ತೀರ್ಥಹಳ್ಳಿ

ಲೂರ್ದುಮಾತೆಯ ದೇವಾಲಯ- ತೀರ್ಥಹಳ್ಳಿ: ‘ಕ್ಯಾಥೋಲಿಕ್ ಅಸೋಸಿಯೇಶನ್’ ಹಾಗೂ ‘ರೋಟರಿ ಕ್ಲಬ್’ ವತಿಯಿಂದ ಬೃಹತ್ ಉಚಿತ ಆರೋಗ್ಯ ಶಿಬಿರ

ತೀರ್ಥಹಳ್ಳಿ: ಪಟ್ಟಣದ  ಲೂರ್ದುಮಾತೆಯ ದೇವಾಲಯದ 125ನೇ ಜ್ಯೂಬಿಲಿ  ವರ್ಷಾಚರಣೆಯ ಅಂಗವಾಗಿ ಲೂರ್ದುಮಾತೆಯ ದೇವಾಲಯದ ಆವರಣದಲ್ಲಿ ದೇವಾಲಯದ ‘ಕ್ಯಾಥೋಲಿಕ್ ಅಸೋಸಿಯೇಷನ್’ ಸಂಘಟನೆ  ಹಾಗೂ ‘ಮಹಿಳಾ ಮತ್ತು ಆರೋಗ್ಯ ಆಯೋಗ’ ಗಳು ತೀರ್ಥಹಳ್ಳಿ ‘ರೋಟರಿ ಸಂಸ್ಥೆ’ ಯ ಸಹಯೋಗದೊಂದಿಗೆ ಬೃಹತ್ ಉಚಿತ ಆರೋಗ್ಯ ಶಿಬಿರ ಯಶಸ್ವಿಯಾಗಿ ನಡೆಯಿತು.

WhatsApp Group Join Now
Telegram Group Join Now
Instagram Group Join Now

ಈ ಶಿಬಿರದ ಕಾರ್ಯಕ್ರಮದಲ್ಲಿ ಕ್ಷೇತ್ರದ ಶಾಸಕ ಆರಗ ಜ್ಞಾನೇಂದ್ರ ಮಾತನಾಡಿ ವೈದ್ಯರ  ಸೇವೆಯನ್ನು ಶ್ಲಾಘಿಸಿ, ಈ ಸಮಯದಲ್ಲಿ ತೀರ್ಥಹಳ್ಳಿಯಲ್ಲಿ ಒಂದು ಕೌಟುಂಬಿಕ ಆಪ್ತ ಸಮಾಲೋಚನೆ ಕೇಂದ್ರದ ಸ್ಥಾಪನೆಯ ಅಗತ್ಯದ ಕುರಿತು ಪ್ರಾಸ್ತಾಪಿಸಿದರು. 

 ಉದ್ಘಾಟನಾ ಕಾರ್ಯಕ್ರಮ ಅತಿಥಿಗಳಾಗಿ ಮಾತನಾಡಿದ ಪಟ್ಟಣ ಪಂಚಾಯತ್ ಅಧ್ಯಕ್ಷ   ರೆಹಮತುಲ್ಲಾ ಅಸಾದಿ ಮಾನವ ನಿರ್ಮಿತ ಯಾವುದೇ ಅತ್ಯಾಧುನಿಕ ಉಪಕರಣಗಳು ಕೂಡ ಮಾನವನ ದೇಹದಲ್ಲಿದ ಅಂಗಾಂಗಗಳಿಗೆ ಸಾಟಿಯಾಗಲು ಸಾಧ್ಯವಿಲ್ಲ. ಇಂತಹ  ಅಂಗಾಂಗಗಳ ಅರೋಗ್ಯ ಕಾಪಾಡಿಕೊಳ್ಳುವುದು ಇಂದಿನ ಪ್ರಥಮ ಆದ್ಯತೆ ಎಂದರು.

 ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಲೂರ್ದುಮಾತೆ ದೇವಾಲಯದ ಗುರುಗಳಾದ ವಂ.ಫಾ|| ವೀರೇಶ್ ವಿಕ್ಟರ್ ಮೊರಾಸ್‌ ಮಾತನಾಡಿ, ಮನುಷ್ಯನಿಗೆ ಎಷ್ಟು ಹಣವಿದ್ದರೂ ಅರೋಗ್ಯವಿಲ್ಲದಿದ್ದರೆ ಎಲ್ಲವೂ ವ್ಯರ್ಥ, ಇಂದಿನ ಆರೋಗ್ಯ ಶಿಬಿರದ ಸದುಪಯೋಗ ಪಡಿಸಿಕೊಳ್ಳುವಂತೆ ಕೋರಿದರು. 

