Ripponpete

ಗ್ರಾಮಾಂತರ ಮಟ್ಟದ ಹೊನಲು ಬೆಳಕಿನ ವಾಲಿಬಾಲ್ ಪಂದ್ಯಾವಳಿ | ಕ್ರೀಡೆಯು ಪ್ರತಿಯೊಬ್ಬರ ಜೀವನದಲ್ಲಿ ವಿಶೇಷ ಪಾತ್ರ ವಹಿಸುತ್ತದೆ ; ಗೋಪಾಲಕೃಷ್ಣ ಬೇಳೂರು

RIPPONPETE ; ಕ್ರೀಡೆಯು ಪ್ರತಿಯೊಬ್ಬರ ಜೀವನದಲ್ಲಿ ವಿಶೇಷ ಪಾತ್ರವನ್ನು ವಹಿಸುತ್ತದೆ ಏಕೆಂದರೆ ಕ್ರೀಡೆಗಳು ಯಾವಾಗಲೂ ಒಬ್ಬ ವ್ಯಕ್ತಿಯನ್ನು ಆರೋಗ್ಯಕರವಾಗಿ, ಸಮೃದ್ಧವಾಗಿ ಮತ್ತು ಕ್ರಿಯಾಶೀಲವಾಗಿರುವಂತೆ ಮಾಡುತ್ತದೆ. ಆರೋಗ್ಯವಂತ ದೇಹದಿಂದ ಮಾತ್ರ ಮನಸ್ಸು ಆರೋಗ್ಯವಾಗಿರಲು ಸಾಧ್ಯ. ನಾವು ಎಲ್ಲಾ ಸಮಯದಲ್ಲೂ ನಮ್ಮ ದೈಹಿಕ ಮತ್ತು ಮಾನಸಿಕ ಆರೋಗ್ಯವನ್ನು ಕಾಪಾಡಿಕೊಂಡಾಗ ಮಾತ್ರ ನಾವು ಜೀವನದಲ್ಲಿ ಉತ್ತಮ ಸಾಧನೆಗಳನ್ನು ಸಾಧಿಸಬಹುದು. ಆದ್ದರಿಂದ ಜೀವನದಲ್ಲಿ ಕ್ರೀಡೆಗಳು ಅವಶ್ಯಕ ಎಂದು ಸಾಗರ, ಹೊಸನಗರ ವಿಧಾನಸಭಾ ಕ್ಷೇತ್ರದ ಶಾಸಕರು ಹಾಗೂ ಕರ್ನಾಟಕ ರಾಜ್ಯ ಅರಣ್ಯ ಕೈಗಾರಿಕಾ ನಿಗಮ ನಿಯಮಿತ ಅಧ್ಯಕ್ಷ ಗೋಪಾಲಕೃಷ್ಣ ಬೇಳೂರು ಹೇಳಿದರು.

WhatsApp Group Join Now
Telegram Group Join Now
Instagram Group Join Now
📢 Stay Updated! Join our WhatsApp Channel Now →

