ಶಿವಮೊಗ್ಗ,:ನಾವು ಪ್ರತಿನಿತ್ಯ ಬಹುತೇಕ ಎಲ್ಲ ವಲಯಗಳಲ್ಲಿ ಅಂತರ್ಜಾಲ ಬಳಸುತ್ತಿದ್ದು ಸುರಕ್ಷಿತ ಮತ್ತು ಜವಾಬ್ದಾರಿಯುತ ಅಂತರ್ಜಾಲ ಬಳಕೆ ಬಗ್ಗೆ ಹೆಚ್ಚೆಚ್ಚು ಜಾಗೃತರಾಗಿ ಎಚ್ಚರಿಕೆಯಿಂದ ಇರಬೇಕು ಎಂದು ಅಪರ ಜಿಲ್ಲಾ ರಕ್ಷಣಾಧಿಕಾರಿ ಎ.ಜಿ.ಕಾರಿಯಪ್ಪ ತಿಳಿಸಿದರು.
ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಎನ್ಐಸಿ ಶಿವಮೊಗ್ಗ ಇವರ ಸಹಯೋಗದಲ್ಲಿ ಮಂಗಳವಾರ ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ಏರ್ಪಡಿಸಲಾಗಿದ್ದ ಸುರಕ್ಷಿತ ಅಂತರ್ಜಾಲ ದಿನ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.
ಮಕ್ಕಳಾದಿಯಾಗಿ ಎಲ್ಲರೂ ಇಂದು ಅಂತರ್ಜಾಲ ಬಳಕೆಯಲ್ಲಿ ತೊಡಗಿದ್ದೇವೆ. ಬ್ಯಾಂಕಿAಗ್, ಇ ಆಫೀಸ್, ಆನ್ಲೈನ್ ತರಗತಿಗಳು, ಮೀಟಿಂಗ್ಗಳು, ಹೀಗೆ ಎಲ್ಲೆಡೆ ಅಂತರ್ಜಾಲ ಬಳಕೆ ವ್ಯಾಪಕವಾಗಿದೆ. ಅದೇ ರೀತಿಯಲ್ಲಿ ಸೈಬರ್ ಅಪರಾಧಗಳೂ ಹೆಚ್ಚಿವೆ. ಅಕ್ಷರಸ್ಥರೇ ಹೆಚ್ಚು ಈ ಅಪರಾಧಗಳಿಗೆ ಬಲಿಯಾಗುತ್ತಿದ್ದಾರೆ. ಕೋಟಿಗಟ್ಟಲೆ ಹಣವನ್ನು ಖಾತೆಯಿಂದ ಕಬಳಿಸಲಾಗುತ್ತಿದೆ. ಡಿಜಿಟಲ್ ಅರೆಸ್ಟ್ಗಳಾಗುತ್ತಿವೆ. ಆದ್ದರಿಂದ ಪ್ರತಿಯೊಬ್ಬರು ಸುರಕ್ಷಿತ ಅಂತರ್ಜಾಲ ಬಳಕೆ ಬಗ್ಗೆ ಹೆಚ್ಚೆಚ್ಚು ತಿಳಿದುಕೊಳ್ಳಬೇಕು. ವಂಚನೆಗೆ ಒಳಗಾದಲ್ಲಿ ತಕ್ಷಣ 1930 ಗೆ ಕರೆ ಮಾಡಿ ವರದಿ ಮಾಡಬೇಕು.
ಕಚೇರಿಗಳಲ್ಲಿ ಲಾಗಿನ್ ಮಾಹಿತಿಗಳನ್ನು ಸುರಕ್ಷಿತವಾಗಿ ಇಟ್ಟುಕೊಳ್ಳುವುದು ಅತಿ ಅಗತ್ಯ. ಬಳಕೆ ನಂತರ ಕಡ್ಡಾಯವಾಗಿ ಲಾಗ್ ಔಟ್ ಮಾಡಬೇಕು. ಮಕ್ಕಳು, ಹದಿಹರೆಯದವರು ಕಲಿಕೆ, ಮನರಂಜನೆಗಾಗಿ ಇಂದು ಹೆಚ್ಚಾಗಿ ಅಂತರ್ಜಾಲಕ್ಕೆ ಅಂಟಿಕೊAಡಿದ್ದು, ವಿಶೇಷವಾಗಿ ಹದಿಹರೆಯದವರು ಯಾವ ರೀತಿಯ ಸೈಟ್ಗಳನ್ನು ವೀಕ್ಷಣೆ ಮಾಡುತ್ತಿದ್ದಾರೆ. ಅವರ ಸುರಕ್ಷತೆ ಬಗ್ಗೆ, ದಾರಿತಪ್ಪುವ ಸೈಟ್ಗಳಿಗೆ ಬಲಿಯಾಗದಂತೆ ನಿಗಾ ವಹಿಸಿ ಕಾಳಜಿ ತೆಗೆದುಕೊಳ್ಳಬೇಕು.
