RIPPONPETE : 4ನೇ ವರ್ಷದ ಕಸ್ತೂರಿ ಕನ್ನಡ ಸಂಘ ಹಾಗೂ ಪುನೀತ್ರಾಜ್ ಅಭಿಮಾನಿ ಬಳಗದ 69ನೇ ರಾಜ್ಯೋತ್ಸವ ಆಚರಣೆಯನ್ನು ಅದ್ದೂರಿಯಾಗಿ ಆಚರಿಸಲು ಭರದ ಸಿದ್ದತೆಯಲ್ಲಿ ತೊಡಗಿರುವುದಾಗಿ ಕಸ್ತೂರಿ ಕನ್ನಡ ಸಂಘದ ಸಂಸ್ಥಾಪಕ ಅಧ್ಯಕ್ಷ ಆರ್.ಎ.ಚಾಬುಸಾಬ್ ಮತ್ತು ರಾಜ್ಯೋತ್ಸವ ಸಮಿತಿಯ ಅಧ್ಯಕ್ಷೆ ಧನಲಕ್ಷ್ಮಿ ಜಂಟಿ ಪತ್ರಿಕಾಗೋಷ್ಟಿಯಲ್ಲಿ ತಿಳಿಸಿದರು.
ರಿಪ್ಪನ್ಪೇಟೆಯ ಗ್ರಾಮ ಪಂಚಾಯ್ತಿ ಕುವೆಂಪು ಸಭಾಭವನದಲ್ಲಿ ಪತ್ರಿಕಾಗೋಷ್ಟಿಯಲ್ಲಿ ಮಾತನಾಡಿದ ಅವರು, 69ನೇ ಕನ್ನಡ ರಾಜ್ಯೋತ್ಸವದ ಅಂಗವಾಗಿ ಅಕ್ಟೋಬರ್ 29 ರಂದು ಮಹಿಳೆಯರಿಗಾಗಿ `ಚುಕ್ಕಿರಂಗೋಲಿ ಬಣ್ಣ ತುಂಬುವ ಸ್ಪರ್ಧೆ, ಆರತಿ ತಟ್ಟೆ ಅಲಂಕಾರ ಸ್ಪರ್ಧೆ, ಥ್ರೋಬಾಲ್ ಮತ್ತು ವಾಲಿಬಾಲ್ ಪಂದ್ಯಾವಳಿ, ಸಂಗೀತ ಕುರ್ಚಿ ಸ್ಪರ್ಧೆ ಮತ್ತು ಒಂದು ನಿಮಿಷದ ವಿಶೇಷ ಸ್ಪರ್ಧೆ ಹಾಗೂ ಪುರುಷರಿಗಾಗಿ ವಾಲಿಬಾಲ್ ಪಂದ್ಯಾವಳಿ ಹಾಗೂ ನವೆಂಬರ್ 1 ರಂದು ಕನ್ನಡ ರಾಜ್ಯೋತ್ಸವದಂದು ತಾಯಿ ಭುವನೇಶ್ವರಿ ತಾಯಿ ಮೆರವಣಿಗೆ ಸ್ಥಳೀಯ ಜಾನಪದ ಕಲಾತಂಡಗಳ ಮೆರಗಿನೊಂದಿಗೆ ಶಾಲಾ ಮಕ್ಕಳ ಮೆರವಣಿಗೆ ನಡೆಯಲಿದೆ.

ಜೀ ಕನ್ನಡ ವಾಹಿನಿಯ ಸರಿಗಮಪ ಖ್ಯಾತಿಯ ಕು|| ದಿಯಾ ಹೆಗಡೆ, ಎದೆ ತುಂಬಿ ಹಾಡುವೆನು ಖ್ಯಾತಿಯ ಸಾನ್ವಿ ಜಿ.ಭಟ್, ಜಾನಪದ ಕಲಾವಿದರಾದ ಮೆಹಬೂಬ್ಸಾಬ್, ಜೋಗಿ ಪದದ ಗಾಯಕ ನಾಗರಾಜ ತೊಂಬ್ರಿ ಇವರ ರಸಮಂಜರಿ ಕಾರ್ಯಕ್ರಮದೊಂದಿಗೆ ಶಾಲಾ ಮಕ್ಕಳಿಂದ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮ ಏರ್ಪಡಿಸಲಾಗಿದೆ. ಇದರೊಂದಿಗೆ ಎಸ್.ಎಸ್.ಎಲ್.ಸಿ. ಮತ್ತು ಪಿ.ಯು.ಸಿ. ಶೇಕಡಾ 90ಕ್ಕೂ ಹೆಚ್ಚು ಅಂಕ ಗಳಿಸಿ ಉತ್ತೀರ್ಣಾರಾದ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಹಾಗೂ ಕನ್ನಡ ಭಾಷೆಯಲ್ಲಿ ಶೇ.100 ಅಂಕ ಗಳಿಸಿದ ವಿದ್ಯಾರ್ಥಿಗಳನ್ನು ಸನ್ಮಾನಿಸಿ ಗೌರವಿಸಲಾಗುವುದು ಎಂದು ತಿಳಿಸಿದರು.
