ತೀರ್ಥಹಳ್ಳಿ ; ಮಲೆನಾಡಿನಾದ್ಯಂತ ಪುಷ್ಯ ಮಳೆಯ ಆರ್ಭಟಕ್ಕೆ ಜೋರಾಗಿದ್ದು ನದಿಗಳು, ಹಳ್ಳ-ಕೊಳ್ಳಗಳು ತುಂಬಿ ಹರಿಯುತ್ತಿದ್ದು ಮಾಲತಿ ನದಿಯ ನೀರಿನ ಮಟ್ಟ ಹೆಚ್ಚಳವಾಗಿದೆ. ಪರಿಣಾಮ ಶೃಂಗೇರಿ-ಹೊಸಗದ್ದೆ- ಕುಂದಾದ್ರಿ ರಸ್ತೆ ಸಂಪರ್ಕ ಕಡಿತಗೊಂಡಿದೆ ಎಂದು ವರದಿಯಾಗಿದೆ.
ಹೊನ್ನೆತಾಳು ಗ್ರಾಮ ಪಂಚಾಯತ್ ವ್ಯಾಪ್ತಿಯ ನಾಬಳ ಬಳಿ ರಸ್ತೆ ಮೇಲೆ ನೀರು ಹರಿಯುತ್ತಿದ್ದು ಸಂಪರ್ಕ ಕಡಿತಗೊಂಡಿದೆ.
ಶೃಂಗೇರಿಯಿಂದ ಕುಂದಾದ್ರಿ ಹಾಗೂ ಗುಡ್ಡೇಕೇರಿಗೆ ಬರುವ ಪ್ರವಾಸಿಗರು ಬದಲಿ ಮಾರ್ಗದಲ್ಲಿ ಸಂಚರಿಸಬೇಕಿದೆ.