ವಂಚಕರು ಮೊಬೈಲ್ಗೆ ಕರೆ ಮಾಡಿ ನೀವು ಕಳುಹಿಸಿದ ಕೊರಿಯರ್ ಪಾರ್ಸಲ್ಗಳಲ್ಲಿ ಮಾದಕ ವಸ್ತು, ನಕಲಿ ಪಾಸ್ಪೋರ್ಟ್ಗಳು ಇವೆ ನಿಮ್ಮ ಮೇಲೆ ದೆಹಲಿ ಕೊಲ್ಕತಾ, ಬೆಂಗಳೂರು ಸೈಬರ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ, ಜುಡೀಷಿಯಲ್ ಅರೆಸ್ಟ್ ವಾರೆಂಟ್ ಇದೆ ಎಂದು ಸಂಭಾಷಣೆ ನಡೆಸಿ ಬೇರೊಬ್ಬರನ್ನು ಸಂಪರ್ಕ ಮಾಡುವಂತೆ ಒತ್ತಡಕ್ಕೆ ಸಿಲುಕಿಸಿ ಹಣವನ್ನು ಪಡೆದು ವಂಚಿಸುವುದು, ಕೆವೈಸಿ ಅಪ್ಡೇಟ್ ಹೆಸರಿನಲ್ಲಿ ನೈಜ ಬ್ಯಾಂಕಿAಗ್ ಅಪ್ಲಿಕೇಶನ್ಗಳಂತೆ ಕಾಣುವ ಎಪಿಕೆ ಫೈಲ್ ಕಳುಹಿಸಿ ವಂಚಿಸುವುದು, ನಕಲಿ ಹೂಡಿಕೆ ಅಪ್ಲಿಕೇಷನ್ ಬಳಸಿ ಕಡಿಮೆ ಅವಧಿಯಲ್ಲಿ ಹೆಚ್ಚಿನ ಆದಾಯವನ್ನು ನೀಡುವ ಭರವಸೆ ನೀಡುವ ನಕಲಿ ಹೂಡಿಕೆ ಮಾಡುವ ಆ್ಯಪ್ ಗಳು ಹೆಚ್ಚಾಗಿದೆ. ಹಾಗೂ ವಿದೇಶಗಳಿಂದಲೂ ಸೈಬರ್ ವಂಚಕರು ಕರೆ ಮಾಡಿ ವಂಚನೆ ಮಾಡುತ್ತಿದ್ದು ಈ ಬಗ್ಗೆ ಬಹಳ ಎಚ್ಚರಿಕೆ ವಹಿಸಬೇಕು, ಸುರಕ್ಷಿತ ಮತ್ತು ಜವಾಬ್ದಾರಿಯುತ ಅಂತರ್ಜಾಲ ಬಳಕೆ ಬಗ್ಗೆ ತಿಳಿದುಕೊಳ್ಳಬೇಕು ಎಂದರು.
ಎನ್ಐಸಿಯ ಜಿಲ್ಲಾ ಸೂಚನಾ ವಿಜ್ಞಾನಾಧಿಕಾರಿ ನಿತಿನ್ ಮಾತನಾಡಿ, ‘ಚತುರ ತಂತ್ರಜ್ಞಾನ, ಸುರಕ್ಷಿತ ಆಯ್ಕೆಗಳು, ಎಐ ನ ಸುರಕ್ಷಿತ ಮತ್ತು ಜವಾಬ್ದಾರಿಯುತ ಬಳಕೆಯನ್ನು ಅನ್ವೇಷಿಸುವುದು’ ಎಂಬುದು ಈ ವರ್ಷದ ಸುರಕ್ಷಿತ ಅಂತರ್ಜಾಲ ಬಳಕೆ ದಿನದ ಘೋಷವಾಕ್ಯವಾಗಿದ್ದು, ನಾವೆಲ್ಲರೂ ಅಂತರ್ಜಾಲ ವಂಚನೆ ಬಗ್ಗೆ ಜಾಗರೂಕರಾಗಿರಬೇಕು.
