Crime News

ಶಿವಮೊಗ್ಗದಲ್ಲಿ ಹಾಡಹಗಲೇ ರೌಡಿಶೀಟರ್‌ನ ಬರ್ಬರ ಹತ್ಯೆ !

SHIVAMOGGA ; ಹಾಡಹಗಲೇ ರೌಡಿಶೀಟರ್ ನನ್ನು ಬರ್ಬರವಾಗಿ ಹತ್ಯೆ ಮಾಡಿರುವ ಘಟನೆ ನಗರದ ಹಳೇ ಬೊಮ್ಮನಕಟ್ಟೆಯಲ್ಲಿ ನಡೆದಿದೆ.

WhatsApp Group Join Now
Telegram Group Join Now
Instagram Group Join Now
📢 Stay Updated! Join our WhatsApp Channel Now →

ಕಬಡ ರಾಜೇಶ್ ಶೆಟ್ಟಿ ಮರ್ಡರ್ ಆಗಿರುವ ರೌಡಿಶೀಟರ್. ಐದು ಜನರ ತಂಡದಿಂದ ಮಾರಕಾಸ್ತ್ರಗಳಿಂದ ಹಲ್ಲೆ ನಡೆಸಿ ಈ ಕೃತ್ಯ ಎಸಗಲಾಗಿದೆ ಎಂದು ತಿಳಿದುಬಂದಿದೆ.

ನವುಲೆ ಆನಂದನ ಸಹಚರ ಆಗಿದ್ದ ರಾಜೇಶ್ ಶೆಟ್ಟಿ ಬಸವನ ಗುಡಿಯ ಕ್ಯಾಸೆಟ್ ಅಂಗಡಿ ಮಾಲೀಕ ರಾಘುಶೆಟ್ಟಿ ಮರ್ಡರ್ ಕೇಸ್ ನಲ್ಲಿದ್ದ ಎನ್ನಲಾಗುತಿದ್ದು, ಇತ್ತೀಚೆಗಷ್ಟೇ ತನ್ನ ವಿರೋಧಿ ಬೊಮ್ಮನಕಟ್ಟೆಯ ಕರಿಯ ವಿನಯ್ ಮೇಲೆ ಹಲ್ಲೆ ಮಾಡಿ ಅವನ ಕೈ ಬೆರಳುಗಳನ್ನು ಕತ್ತರಿಸುವಂತೆ ಹಲ್ಲೆ ಮಾಡಿದ್ದನು ಎನ್ನಲಾಗುತ್ತಿದೆ.

ಹಳೆಯ ದ್ವೇಷದಿಂದಾಗಿ ಕರಿಯ ವಿನಯ್ ತಂಡ ರಾಜೇಶ್ ಶೆಟ್ಟಿ ಮೇಲೆ ಮುಗಿಬಿದ್ದು ಬರ್ಬರ ಹತ್ಯೆ ಮಾಡಿದ್ದಾರೆ ಎಂದು ಹೇಳಲಾಗುತ್ತಿದೆ.

ಸ್ಥಳಕ್ಕೆ ವಿನೋಬನಗರ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ಮಾಹಿತಿ ಮತ್ತು ಮೂಲ: ಈ ವರದಿಯ ಮಾಹಿತಿ ವರದಿಗಾರರು, ಅಧಿಕೃತ ಪ್ರಕಟಣೆಗಳು ಅಥವಾ ಸ್ಥಳದಲ್ಲಿನ ವಿಶ್ವಾಸಾರ್ಹ ಮೂಲಗಳಿಂದ ಪರಿಶೀಲಿಸಲಾಗಿದೆ.

Mahesh Hindlemane

ಮಲೆನಾಡಿನ ಹೆಬ್ಬಾಗಿಲು ಶಿವಮೊಗ್ಗದ ಸ್ಥಳೀಯ ನ್ಯೂಸ್ ವೆಬ್‌ಸೈಟ್‌ಗಳಲ್ಲಿ ಪ್ರತಿನಿಧಿಯಾಗಿ ವೃತ್ತಿ ಜೀವನ ಪ್ರಾರಂಭ. ಪತ್ರಿಕೋದ್ಯಮದಲ್ಲಿ 8 ವರ್ಷಗಳ ಅನುಭವ. ಜಿಲ್ಲಾ ಮಟ್ಟದ ದಿನಪತ್ರಿಕೆಗಳಲ್ಲಿ ಹಾಗೂ ವೆಬ್‌ಸೈಟ್‌ಗಳಲ್ಲಿ ಮಲೆನಾಡಿಗೆ ಸಂಬಂಧಿಸಿದ ವಿಷಯಗಳ ಲೇಖನಗಳನ್ನು ಬರೆದಿದ್ದೇನೆ. ಪ್ರಸ್ತುತ <strong>'ಮಲ್ನಾಡ್ ಟೈಮ್ಸ್'</strong> ಡಿಜಿಟಲ್ ನಲ್ಲಿ ಸಂಪಾದಕನಾಗಿ ಮುಂದುವರೆದಿದ್ದೇನೆ. <a href="mailto:[email protected]">[email protected]</a>