ರಿಪ್ಪನ್ಪೇಟೆ ; ಕೋಟೆತಾರಿಗ ಗ್ರಾಮದಲ್ಲಿ ಮನೆ ಬೀಗ ಮುರಿದು ಕಳವು ಮಾಡಿಕೊಂಡು ಪರಾರಿಯಾಗಿದ್ದ ಆರೋಪಿಯನ್ನು ರಿಪ್ಪನ್ಪೇಟೆ ಪೊಲೀಸರು ಹೆಡೆಮುರಿ ಕಟ್ಟುವಲ್ಲಿ ಯಶಸ್ವಿಯಾಗಿದ್ದಾರೆ.
ಕೋಟೆತಾರಿಗ ಗ್ರಾಮದ ದಾನಮ್ಮ ಎಂಬುವರ ಮನೆಯಲ್ಲಿ ಶುಕ್ರವಾರ ರಾತ್ರಿ ಬೀಗ ಮುರಿದು ಕಳವು ಮಾಡಲಾಗಿದೆ ಎಂದು ದೂರು ನೀಡಲಾಗಿದ್ದು ದೂರಿನನ್ವಯ ಪ್ರಕರಣ ದಾಖಲಿಕೊಂಡ ಪೊಲೀಸರು ಆರೋಪಿಯ ಪತ್ತೆಗೆ ಬಲೆ ಬೀಸಿದ್ದರು.
ಪ್ರಕರಣ ನಡೆದು ನಾಲ್ಕು ದಿನಗಳೊಳಗೆ ಆರೋಪಿಯನ್ನು ಪತ್ತೆ ಮಾಡಿದ್ದಾರೆ. ಕಣಬಂದೂರು ಗ್ರಾಮದ ಸಂತೋಷ (37) ಬಂಧಿತ ಆರೋಪಿಯಾಗಿದ್ದು, ಈತನಿಂದ ಚಿನ್ನಾಭರಣ ಮತ್ತು ನಗದನ್ನು ವಶಪಡಿಸಿಕೊಳ್ಳಲಾಗಿದೆ.
ತೀರ್ಥಹಳ್ಳಿ ಡಿವೈಎಸ್ಪಿ ಅರವಿಂದ ಕಲಗುಜ್ಜಿ ಮತ್ತು ಸಿಪಿಐ ಗುರಣ್ಣ ಹೆಬ್ಬಾಳ್ ಅವರ ಮಾರ್ಗದರ್ಶನದಲ್ಲಿ ಪಿಎಸ್ಐ ರಾಜುರೆಡ್ಡಿ ನೇತೃತ್ವದಲ್ಲಿ ಪೊಲೀಸರು ತನಿಖೆ ಆರಂಭಿಸಿ ಸ್ಥಳೀಯ ಗುಪ್ತಚರ ಜಾಲದಿಂದ ಮಾಹಿತಿಯನ್ನಾದರಿಸಿ ಆರೋಪಿಯನ್ನು ಪತ್ತೆ ಹಚ್ಚಿ ಬಂಧಿಸುವಲ್ಲಿ ಪೊಲೀಸರು ಯಶಸ್ವಿಯಾಗಿದ್ದಾರೆ.
ಬಂಧಿತ ಆರೋಪಿಯಿಂದ ನಾಲ್ಕೂವರೆ ಸಾವಿರ ನಗದು, 8.5 ಗ್ರಾಂ ಚಿನ್ನಾಭರಣ ಮತ್ತು 10 ಗ್ರಾಂ ಬೆಳ್ಳಿ ಹಾಗೂ ಕೃತ್ಯಕ್ಕೆ ಬಳಸಿದ ದ್ವಿಚಕ್ರ ವಾಹನವನ್ನು ವಶಕ್ಕೆ ಪಡೆಯಲಾಗಿದೆ.

ಅವರು MalnadTimes.com ನ ಸಂಪಾದಕರಾಗಿ ಸೇವೆ ಸಲ್ಲಿಸುತ್ತಿದ್ದಾರೆ. ಸ್ಥಳೀಯ ಪತ್ರಿಕೋದ್ಯಮದ ಮೇಲಿನ ನಿಷ್ಠೆ ಮತ್ತು ಸಾಮಾಜಿಕ ಜವಾಬ್ದಾರಿಯೊಂದಿಗೆ, ಅವರು ಮಲ್ನಾಡು ಪ್ರದೇಶದ ಜನಜೀವನ, ಪರಿಸರ, ಕೃಷಿ, ಶಿಕ್ಷಣ ಮತ್ತು ಅಭಿವೃದ್ಧಿ ಸಂಬಂಧಿತ ವಿಷಯಗಳನ್ನು ಪ್ರಾಮಾಣಿಕವಾಗಿ ಹಾಗೂ ನಿರಂತರವಾಗಿ ಹಂಚಿಕೊಂಡು ಬರುತ್ತಿದ್ದಾರೆ. ನಿಖರತೆ, ನೈತಿಕತೆ ಮತ್ತು ಸಾರ್ವಜನಿಕ ಹಿತಚಿಂತನೆಯಾದರೂ ಅವರ ಸಂಪಾದಕೀಯ ನಿಲುವುಗಳ ಹತ್ತಿರ ಇರುತ್ತದೆ. Malnad Times ನ್ನು ವಿಶ್ವಾಸಾರ್ಹ ಸುದ್ದಿಮೂಲವಾಗಿಸಲು ಅವರು ನಿರಂತರ ಶ್ರಮಿಸುತ್ತಿದ್ದಾರೆ.