ಅಂತರ್ಜಾಲ ವಂಚನೆ ಕುರಿತು ಜಾಗೃತಿ ಮೂಡಿಸುವುದು ಹಾಗೂ ಸುರಕ್ಷಿತ ಅಂತರ್ಜಾಲ ಬಳಕೆ ಬಗ್ಗೆ ತಿಳುವಳಿಕೆ ಮೂಡಿಸುವುದು ಈ ದಿನದ ಮುಖ್ಯ ಉದ್ದೇಶವಾಗಿದೆ ಎಂದ ಅವರು ಪಿಪಿಟಿ ಮೂಲಕ ಸೈಬರ್ ಬೆದರಿಕೆ, ಫಿಶಿಂಗ್, ಎಸ್ಎಂಎಸ್ ಹೆಡರ್ ಥ್ರೆಟ್, ನಕಲಿ ಕಸ್ಟಮರ್ ಕೇರ್ ಸ್ಕ್ಯಾಮ್ ಬಗ್ಗೆ ತಿಳಿಸಿ ನಾವು ಅಂತರ್ಜಾಲ ಬಳಕೆಯಲ್ಲಿ ಇಟ್ಟುಕೊಳ್ಳಬೇಕಾದ ಉತ್ತಮ ಅಭ್ಯಾಸಗಳು, ಸುರಕ್ಷತಾ ವಿಧಾನಗಳು, ಸೈಬರ್ ಅಪರಾಧಗಳನ್ನು ವರದಿ ಮಾಡುವ ಬಗ್ಗೆ ತಿಳಿಸಿದರು. ಹಾಗೂ ನಾವು ಎಂದಿಗೂ ನಮ್ಮ ವೈಯಕ್ತಿಕ ಮಾಹಿತಿ, ಓಟಿಪಿ, ಪಿನ್ ಸಂಖ್ಯೆಗಳನ್ನು ಯಾರೊಂದಿಗೂ ಹಂಚಿಕೊಳ್ಳಬಾರದು. ನಿಯಮಿತವಾಗಿ ಪಿನ್ ಸಂಖ್ಯೆಯನ್ನು ಬದಲಾಯಿಸುತ್ತಿರಬೇಕು ಎಂದರು.
ಸಂಪನ್ಮೂಲ ವ್ಯಕ್ತಿಗಳಾಗಿ ಪಾಲ್ಗೊಂಡಿದ್ದ ಸೈಬರ್ ಕ್ರೈಮ್ ಪೊಲೀಸ್ ಠಾಣೆ ಇನ್ಸ್ಪೆಕ್ಟರ್ ಮಂಜುನಾಥ್ ಮಾತನಾಡಿ, ಆನ್ಲೈನ್ ಸುರಕ್ಷತೆಯ ಬಗ್ಗೆ ಜಾಗೃತಿ ಮೂಡಿವುದು ಈ ದಿನದ ಉದ್ದೇಶವಾಗಿದ್ದು ಇಂದು ನಾವೆಲ್ಲ ಜಾಗತಿಕ ಅಂತರ್ಜಾಲದ ಭಾಗವಾಗಿದ್ದು, ದಿನ ನಿತ್ಯ ಸಂಪರ್ಕಕ್ಕಾಗಿ, ಮಾಹಿತಿ, ಕಲಿಕೆ , ಶಾಪಿಂಗ್, ಸೇವೆಗಳು, ಮನರಂಜನೆ, ಮೀಟಿಂಗ್ಗಳು, ಬ್ಯಾಂಕಿAಗ್, ಹಣಕಾಸು ಹೀಗೆ ಹಲವಾರು ಕಾರ್ಯಗಳಿಗೆ ಅಂತರ್ಜಾಲದ ಮೇಲೆ ಅವಲಂಬಿತರಾಗಿದ್ದೇವೆ. ಅಂತರ್ಜಾಲ ಬಳಕೆಯಿಂದ ಲಾಭ ಮತ್ತು ಅನುಕೂಲಗಳು ಸಾಕಷ್ಟಿದ್ದರೂ ಅನಾನುಕೂಲತೆಗಳು, ನಷ್ಟಗಳ ಬಗ್ಗೆಯೂ ನಾವು ಸಾಕಷ್ಟು ಜಾಗೃತರಾಗಿರಬೇಕು. ಅಂತರ್ಜಾಲ ಬಳಕೆಯಿಂದ ಹಲವಾರು ಸಮಸ್ಯೆಗಳಿದ್ದು, ಫಿಶಿಂಗ್, ಮಾಲ್ ವೇರ್, ಐಡೆಂಟಿಟಿ ಥೆಫ್ಟ್, ಇತರೆ ಅಪರಾಧಗಳ ಕುರಿತು ಎಚ್ಚರಿಕೆಯಿಂದ ಇರಬೇಕೆಂದು ತಿಳಿಸಿದ ಅವರು ಪಿಪಿಟಿ ಪ್ರದರ್ಶನ ಮೂಲಕ ಸುರಕ್ಷಿತ ಅಂತರ್ಜಾಲ ಬಳಕೆ ಬಗ್ಗೆ ಮಾಹಿತಿ ನೀಡಿದರು.
