ಹೊಸನಗರ

RIPPONPETE ಸರ್ಕಾರದ ಬಸವ ವಸತಿ ಯೋಜನೆ ಹಣ ಬಾರದೆ ಮೇಲೇಳದ ಕಟ್ಟಡ ! ಆರೋಪ

RIPPONPETE | ಸರ್ಕಾರ ಬಡವರ ಸೂರಿಗಾಗಿ ಅನುಷ್ಟಾನಗೊಳಿಸಿದ ಬಸವ ವಸತಿ ಯೋಜನೆಯಡಿ ಮನೆ ನಿರ್ಮಿಸಲು ಫಲಾನುಭವಿಗಳನ್ನು ಆಯ್ಕೆ ಮಾಡಿ ಫೌಂಡೇಷನ್ ಹಾಕಲಾದ ಫಲಾನುಭವಿಗಳಿಗೆ ಪ್ರಾರಂಭದ ಮೊದಲು ಕಂತು ಹಣ ಬಾರದೆ ಕಟ್ಟಡ ಮೇಲೇಳದೆ ಇರುವುದರ ಬಗ್ಗೆ ಫಲಾನುಭವಿಗಳು ಮತ್ತು ಗ್ರಾಮ ಪಂಚಾಯಿತಿ ಸದಸ್ಯ ಜಿ.ಡಿ.ಮಲ್ಲಿಕಾರ್ಜುನ ತೀವ್ರ ಆಕ್ರೊಶ ವ್ಯಕ್ತಪಡಿಸಿದ್ದಾರೆ.

WhatsApp Group Join Now
Telegram Group Join Now
Instagram Group Join Now

ರಿಪ್ಪನ್‌ಪೇಟೆಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನಮ್ಮ ಗ್ರಾಮ ಪಂಚಾಯ್ತಿ ವ್ಯಾಪ್ತಿಯಲ್ಲಿ ನೀಡಲಾದ ಬಸವ ವಸತಿ ಯೋಜನೆಯ ಫಲಾನುಭವಿಗಳ ಮನೆಗಳು ಇನ್ನೂ ಅಪೂರ್ಣವಾಗಿಯೆ ಉಳಿಯುವಂತಾಗಿದೆ. ಒಂದು ಕಡೆಯಲ್ಲಿ ಸರ್ಕಾರದಿಂದ ಫಲಾನುಭವಿಗೆ ಹಣ ನೀಡದೆ ಇರುವುದು ಫೌಂಡೇಷನ್ ಹಾಕಿ ಮೊದಲ ಕಂತಿನ ಹಣವನ್ನು ಪಡೆಯಲು ಪಂಚಾಯಿತಿ ಕಛೇರಿಗೆ ಫಲಾನುಭವಿಗಳು ಅಲೆಯುವಂತಗಿದೆ ಎಂದು ಆರೋಪಿಸಿದ ಅವರು, ಮಳೆಗಾಲವಾಗಿರುವ ಕಾರಣ ಮನೆಗಳು ಶಿಥಿಲಗೊಂಡು ಕುಸಿದು ಬೀಳುವಂತಾಗಿ ಬಡ ಕುಟುಂಬ ಬೀದಿಗೆ ಬಂದಿರುವ ಫಲಾನುಭವಿಗಳ ಬಗ್ಗೆ ಸರ್ಕಾರ ಇನ್ನೂ ನಿರ್ಲಕ್ಷ್ಯ ಧೋರಣೆ ತಾಳಿರುವುದರ ಬಗ್ಗೆ ತೀವ್ರ ಅಸಮದಾನಕ್ಕೆ ಕಾರಣವಾಗಿದೆ ಎಂದರು.

ಈ ಹಿಂದಿನ ಸರ್ಕಾರ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಬಸವ ವಸತಿ ಯೋಜನೆ ಫಲಾನುಭವಿಗಳನ್ನು ಆಯ್ಕೆ ಮಾಡಿ ಎಲ್ಲಾ ದಾಖಲೆಗಳನ್ನು ಪಡೆದು ಸಬ್‌ರಿಜಿಸ್ಟಾರ್ ಕಛೇರಿಯಲ್ಲಿ ನೋಂದಣಿ ಮಾಡಿಸಿ ಮನೆಗೆ ಫೌಂಡೇಷನ್ ಮಾಡಿಸಲು ಸಾಲಸೋಲ ಮಾಡಿ ಫೌಂಡೇಷನ್ ಸಹ ಹಾಕಿಕೊಂಡು ಮೊದಲ ಕಂತಿನ ಹಣಕ್ಕಾಗಿ ಜಾತಕ ಪಕ್ಷಿಯಂತೆ ಬ್ಯಾಂಕ್‌ಗೆ ಮತ್ತು ಗ್ರಾಮ ಪಂಚಾಯಿತಿ ಕಛೇರಿಗೆ ಅಲೆಯುವಂತಾಗಿದೆ ಎಂದು ಫಲಾನುಭವಿಗಳು ತಮ್ಮ ಅಸಹಾಯಕತೆಯನ್ನು ನಮ್ಮ ಬಳಿಯಲ್ಲಿ ತೋಡಿಕೊಂಡಿದ್ದಾರೆಂದು ವಿವರಿಸಿದರು.

