ಕೊಚ್ಚಿ ಹೋದ ರಸ್ತೆ, ಮಾಜಿ ಸಚಿವ ಹಾಲಪ್ಪ ಭೇಟಿ, ಪರಿಶೀಲನೆ | ಧಾರಾಕಾರ ಮಳೆಗೆ ಮನೆ ಕುಸಿದ ಮನೆ !

Written by Mahesh Hindlemane

Published on:

RIPPONPETE ; ಮಂಗಳವಾರ ರಾತ್ರಿ ಸುರಿದ ಭಾರಿ ಮಳೆಯಿಂದಾಗಿ ಅರಸಾಳು ಗ್ರಾಮ ಪಂಚಾಯಿತ್ ವ್ಯಾಪ್ತಿಯ ಮಚಲಿಜಡ್ಡು – ಕಡೇಗದ್ದೆ ಸಂಪರ್ಕ ರಸ್ತೆ ಕೊಚ್ಚಿ ಹೋಗಿದ್ದು ಅಕ್ಕ-ಪಕ್ಕದ ಜಮೀನಿಗೆ ನೀರು ನುಗ್ಗಿ ಅಪಾರ ಪ್ರಮಣದ ನಷ್ಟ ಸಂಭವಿಸಿದೆ.

WhatsApp Group Join Now
Telegram Group Join Now
Instagram Group Join Now

ಸುದ್ದಿ ತಿಳಿದು ರಾಜ್ಯ ಬಿಜೆಪಿ ಘಟಕದ ಉಪಾಧ್ಯಕ್ಷ ಹರತಾಳು ಹಾಲಪ್ಪ ಅತಿವೃಷ್ಠಿಯಿಂದ ಹಾನಿಗೊಳಗಾದ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿ, ಹಾನಿಗೀಡಾಗಿರುವ ಸಂಪರ್ಕ ರಸ್ತೆಯನ್ನು ಶೀಘ್ರ ದುರಸ್ಥಿಗೊಳಿಸಿಲು ಹಾಗೂ ಬೆಳೆ ನಷ್ಟಕ್ಕೆ  ತುರ್ತು ಪರಿಹಾರ ಕಲ್ಪಿಸುವ ನಿಟ್ಟಿನಲ್ಲಿ ಗಮನ ಸೆಳೆಯಲಾಗುವುದು ಎಂದರು.

ಈ ಸಂದರ್ಭದಲ್ಲಿ ಪಕ್ಷದ ತಾಲ್ಲೂಕು ಮುಖಂಡರು,ಗ್ರಾಮಸ್ಥರು ರೈತ ಮುಖಂಡರು ಹಾಜರಿದ್ದರು.


ಧಾರಾಕಾರ ಮಳೆಗೆ ಮನೆ ಕುಸಿದ ಮನೆ !

RIPPONPETE ; ಭಾರಿ ಮಳೆಗೆ ಸಮೀಪದ ಅಮೃತ ಗ್ರಾಮ ಪಂಚಾಯತಿ ವ್ಯಾಪ್ತಿಯ ಮಳಲಿಕೊಪ್ಪ ಗ್ರಾಮದ ಸುರೇಶ ಎಂಬುವರ ವಾಸದ ಮನೆಯು ಕುಸಿದು ಅಪಾರ ಹಾನಿ ಸಂಭವಿಸಿದೆ.

ಸುದ್ದಿ ತಿಳಿದು ಇಂದು ಮುಂಜಾನೆಯೇ ಅಮೃತ ಗ್ರಾಮ ಪಂಚಾಯ್ತಿ ಅಧ್ಯಕ್ಷ ಸಚಿನ್‌ಗೌಡ ಮತ್ತು ಪಂಚಾಯ್ತಿ ಸಿಬ್ಬಂದಿವರ್ಗ ಭೇಟಿ ನೀಡಿ ಮನೆಯವರಿಗೆ ಧೈರ್ಯ ತುಂಬಿ ತಕ್ಷಣ ಸರ್ಕಾರದಿಂದ ಪರಿಹಾರ ಕೊಡಿಸುವ ಬಗ್ಗೆ ಭರವಸೆ ನೀಡಿದರು.

Author Profile

Mahesh Hindlemane
Mahesh Hindlemane
ಅವರು MalnadTimes.com ನ ಸಂಪಾದಕರಾಗಿ ಸೇವೆ ಸಲ್ಲಿಸುತ್ತಿದ್ದಾರೆ. ಸ್ಥಳೀಯ ಪತ್ರಿಕೋದ್ಯಮದ ಮೇಲಿನ ನಿಷ್ಠೆ ಮತ್ತು ಸಾಮಾಜಿಕ ಜವಾಬ್ದಾರಿಯೊಂದಿಗೆ, ಅವರು ಮಲ್ನಾಡು ಪ್ರದೇಶದ ಜನಜೀವನ, ಪರಿಸರ, ಕೃಷಿ, ಶಿಕ್ಷಣ ಮತ್ತು ಅಭಿವೃದ್ಧಿ ಸಂಬಂಧಿತ ವಿಷಯಗಳನ್ನು ಪ್ರಾಮಾಣಿಕವಾಗಿ ಹಾಗೂ ನಿರಂತರವಾಗಿ ಹಂಚಿಕೊಂಡು ಬರುತ್ತಿದ್ದಾರೆ. ನಿಖರತೆ, ನೈತಿಕತೆ ಮತ್ತು ಸಾರ್ವಜನಿಕ ಹಿತಚಿಂತನೆಯಾದರೂ ಅವರ ಸಂಪಾದಕೀಯ ನಿಲುವುಗಳ ಹತ್ತಿರ ಇರುತ್ತದೆ. Malnad Times ನ್ನು ವಿಶ್ವಾಸಾರ್ಹ ಸುದ್ದಿಮೂಲವಾಗಿಸಲು ಅವರು ನಿರಂತರ ಶ್ರಮಿಸುತ್ತಿದ್ದಾರೆ.

Leave a Comment