ರಸ್ತೆಗೆ ಅಡ್ಡಲಾಗಿ ಬಿದ್ದ ಮರ, ಪರದಾಡಿದ ಪ್ರಯಾಣಿಕರು !

Written by malnadtimes.com

Published on:

HOSANAGARA | ಮರವೊಂದು ರಸ್ತೆಗೆ ಅಡ್ಡಲಾಗಿ ಬಿದ್ದು ಪ್ರಯಾಣಿಕರು ಪರದಾಡಿದ ಘಟನೆ ಯಡೂರು ಬಳಿಯ ಹಳಗುಂದ ಗ್ರಾಮದಲ್ಲಿ ನಡೆದಿದೆ.

WhatsApp Group Join Now
Telegram Group Join Now
Instagram Group Join Now

ಸೋಮವಾರ ರಾತ್ರಿ ಸುರಿದ ಧಾರಾಕಾರ ಮಳೆಯಿಂದಾಗಿ ಮರ ಬಿದ್ದು ಹೊಸನಗರ ತಾಲೂಕಿನ ಹಳಗುಂದ ಗ್ರಾಮದಲ್ಲಿ ತೀರ್ಥಹಳ್ಳಿ – ಮಾಸ್ತಿಕಟ್ಟೆ – ಕುಂದಾಪುರ ರಸ್ತೆ ಸಂಪರ್ಕ ಕಡಿತಗೊಂಡಿತ್ತು. ಮಂಗಳೂರು, ಉಡುಪಿ, ಕುಂದಾಪುರ, ಮಣಿಪಾಲ ಹೋಗುವ ಪ್ರಯಾಣಿಕರ ಪರದಾಡುವಂತಾಗಿದೆ.

ರಾತ್ರಿ ಮೂರು ಗಂಟೆಯಿಂದ ರಸ್ತೆ ಬದಿ ಎರಡು ಕಡೆ ವಾಹನಗಳು ಸಾಲುಗಟ್ಟಿ ನಿಂತಿದ್ದವು. ಆಗುಂಬೆಯಲ್ಲಿ ಭಾರಿ ವಾಹನಗಳ ನಿಷೇಧದ ಬೆನ್ನಲ್ಲೇ ಮಂಗಳೂರು ತಲುಪಲು ಬದಲಿ ಮಾರ್ಗ ಇದಾಗಿತ್ತು.

ಈ ಬದಲಿ ವ್ಯವಸ್ಥೆಯೂ ಮಳೆ ಗಾಳಿಯಿಂದಾಗಿ ಅವ್ಯವಸ್ಥೆಗೊಂಡು ಬೆಳಗ್ಗೆ ಅರಣ್ಯಾಧಿಕಾರಿಗಳು ಮತ್ತು ಸಿಬ್ಬಂದಿ ಮರ ತೆರವುಗಳಿಸಿದ್ದಾರೆ. ಸುಮಾರು ಮೂರು ಗಂಟೆ ರಸ್ತೆ ಸಂಚಾರ ಸ್ಥಗಿತಗೊಂಡಿದೆ.

ರಸ್ತೆ ಸಂಚಾರ ಸ್ಥಗಿತ ಹಿನ್ನಲೆ ವಾಹನದಲ್ಲಿಯೇ ಕೆಲ ಕಾಲ ಪ್ರಯಾಣಿಕರು ಕಳೆಯವಂತಾಗಿ ಅವ್ಯವಸ್ಥೆಗೆ ಅಧಿಕಾರಿಗಳ ವಿರುದ್ಧ ಆಕ್ರೋಶ ಹೊರ ಹಾಕಿದರು.

Leave a Comment