Malnad Times App ಡೌನ್‌ಲೋಡ್ ಮಾಡಿಶಿವಮೊಗ್ಗ ಮತ್ತು ಮಲೆನಾಡಿನ ಸುದ್ದಿಗಳನ್ನು ತಕ್ಷಣ ಪಡೆಯಿರಿ.
GET IT ONGoogle Play

ಒಟ್ಟಾರೆಯಾಗಿ ಬಸವ ವಸತಿ ಯೋಜನೆಯ ಫಲಾನುಭವಿಗಳು ಅತ್ತ ಮನೆಯೂ ಇಲ್ಲದೆ, ಇತ್ತ ಮಾಡಿಕೊಂಡ ಸಾಲವನ್ನು ತಿರುವಳಿ ಮಾಡದೆ ಕೊರಗುವಂತಾಗಿದೆ ಎಂದು ತಮ್ಮ ಮನಸ್ಸಿನ ನೋವನ್ನು ಮಾಧ್ಯಮದವರ ಬಳಿ ಹಂಚಿಕೊಂಡರು.

ಇನ್ನಾದರೂ ಸರ್ಕಾರ ಕೂಡಲೇ ಬಸವ ವಸತಿ ಫಲಾನುಭವಿಗಳಿಗೆ ಅನುದಾನ ಬಿಡುಗಡೆಗೊಳಿಸಿ ಮನೆ ಪೂರ್ಣಗೊಳಿಸಲು ಮುಂದಾಗಬೇಕು ಎಂದು ಸರ್ಕಾರವನ್ನು ಆಗ್ರಹಿಸಿದ್ದಾರೆ.

Read more

ನಾಗರ ಪಂಚಮಿ ಪ್ರಯುಕ್ತ ಆ.09 ರಂದು ನಾಗರಹಳ್ಳಿಯಲ್ಲಿ ಜಾತ್ರಾ ಮಹೋತ್ಸವ

ಕೊಡಚಾದ್ರಿ ಕಾಲೇಜಿನಲ್ಲಿ ನೂತನ ಕೋರ್ಸ್ ಆರಂಭ | ಲಯನ್ಸ್ ಕ್ಲಬ್ ಅಧ್ಯಕ್ಷರಾಗಿ ದೀಪಕ್ ಸ್ವರೂಪ್ ಆಯ್ಕೆ

ಮಾಹಿತಿ ಮತ್ತು ಮೂಲ: ಈ ವರದಿಯನ್ನು Malnad Times ಸಂಪಾದಕೀಯ ತಂಡವು ಲಭ್ಯ ಮಾಹಿತಿಯ ಆಧಾರದಲ್ಲಿ ಪರಿಶೀಲಿಸಿದೆ.

Mahesha Hindlemane

ಮಲೆನಾಡಿನ ಹೆಬ್ಬಾಗಿಲು ಶಿವಮೊಗ್ಗದ ಸ್ಥಳೀಯ ನ್ಯೂಸ್ ವೆಬ್‌ಸೈಟ್‌ಗಳಲ್ಲಿ ಪ್ರತಿನಿಧಿಯಾಗಿ ವೃತ್ತಿ ಜೀವನ ಪ್ರಾರಂಭ. ಪತ್ರಿಕೋದ್ಯಮದಲ್ಲಿ 8 ವರ್ಷಗಳ ಅನುಭವ. ಜಿಲ್ಲಾ ಮಟ್ಟದ ದಿನಪತ್ರಿಕೆಗಳಲ್ಲಿ ಹಾಗೂ ವೆಬ್‌ಸೈಟ್‌ಗಳಲ್ಲಿ ಮಲೆನಾಡಿಗೆ ಸಂಬಂಧಿಸಿದ ವಿಷಯಗಳ ಲೇಖನಗಳನ್ನು ಬರೆದಿದ್ದೇನೆ. ಪ್ರಸ್ತುತ 'ಮಲ್ನಾಡ್ ಟೈಮ್ಸ್' ಡಿಜಿಟಲ್ ನಲ್ಲಿ ಸಂಪಾದಕನಾಗಿ ಮುಂದುವರೆದಿದ್ದೇನೆ. ಇ-ಮೇಲ್ : [email protected]