Malnad Times App ಡೌನ್‌ಲೋಡ್ ಮಾಡಿಶಿವಮೊಗ್ಗ ಮತ್ತು ಮಲೆನಾಡಿನ ಸುದ್ದಿಗಳನ್ನು ತಕ್ಷಣ ಪಡೆಯಿರಿ.
GET IT ONGoogle Play

ತೀರ್ಥಹಳ್ಳಿ ರೋಟರಿ ಸಂಸ್ಥೆ ಅಧ್ಯಕ್ಷರಾದ ಭರತ್ ಕುಮಾರ್, ರೋಟರಿ ಅನಿಲ್ ಕುಮಾರ್, ಪ.ಪಂ.ಉಪಾಧ್ಯಕ್ಷೆ ಗೀತಾ ರಮೇಶ್, ಕ್ಯಾಥೊಲಿಕ್ ಅಸೋಸಿಯೇಷನ್ ಪದಾಧಿಕಾರಿಗಳು, ಮುಂತಾದವರಿದ್ದರು.

 ಶಿವಮೊಗ್ಗದ ಸರ್ಜಿ ಆಸ್ಪತ್ರೆಯ ವಿವಿಧ ವಿಭಾಗದ ತಜ್ಞ ವೈದ್ಯರು ಶಿಬಿರದ ಯಶಸ್ವಿಗೆ ಸಹಕರಿಸಿದರು ಹಾಗೂ ಈ ಶಿಬಿರದಲ್ಲಿ ತೀರ್ಥಹಳ್ಳಿ ‘ಮಿಲಾಗ್ರಿಸ್  ಕೋ-ಅಪರೇಟಿವ್ ಬ್ಯಾಂಕ್’ನ ವತಿಯಿಂದ  ಆರೋಗ್ಯ ಕಾರ್ಡ್ ನೋಂದಣಿ ಹಾಗೂ ನವೀಕರಣ ಮಾಡಿಸಲಾಯಿತು.

ಮಾಹಿತಿ ಮತ್ತು ಮೂಲ: ಈ ವರದಿಯನ್ನು Malnad Times ಸಂಪಾದಕೀಯ ತಂಡವು ಲಭ್ಯ ಮಾಹಿತಿಯ ಆಧಾರದಲ್ಲಿ ಪರಿಶೀಲಿಸಿದೆ.

Koushik G K

MalnadTimes.com ವೆಬ್‌ಸೈಟ್‌ನ ಸ್ಥಾಪಕ ಮತ್ತು ನಿರ್ವಾಹಕರಾಗಿದ್ದಾರೆ. ಅಕ್ಟೋಬರ್ 3 2019 ರಲ್ಲಿ ಈ ತಾಣವನ್ನು ಆರಂಭಿಸಿದ ಅವರು, ಮೊದಲಿಗೆ ಐಟಿ ಕ್ಷೇತ್ರದಲ್ಲಿ ಕೆಲಸ ಮಾಡಿದ ಅನುಭವ ಹೊಂದಿದ್ದಾರೆ. ತಮ್ಮ ತಾಂತ್ರಿಕ ಪರಿಣತಿಯನ್ನು ಮತ್ತು ಸ್ಥಳೀಯ ಸುದ್ದಿಗಳ ಪ್ರೀತಿಯನ್ನು ಒಂದಾಗಿಸಿ, ಮಲ್ನಾಡಿನ ಜನತೆಗೆ ನಿಖರವಾದ, ವಿಶ್ವಾಸಾರ್ಹ ಹಾಗೂ ಸಮಗ್ರ ಸುದ್ದಿಗಳನ್ನು ತಲುಪಿಸುವ ನಿಟ್ಟಿನಲ್ಲಿ ಈ ತಾಣವನ್ನು ರೂಪಿಸಿದ್ದಾರೆ. Malnad Times ಮೂಲಕ  ಶಿವಮೊಗ್ಗ ಮತ್ತು ಮಲ್ನಾಡು ಭಾಗದ ಸಮುದಾಯದ ಧ್ವನಿಯಾಗಿ, ಗ್ರಾಮೀಣ ಬದುಕು, ಪರಿಸರ, ಕೃಷಿ, ಶಿಕ್ಷಣ, ಮತ್ತು ಸಾರ್ವಜನಿಕ ವಿಚಾರಗಳನ್ನು ತಲುಪಿಸುವ ಪ್ರಯತ್ನದಲ್ಲಿ ತೊಡಗಿದ್ದಾರೆ.ಈ ತಾಣದ ನಿರ್ವಹಣೆ, ತಾಂತ್ರಿಕ ಹಾಗೂ ಸಂಪಾದಕೀಯ ಕಾರ್ಯಗಳಲ್ಲಿ ನಿತ್ಯ ಭಾಗವಹಿಸುತ್ತಿದ್ದಾರೆ.Contact No -7022818650