Chikmagaluru News

ಚಲಿಸುತ್ತಿದ್ದ ಕಾರಿನಲ್ಲಿ ಏಕಾಏಕಿ ಕಾಣಿಸಿಕೊಂಡ ಬೆಂಕಿ, ಹೊರಜಿಗಿದು ಪ್ರಾಣ ಉಳಿಸಿಕೊಂಡ ಪ್ರಯಾಣಿಕರು !

Kadur | ಚಲಿಸುತ್ತಿದ್ದ ಕಾರಿ (Car)ನಲ್ಲಿ ಏಕಾಏಕಿ ಬೆಂಕಿ (Fire) ಕಾಣಿಸಿಕೊಂಡು ಸುಟ್ಟು ಕರಕಲಾಗಿರುವ ಘಟನೆ ಚಿಕ್ಕಮಗಳೂರು (Chikkamagaluru) ಜಿಲ್ಲೆಯ ಕಡೂರು ತಾಲೂಕಿನ ಸರಸ್ವತಿಪುರ ಗೇಟ್ ಬಳಿ ಶನಿವಾರ ನಡೆದಿದೆ.

WhatsApp Group Join Now
Telegram Group Join Now
Instagram Group Join Now
📢 Stay Updated! Join our WhatsApp Channel Now →

ಚಿಕ್ಕಮಗಳೂರಿನಿಂದ ಹುಬ್ಬಳ್ಳಿ ಕಡೆಗೆ ಹೋಗುತ್ತಿದ್ದ ಸ್ವಿಫ್ಟ್ ಡಿಸೈರ್ ಕಾರು ಸರಸ್ವತಿಪುರ ಗೇಟ್ ತಲುಪುತ್ತಿದ್ದಂತೆ ಏಕಾಏಕಿ ಬೆಂಕಿ ಕಾಣಿಸಿಕೊಂಡಿದೆ ಕೂಡಲೇ ಎಚ್ಚೆತ್ತ ಚಾಲಕ ಕಾರನ್ನು ರಸ್ತೆ ಬದಿಯಲ್ಲಿ ನಿಲ್ಲಿಸಿದ್ದಾನೆ ಈ ವೇಳೆ ಕಾರಿನಲ್ಲಿದ್ದ ನಾಲ್ವರು ಪ್ರಯಾಣಿಕರು ಕಾರಿನಿಂದ ಹೊರ ಜಿಗಿದು ಪ್ರಾಣ ಉಳಿಸಿಕೊಂಡಿದ್ದಾರೆ.

ಪ್ರಯಾಣಿಕರು ಹೊರಬಂದ ಕೆಲವೇ ಹೊತ್ತಿನಲ್ಲಿ ಇಡೀ ಕಾರು ಬೆಂಕಿಗಾಹುತಿಯಾಗಿದ್ದು, ವಿಷಯ ತಿಳಿದು ಸ್ಥಳಕ್ಕಾಗಮಿಸಿದ ಕಡೂರು ಅಗ್ನಿಶಾಮಕ ಠಾಣೆಯ ಸಿಬ್ಬಂದಿ ಬೆಂಕಿ ನಂದಿಸಿದ್ದಾರೆ. ಅಷ್ಟರಲ್ಲಾಗಲೇ ಕಾರು ಸಂಪೂರ್ಣ ಸುಟ್ಟು ಕರಕಲಾಗಿತ್ತು.

ಕಡೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದ್ದು ಶಾರ್ಟ್ ಸರ್ಕ್ಯೂಟ್ ನಿಂದ ಈ ಅವಘಡ ಸಂಭವಿಸಿದೆ ಎಂದು ಹೇಳಲಾಗಿದೆ.

Read More :Accident | ಕಾರು ಮತ್ತು ಓಮ್ನಿ ನಡುವೆ ಭೀಕರ ಅಪಘಾತ, ಓರ್ವ ಸ್ಥಳದಲ್ಲಿಯೇ ಸಾವು !

ಮಾಹಿತಿ ಮತ್ತು ಮೂಲ: ಈ ವರದಿಯ ಮಾಹಿತಿ ವರದಿಗಾರರು, ಅಧಿಕೃತ ಪ್ರಕಟಣೆಗಳು ಅಥವಾ ಸ್ಥಳದಲ್ಲಿನ ವಿಶ್ವಾಸಾರ್ಹ ಮೂಲಗಳಿಂದ ಪರಿಶೀಲಿಸಲಾಗಿದೆ.

Mahesh Hindlemane

ಮಲೆನಾಡಿನ ಹೆಬ್ಬಾಗಿಲು ಶಿವಮೊಗ್ಗದ ಸ್ಥಳೀಯ ನ್ಯೂಸ್ ವೆಬ್‌ಸೈಟ್‌ಗಳಲ್ಲಿ ಪ್ರತಿನಿಧಿಯಾಗಿ ವೃತ್ತಿ ಜೀವನ ಪ್ರಾರಂಭ. ಪತ್ರಿಕೋದ್ಯಮದಲ್ಲಿ 8 ವರ್ಷಗಳ ಅನುಭವ. ಜಿಲ್ಲಾ ಮಟ್ಟದ ದಿನಪತ್ರಿಕೆಗಳಲ್ಲಿ ಹಾಗೂ ವೆಬ್‌ಸೈಟ್‌ಗಳಲ್ಲಿ ಮಲೆನಾಡಿಗೆ ಸಂಬಂಧಿಸಿದ ವಿಷಯಗಳ ಲೇಖನಗಳನ್ನು ಬರೆದಿದ್ದೇನೆ. ಪ್ರಸ್ತುತ <strong>'ಮಲ್ನಾಡ್ ಟೈಮ್ಸ್'</strong> ಡಿಜಿಟಲ್ ನಲ್ಲಿ ಸಂಪಾದಕನಾಗಿ ಮುಂದುವರೆದಿದ್ದೇನೆ. <a href="mailto:[email protected]">[email protected]</a>