ರಾಷ್ಟ್ರ ಸೇನಾ ಸಮಿತಿಯವರು ಕಳೆದ 11 ದಿನಗಳ ಕಾಲ ಪ್ರತಿಷ್ಟಾಪಿಸಲಾದ ಗಣಪತಿಮೂರ್ತಿ 19 ಗಂಟೆಗಳ ರಾಜಬೀದಿ ಉತ್ಸವದೊಂದಿಗೆ ಇಂದು ಗವಟೂರಿನ ತಾವರೆಕೆರೆಯಲ್ಲಿ 12:40 ಕ್ಕೆ ಜಲಸ್ತಂಭನಗೊಳಿಸಲಾಯಿತು.

WhatsApp Group Join Now
Telegram Group Join Now
Instagram Group Join Now
📢 Stay Updated! Join our WhatsApp Channel Now →

ಶವಿವಾರ ಸಂಜೆ 5.45 ರಿಂದ ವಿಸರ್ಜನಾ ಮೆರವಣಿಗೆ ಸುಮಾರು 19 ಗಂಟೆಗಳ ಕಾಲ ನಡೆದು ಇಂದು ಮಧ್ಯಾಹ್ನ 12.40ಕ್ಕೆ ಗಣೇಶಮೂರ್ತಿಯನ್ನು ವಿಸರ್ಜನೆಗೊಳಿಸಲಾಯಿತು.

ಈ ಸಂದರ್ಭದಲ್ಲಿ ಕರ್ನಾಟಕ ಪ್ರಾಂತೀಯ ಹಿಂದೂ ಮಹಾಸಭಾ ಗಣೇಶೋತ್ಸವ ಸಮಿತಿಯ ಅಧ್ಯಕ್ಷ ಪಿ.ಸುಧೀರ್, ಕಾರ್ಯದರ್ಶಿ ಮುರುಳಿಧರ ಹಾಗೂ ಪದಾಧಿಕಾರಿಗಳು ಭಾಗವಹಿಸಿದ್ದರು.


ಗಣೇಶನಿಗೆ ಪೂಜೆ ಸಲ್ಲಿಸಿದ ಮಾಜಿ ಸಚಿವ ಹಾಲಪ್ಪ

ರಿಪ್ಪನ್‌ಪೇಟೆ ; ಇಲ್ಲಿನ ಕರ್ನಾಟಕ ಪ್ರಾಂತೀಯ ಹಿಂದೂ ರಾಷ್ಟ್ರಸೇನಾ ಸಮಿತಿಯ ಗಣೇಶ ವಿಸರ್ಜನಾ ರಾಜಬೀದಿ ಉತ್ಸವದಲ್ಲಿ ಮಾಜಿ ಸಚಿವ, ರಾಜ್ಯ ಬಿಜೆಪಿ ಉಪಾಧ್ಯಕ್ಷ ಹರತಾಳು ಹಾಲಪ್ಪ ಪಾಲ್ಗೊಂಡು ಗಣಪತಿಗೆ ಮಾಲಾರ್ಪಣೆ ಮಾಡಿ ದರ್ಶನಾಶೀರ್ವಾದ ಪಡೆದರು.

ಈ ಸಂದರ್ಭದಲ್ಲಿ ಹಿಂದೂ ಮಹಾಸಭಾ ಸೇವಾ ಸಮಿತಿಯ ಅಧ್ಯಕ್ಷ ಪಿ.ಸುಧೀರ್, ಕಾರ್ಯದರ್ಶಿ ಮುರುಳಿಧರ ಕೆರೆಹಳ್ಳಿ, ಬಿಜೆಪಿ ತಾಲ್ಲೂಕು ಅಧ್ಯಕ್ಷ ಮತ್ತಿಮನೆ ಸುಬ್ರಹ್ಮಣ್ಯ, ಮಹಾಶಕ್ತಿ ಕೇಂದ್ರದ ಅಧ್ಯಕ್ಷ ಎನ್.ಸತೀಶ್, ಎಂ.ಬಿ.ಮಂಜುನಾಥ, ಆರ್.ಟಿ.ಗೋಪಾಲ, ಎಂ.ಸುರೇಶಸಿಂಗ್, ಜಗನ್ನಾಥ ಬಂಗೇರಾ, ಪದ್ಮಾ ಸುರೇಶ, ರೇಖಾ ರವಿ, ಅಶ್ವಿನಿ, ಜಿ.ಡಿ.ಮಲ್ಲಿಕಾರ್ಜುನ, ಸುಧೀಂದ್ರ ಪೂಜಾರಿ, ಲಕ್ಷ್ಮಿ ಶ್ರೀನಿವಾಸ ಆಚಾರ್, ಮೆಣಸೆ ಆನಂದ, ಇನ್ನಿತರ ಪಕ್ಷದ ಮುಖಂಡರು ಹಾಜರಿದ್ದರು.

Leave a Comment