ಪ್ರತಿಕಾಗೋಷ್ಟಿಯಲ್ಲಿ ಕಸ್ತೂರಿ ಕನ್ನಡ ಸಂಘದ ಪದಾಧಿಕಾರಿಗಳಾದ ಮಹಮ್ಮದ್ಹುಸೇನ್ ಜಿ.ಎಸ್.ವರದರಾಜ್, ಮೆಣಸೆ ಆನಂದ, ತರಕಾರಿ ಯೋಗೇಂದ್ರಗೌಡ, ಶ್ವೇತಾ, ಆರ್.ಡಿ.ಶೀಲಾ, ಶ್ರೀಧರ, ಗಣಪತಿ ಗವಟೂರು, ಹೆಚ್.ಎನ್.ಉಮೇಶ, ರಮೇಶ ಫ್ಯಾನ್ಸಿ, ಹೇಮಾ ಮಂಜಪ್ಪ, ಸೀಮಾ, ನಿರ್ಮಲ, ಇನ್ನಿತರರು ಹಾಜರಿದ್ದರು.
Author Profile

- ಅವರು MalnadTimes.com ನ ಸಂಪಾದಕರಾಗಿ ಸೇವೆ ಸಲ್ಲಿಸುತ್ತಿದ್ದಾರೆ. ಸ್ಥಳೀಯ ಪತ್ರಿಕೋದ್ಯಮದ ಮೇಲಿನ ನಿಷ್ಠೆ ಮತ್ತು ಸಾಮಾಜಿಕ ಜವಾಬ್ದಾರಿಯೊಂದಿಗೆ, ಅವರು ಮಲ್ನಾಡು ಪ್ರದೇಶದ ಜನಜೀವನ, ಪರಿಸರ, ಕೃಷಿ, ಶಿಕ್ಷಣ ಮತ್ತು ಅಭಿವೃದ್ಧಿ ಸಂಬಂಧಿತ ವಿಷಯಗಳನ್ನು ಪ್ರಾಮಾಣಿಕವಾಗಿ ಹಾಗೂ ನಿರಂತರವಾಗಿ ಹಂಚಿಕೊಂಡು ಬರುತ್ತಿದ್ದಾರೆ. ನಿಖರತೆ, ನೈತಿಕತೆ ಮತ್ತು ಸಾರ್ವಜನಿಕ ಹಿತಚಿಂತನೆಯಾದರೂ ಅವರ ಸಂಪಾದಕೀಯ ನಿಲುವುಗಳ ಹತ್ತಿರ ಇರುತ್ತದೆ. Malnad Times ನ್ನು ವಿಶ್ವಾಸಾರ್ಹ ಸುದ್ದಿಮೂಲವಾಗಿಸಲು ಅವರು ನಿರಂತರ ಶ್ರಮಿಸುತ್ತಿದ್ದಾರೆ.
Latest entries
RipponpeteJune 4, 2025ಅಮ್ಮನಘಟ್ಟ ನೂತನ ಶಿಲಾಮಯ ದೇವಾಲಯ ಲೋಕಾರ್ಪಣೆ ; ದೇವಸ್ಥಾನದಲ್ಲಿ ಜಾತಿ ಭೇದ ಭಾವನೆ ಬೇಡ
ShivamoggaJune 3, 2025ಸಂಪತ್ತಿನೊಂದಿಗೆ ಒಂದಿಷ್ಟಾದರೂ ಧರ್ಮ ಪ್ರಜ್ಞೆ ಅವಶ್ಯಕ ; ರಂಭಾಪುರಿ ಜಗದ್ಗುರುಗಳು
RipponpeteJune 3, 2025ಅಮ್ಮನಘಟ್ಟ ಶ್ರೀಜೇನುಕಲ್ಲಮ್ಮ ದೇವಸ್ಥಾನದ 108 ಮೆಟ್ಟಿಲುಗಳ ನಿರ್ಮಾಣಕ್ಕೆ ಸಂಸದ ಬಿ.ವೈ. ರಾಘವೇಂದ್ರ ಶಿಲನ್ಯಾಸ
RipponpeteJune 2, 2025ಕೊಪ್ಪಳ ಗವಿಸಿದ್ದೇಶ್ವರ ಮಠದ ಶ್ರೀಗಳು ಶಿವಮೊಗ್ಗ ಬೆಕ್ಕಿನಕಲ್ಮಠಕ್ಕೆ ಭೇಟಿ