SAGARA :ತಹಶೀಲ್ದಾರ್’ರಿಂದ ಮಾನಸಿಕ ಕಿರುಕುಳ ಆರೋಪ, ಡೆತ್‌ನೋಟ್ ಬರೆದಿಟ್ಟು ಆತ್ಮಹತ್ಯೆಗೆ ಯತ್ನಿಸಿದ ವಿಎ !

Written by malnadtimes.com

Published on:

SAGARA | ತಹಶೀಲ್ದಾರ್’ರಿಂದ ಮಾನಸಿಕ ಕಿರುಕುಳ ಆರೋಪ ಕೇಳಿಬಂದಿದ್ದು ಗ್ರಾಮ ಲೆಕ್ಕಾಧಿಕಾರಿಯೋಬ್ಬರು ಡೆತ್‌ನೋಟ್ ಬರೆದಿಟ್ಟು ಮಾತ್ರೆ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ ಘಟನೆ ಶಿವಮೊಗ್ಗ (Shivamogga) ಜಿಲ್ಲೆಯ ಸಾಗರ ತಾಲೂಕಿನಲ್ಲಿ ನಡೆದಿದೆ.

WhatsApp Group Join Now
Telegram Group Join Now
Instagram Group Join Now

ಗುಣಮಟ್ಟದ ಶಿಕ್ಷಣ ಮತ್ತು ಪರೀಕ್ಷಾ ಪಾವಿತ್ರ್ಯತೆಯಿಂದ ಉತ್ತಮ ಫಲಿತಾಂಶ ; ಸಚಿವ ಮಧು ಬಂಗಾರಪ್ಪ

ಸಾಗರ ತಾಲೂಕಿನ ತಹಶೀಲ್ದಾರ್ ವಿರುದ್ಧ ಮಾನಸಿಕ ಕಿರುಕುಳ ಆರೋಪ ಕೇಳಿಬಂದಿದ್ದು, ಡೆತ್‌ನೋಟ್ ಬರೆದಿಟ್ಟು ನಿದ್ದೆ ಮಾತ್ರೆ ಸೇವಿಸಿ ವಿಎ ವಿಮಲ ಎನ್ನುವವರು ಆತ್ಮಹತ್ಯೆಗೆ ಯತ್ನಿಸಿದ್ದಾರೆ.

ತಹಶೀಲ್ದಾರ್ ಚಂದ್ರಶೇಖರ್ ನಾಯಕ ವಿರುದ್ಧ ಮಾನಸಿಕ ಕಿರುಕುಳ ಆರೋಪ ಕೇಳಿ ಬಂದಿದೆ. ಸಾಗರ ತಾಲೂಕಿನ ಅರಹ ಗ್ರಾಮದ ವಿಎ ವಿಮಲಾರಿಂದ ಆರೋಪ ಕೇಳಿ ಬಂದಿದೆ. ಗ್ರಾಮ ಲೆಕ್ಕಾಧಿಕಾರಿ ವಿಮಲಾ (33) ಆತ್ಮಹತ್ಯೆಗೆ ಯತ್ನಿಸಿದವರು.

ಅಸ್ವಸ್ಥ ವಿಮಲಾಗೆ ಸಾಗರ ಆಸ್ಪತ್ರೆಯಲ್ಲಿ ಪ್ರಾಥಮಿಕ ಚಿಕಿತ್ಸೆ ನೀಡಿ ಹೆಚ್ಚಿನ ಚಿಕಿತ್ಸೆಗಾಗಿ ಶಿವಮೊಗ್ಗ ಮೆಗ್ಗಾನ್ ಆಸ್ಪತ್ರೆಗೆ ರವಾನಿಸಲಾಗಿದೆ‌.

ಮನೆ ಬೀಗ ಮುರಿದು ನಗ-ನಾಣ್ಯ ದೋಚಿದ ಖದೀಮರು !

Leave a Comment