ಸಾಗರ

ಸಾಗರದಲ್ಲಿ ಮನೆಗೆಲಸದವನಿಂದ ನಗದು ಕಳವು, ಕೆಲವೇ ಗಂಟೆಗಳಲ್ಲಿ ಆರೋಪಿ ಬಂಧನ

ಸಾಗರದ ಅನಲೇಕೊಪ್ಪದಲ್ಲಿ ಮನೆಗೆಲಸ ಮಾಡುತ್ತಿದ್ದ ವ್ಯಕ್ತಿಯೊಬ್ಬ ಗಾಡ್ರೇಜ್‌ನಲ್ಲಿದ್ದ ₹2.54 ಲಕ್ಷ ನಗದು ಕಳವು ಮಾಡಿಕೊಂಡು ಪರಾರಿಯಾಗಿದ್ದ ಪ್ರಕರಣವನ್ನು ಸಾಗರ ಪೇಟೆ ಪೊಲೀಸರು ಕೆಲವೇ ಗಂಟೆಗಳಲ್ಲಿ ಭೇದಿಸಿದ್ದಾರೆ. ಮಹಾರಾಷ್ಟ್ರ ಮೂಲದ ಆರೋಪಿಯನ್ನು ಬಂಧಿಸಿ ₹2,29,900 ನಗದು ವಶಪಡಿಸಿಕೊಂಡಿದ್ದಾರೆ.

ಸಾಗರದಲ್ಲಿ ಮನೆಗೆಲಸದವನಿಂದ ನಗದು ಕಳವು, ಕೆಲವೇ ಗಂಟೆಗಳಲ್ಲಿ ಆರೋಪಿ ಬಂಧನ – sagara theft

ಸಾಗರ: ಮನೆಯಲ್ಲೇ ಕೆಲಸ ಮಾಡುತ್ತಿದ್ದ ವ್ಯಕ್ತಿಯೊಬ್ಬ ಗಾಡ್ರೇಜ್‌ನಲ್ಲಿದ್ದ ಲಕ್ಷಾಂತರ ರೂಪಾಯಿ ನಗದು ಕಳವು ಮಾಡಿಕೊಂಡು ಪರಾರಿಯಾಗಿದ್ದ ಪ್ರಕರಣವನ್ನು ಸಾಗರ ಪೇಟೆ ಠಾಣೆ ಪೊಲೀಸರು ಕೆಲವೇ ಗಂಟೆಗಳಲ್ಲಿ ಭೇದಿಸಿದ್ದಾರೆ.

WhatsApp Group Join Now
Telegram Group Join Now
Instagram Group Join Now

ಸಾಗರದ ಅನಲೇಕೊಪ್ಪ ನಿವಾಸಿ ಉಮಾ ಅವರ ಮನೆಯಲ್ಲಿ ಸಣ್ಣಪುಟ್ಟ ಕೆಲಸ ಮಾಡುತ್ತಿದ್ದ ಪಾಂಡುರಂಗ ಎಂಬಾತನ ವಿರುದ್ಧ ಕಳವು ಆರೋಪ ಕೇಳಿಬಂದಿದೆ. ಸೆಪ್ಟೆಂಬರ್ 6ರಂದು ಮನೆಯ ಗಾಡ್ರೇಜ್‌ನಲ್ಲಿದ್ದ ₹2,54,000 ನಗದು ಹಣವನ್ನು ಕಳವು ಮಾಡಿಕೊಂಡು ಪರಾರಿಯಾಗಿದ್ದಾನೆಂದು ದೂರು ನೀಡಲಾಗಿತ್ತು.

ಸಂತ್ರಸ್ತೆಯ ದೂರಿನ ಮೇರೆಗೆ ಸಾಗರ ಪೇಟೆ ಪೊಲೀಸ್ ಠಾಣೆಯಲ್ಲಿ ಸಿಆರ್ ನಂ. 175/2026ರಡಿ ಬಿಎನ್‌ಎಸ್ ಕಲಂ 305, 306 ಅಡಿಯಲ್ಲಿ ಪ್ರಕರಣ ದಾಖಲಾಗಿತ್ತು.

ಪ್ರಕರಣ ದಾಖಲಾದ ಕೂಡಲೇ ಪೊಲೀಸರು ಕಾರ್ಯಾಚರಣೆ ಚುರುಕುಗೊಳಿಸಿದರು. ಶಿವಮೊಗ್ಗ ಜಿಲ್ಲಾ ಪೊಲೀಸ್ ಅಧೀಕ್ಷಕ ನಿಖಿಲ್ ಬಿ. ಐಪಿಎಸ್, ಹೆಚ್ಚುವರಿ ಪೊಲೀಸ್ ಅಧೀಕ್ಷಕ ಕಾರಿಯಪ್ಪ ಎ.ಜೆ. ಅವರ ಮಾರ್ಗದರ್ಶನದಲ್ಲಿ ಹಾಗೂ ಸಾಗರ ಉಪವಿಭಾಗದ ಹೆಚ್ಚುವರಿ ಪೊಲೀಸ್ ಅಧೀಕ್ಷಕ ಬೇನಕಪ್ರಸಾದ್ ಐಪಿಎಸ್ ಅವರ ಮೇಲ್ವಿಚಾರಣೆಯಲ್ಲಿ ವಿಶೇಷ ತಂಡ ರಚಿಸಲಾಯಿತು.