ಕಾರ್ಯಕ್ರಮದಲ್ಲಿ ಡಿವೈ ಎಸ್ಪಿ ಕೃಷ್ಣಮೂರ್ತಿ, ಕೆಎಸ್ಆರ್ಪಿ ಡೆಪ್ಯುಟಿ ಕಮಾಂಡೆAಟ್ ಮಂಜುನಾಥ್ ಎಸ್ ಅಣಜಿ, ಇತರೆ ಅಧಿಕಾರಿಗಳು ಪಾಲ್ಗೊಂಡಿದ್ದರು.
MalnadTimes.com ವೆಬ್ಸೈಟ್ನ ಸ್ಥಾಪಕ ಮತ್ತು ನಿರ್ವಾಹಕರಾಗಿದ್ದಾರೆ. ಅಕ್ಟೋಬರ್ 3 2019 ರಲ್ಲಿ ಈ ತಾಣವನ್ನು ಆರಂಭಿಸಿದ ಅವರು, ಮೊದಲಿಗೆ ಐಟಿ ಕ್ಷೇತ್ರದಲ್ಲಿ ಕೆಲಸ ಮಾಡಿದ ಅನುಭವ ಹೊಂದಿದ್ದಾರೆ. ತಮ್ಮ ತಾಂತ್ರಿಕ ಪರಿಣತಿಯನ್ನು ಮತ್ತು ಸ್ಥಳೀಯ ಸುದ್ದಿಗಳ ಪ್ರೀತಿಯನ್ನು ಒಂದಾಗಿಸಿ, ಮಲ್ನಾಡಿನ ಜನತೆಗೆ ನಿಖರವಾದ, ವಿಶ್ವಾಸಾರ್ಹ ಹಾಗೂ ಸಮಗ್ರ ಸುದ್ದಿಗಳನ್ನು ತಲುಪಿಸುವ ನಿಟ್ಟಿನಲ್ಲಿ ಈ ತಾಣವನ್ನು ರೂಪಿಸಿದ್ದಾರೆ.
Malnad Times ಮೂಲಕ ಶಿವಮೊಗ್ಗ ಮತ್ತು ಮಲ್ನಾಡು ಭಾಗದ ಸಮುದಾಯದ ಧ್ವನಿಯಾಗಿ, ಗ್ರಾಮೀಣ ಬದುಕು, ಪರಿಸರ, ಕೃಷಿ, ಶಿಕ್ಷಣ, ಮತ್ತು ಸಾರ್ವಜನಿಕ ವಿಚಾರಗಳನ್ನು ತಲುಪಿಸುವ ಪ್ರಯತ್ನದಲ್ಲಿ ತೊಡಗಿದ್ದಾರೆ.ಈ ತಾಣದ ನಿರ್ವಹಣೆ, ತಾಂತ್ರಿಕ ಹಾಗೂ ಸಂಪಾದಕೀಯ ಕಾರ್ಯಗಳಲ್ಲಿ ನಿತ್ಯ ಭಾಗವಹಿಸುತ್ತಿದ್ದಾರೆ.Contact No -7022818650