ಪಟ್ಟಣದ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಕ್ರೀಡಾಂಗಣದಲ್ಲಿ ಭಾನುವಾರ ಸಂಜೆ ಯೂತ್ ಸ್ಟ್ರೈಕರ್ಸ್ ವತಿಯಿಂದ ಆಯೋಜಿಸಲಾಗಿದ್ದ ದ್ವಿತೀಯ ವರ್ಷದ ಗ್ರಾಮಾಂತರ ಮಟ್ಟದ ಹೊನಲು ಬೆಳಕಿನ ವಾಲಿಬಾಲ್ ರತನ್ ಟಾಟಾ ಕಪ್ -2024 ಪಂದ್ಯಾವಳಿಯನ್ನು ಉದ್ಘಾಟಿಸಿ ಮಾತನಾಡಿದ ಅವರು, ಕ್ರಮಬದ್ಧವಾಗಿ ನಡೆಯಲು ನಮ್ಮ ದೇಹ ಆರೋಗ್ಯವಾಗಿರುವುದು ಎಷ್ಟು ಮುಖ್ಯವೋ ಅದೇ ರೀತಿ ನಮ್ಮ ದೇಹದ ಸಂಪೂರ್ಣ ಬೆಳವಣಿಗೆಗೆ ವ್ಯಾಯಾಮವೂ ಬಹಳ ಮುಖ್ಯ. ಕ್ರೀಡೆಗಳಲ್ಲಿ ಭಾಗವಹಿಸುವುದರಿಂದ ನಮ್ಮ ದೇಹಕ್ಕೆ ಉತ್ತಮ ವ್ಯಾಯಾಮ ದೊರೆಯುತ್ತದೆ. ಮಕ್ಕಳು ಮತ್ತು ಯುವಕರ ಮಾನಸಿಕ ಮತ್ತು ದೈಹಿಕ ಬೆಳವಣಿಗೆಯಲ್ಲಿ ಇದು ಬಹಳ ಮುಖ್ಯವಾಗಿದೆ. ಕೆಲವು ಪೋಷಕರು ಕ್ರೀಡೆಗಳನ್ನು ಕೇವಲ ಮನರಂಜನೆಯ ಸಾಧನವೆಂದು ಪರಿಗಣಿಸಿ ಮಕ್ಕಳ ಕ್ರೀಡೆಗಳಲ್ಲಿ ಆಸಕ್ತಿ ವಹಿಸುವುದನ್ನು ವಿರೋಧಿಸುತ್ತಾರೆ, ಆದರೆ ಕ್ರೀಡೆಗಳು ಅಂತಹ ವ್ಯಾಯಾಮವಾಗಿದ್ದು ಅದು ನಮ್ಮ ದೈಹಿಕ ಅಂಗಗಳ ಜೊತೆಗೆ ಮಾನಸಿಕ ಬೆಳವಣಿಗೆಗೆ ಸಹಾಯ ಮಾಡುತ್ತದೆ ಎಂದರು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ಅಬ್ದುಲ್ ರವೂಫ್ ಭಾನು, ವಹಿಸಿದ್ದರು.
ಗ್ರಾಮ ಪಂಚಾಯಿತಿ ಅಧ್ಯಕ್ಷೆ ಧನಲಕ್ಷ್ಮಿ ಗಂಗಾಧರ್, ಜಿಲ್ಲಾ ಪಂಚಾಯತ್ ಮಾಜಿ ಸದಸ್ಯ ಬಿ.ಪಿ ರಾಮಚಂದ್ರ, ರಿಪ್ಪನ್‌ಪೇಟೆ ಪಿಎಸ್ಐ ಪ್ರವೀಣ್ ಎಸ್.ಪಿ. ಬಿಎಸ್ಎನ್‍ಡಿಪಿ ರಾಜ್ಯ ಮಹಿಳಾ ಘಟಕ ಪ್ರಧಾನ ಕಾರ್ಯದರ್ಶಿ ಲೇಖನ ಚಂದ್ರನಾಯಕ್, ಶುಂಠಿ ವ್ಯಾಪಾರಿ ಅಜ್ಮಲ್ ಹುಸೇನ್, ಕೆರೆಹಳ್ಳಿ ರವಿ, ವಡಾಹೊಸಹಳ್ಳಿ ಶಿವು, ಫ್ಯಾನ್ಸಿ ರಮೇಶ್, ಮಳವಳ್ಳಿ ವಿಜಯ್ ಹಾಗೂ ಗ್ರಾಮ ಪಂಚಾಯಿತಿ ಸದಸ್ಯರು ಸೇರಿದಂತೆ ಇನ್ನಿತರರು ಇದ್ದರು.

Malnad Times App ಡೌನ್‌ಲೋಡ್ ಮಾಡಿಶಿವಮೊಗ್ಗ ಮತ್ತು ಮಲೆನಾಡಿನ ಸುದ್ದಿಗಳನ್ನು ತಕ್ಷಣ ಪಡೆಯಿರಿ.
GET IT ONGoogle Play
ಮಾಹಿತಿ ಮತ್ತು ಮೂಲ: ಈ ವರದಿಯನ್ನು Malnad Times ಸಂಪಾದಕೀಯ ತಂಡವು ಲಭ್ಯ ಮಾಹಿತಿಯ ಆಧಾರದಲ್ಲಿ ಪರಿಶೀಲಿಸಿದೆ.

Mahesh Hindlemane

ಮಲೆನಾಡಿನ ಹೆಬ್ಬಾಗಿಲು ಶಿವಮೊಗ್ಗದ ಸ್ಥಳೀಯ ನ್ಯೂಸ್ ವೆಬ್‌ಸೈಟ್‌ಗಳಲ್ಲಿ ಪ್ರತಿನಿಧಿಯಾಗಿ ವೃತ್ತಿ ಜೀವನ ಪ್ರಾರಂಭ. ಪತ್ರಿಕೋದ್ಯಮದಲ್ಲಿ 8 ವರ್ಷಗಳ ಅನುಭವ. ಜಿಲ್ಲಾ ಮಟ್ಟದ ದಿನಪತ್ರಿಕೆಗಳಲ್ಲಿ ಹಾಗೂ ವೆಬ್‌ಸೈಟ್‌ಗಳಲ್ಲಿ ಮಲೆನಾಡಿಗೆ ಸಂಬಂಧಿಸಿದ ವಿಷಯಗಳ ಲೇಖನಗಳನ್ನು ಬರೆದಿದ್ದೇನೆ. ಪ್ರಸ್ತುತ <strong>'ಮಲ್ನಾಡ್ ಟೈಮ್ಸ್'</strong> ಡಿಜಿಟಲ್ ನಲ್ಲಿ ಸಂಪಾದಕನಾಗಿ ಮುಂದುವರೆದಿದ್ದೇನೆ. <a href="mailto:[email protected]">[email protected]</a>