ಸಾಗರ ಪೇಟೆ ಠಾಣೆ ಪೊಲೀಸ್ ನಿರೀಕ್ಷಕ ಪುಲ್ಲಯ್ಯ ರಾಥೋಡ್ ಅವರ ನೇತೃತ್ವದಲ್ಲಿ ಪಿಎಸ್‌ಐ ಶಾಂತರಾಜ್, ಸಿಬ್ಬಂದಿಗಳಾದ ಹೆಚ್‌ಸಿ ವಿಶ್ವನಾಥ ಮತ್ತು ಪಿಸಿ ನರೇಂದ್ರ ಅವರ ತಂಡ ಕ್ಷಿಪ್ರ ಕಾರ್ಯಾಚರಣೆ ನಡೆಸಿತು.

Malnad Times App ಡೌನ್‌ಲೋಡ್ ಮಾಡಿಶಿವಮೊಗ್ಗ ಮತ್ತು ಮಲೆನಾಡಿನ ಸುದ್ದಿಗಳನ್ನು ತಕ್ಷಣ ಪಡೆಯಿರಿ.
GET IT ONGoogle Play

ತನಿಖೆಯ ವೇಳೆ ಮಹಾರಾಷ್ಟ್ರ ಮೂಲದ ಪಾಂಡುರಂಗನನ್ನು ಪೊಲೀಸರು ಬಂಧಿಸಿದ್ದಾರೆ. ಬಂಧಿತ ಆರೋಪಿ ಪಾಂಡುರಂಗ, ವಯಸ್ಸು 35, ಹೋಟೆಲ್ ಕೆಲಸ ಮಾಡಿಕೊಂಡಿದ್ದು, ಸಾಗರದ ಎಸ್‌ಎನ್ ನಗರ 3ನೇ ಕ್ರಾಸ್‌ನಲ್ಲಿ ವಾಸವಿದ್ದನು. ಮೂಲತಃ ಮಹಾರಾಷ್ಟ್ರದ ರತ್ನಗಿರಿ ಜಿಲ್ಲೆಯ ರಾಜಾಪುರ ತಾಲೂಕಿನ ಹಾತ್ ಕಾಂಬಾ ಗ್ರಾಮದವನು ಎಂದು ಪೊಲೀಸರು ತಿಳಿಸಿದ್ದಾರೆ.

ಬಂಧಿತನಿಂದ ಕಳುವಾಗಿದ್ದ ಹಣದಲ್ಲಿ ₹2,29,900 ನಗದು ಹಣವನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ. ಪ್ರಕರಣವನ್ನು ಕೆಲವೇ ಗಂಟೆಗಳಲ್ಲಿ ಭೇದಿಸಿದ ಸಾಗರ ಪೇಟೆ ಠಾಣೆ ಪೊಲೀಸರ ಕಾರ್ಯವನ್ನು ಜಿಲ್ಲಾ ಪೊಲೀಸ್ ಅಧೀಕ್ಷಕರು ಶ್ಲಾಘಿಸಿದ್ದಾರೆ.

ಮಾಹಿತಿ ಮತ್ತು ಮೂಲ: ಈ ವರದಿಯನ್ನು Malnad Times ಸಂಪಾದಕೀಯ ತಂಡವು ಲಭ್ಯ ಮಾಹಿತಿಯ ಆಧಾರದಲ್ಲಿ ಪರಿಶೀಲಿಸಿದೆ.

Koushik G K

MalnadTimes.com ವೆಬ್‌ಸೈಟ್‌ನ ಸ್ಥಾಪಕ ಮತ್ತು ನಿರ್ವಾಹಕರಾಗಿದ್ದಾರೆ. ಅಕ್ಟೋಬರ್ 3 2019 ರಲ್ಲಿ ಈ ತಾಣವನ್ನು ಆರಂಭಿಸಿದ ಅವರು, ಮೊದಲಿಗೆ ಐಟಿ ಕ್ಷೇತ್ರದಲ್ಲಿ ಕೆಲಸ ಮಾಡಿದ ಅನುಭವ ಹೊಂದಿದ್ದಾರೆ. ತಮ್ಮ ತಾಂತ್ರಿಕ ಪರಿಣತಿಯನ್ನು ಮತ್ತು ಸ್ಥಳೀಯ ಸುದ್ದಿಗಳ ಪ್ರೀತಿಯನ್ನು ಒಂದಾಗಿಸಿ, ಮಲ್ನಾಡಿನ ಜನತೆಗೆ ನಿಖರವಾದ, ವಿಶ್ವಾಸಾರ್ಹ ಹಾಗೂ ಸಮಗ್ರ ಸುದ್ದಿಗಳನ್ನು ತಲುಪಿಸುವ ನಿಟ್ಟಿನಲ್ಲಿ ಈ ತಾಣವನ್ನು ರೂಪಿಸಿದ್ದಾರೆ. Malnad Times ಮೂಲಕ  ಶಿವಮೊಗ್ಗ ಮತ್ತು ಮಲ್ನಾಡು ಭಾಗದ ಸಮುದಾಯದ ಧ್ವನಿಯಾಗಿ, ಗ್ರಾಮೀಣ ಬದುಕು, ಪರಿಸರ, ಕೃಷಿ, ಶಿಕ್ಷಣ, ಮತ್ತು ಸಾರ್ವಜನಿಕ ವಿಚಾರಗಳನ್ನು ತಲುಪಿಸುವ ಪ್ರಯತ್ನದಲ್ಲಿ ತೊಡಗಿದ್ದಾರೆ.ಈ ತಾಣದ ನಿರ್ವಹಣೆ, ತಾಂತ್ರಿಕ ಹಾಗೂ ಸಂಪಾದಕೀಯ ಕಾರ್ಯಗಳಲ್ಲಿ ನಿತ್ಯ ಭಾಗವಹಿಸುತ್ತಿದ್ದಾರೆ.Contact No -7022818650