Sagara

ಸಾಗರ: ಮನೆಯ ಹಿತ್ತಲಲ್ಲಿ ಕಡಜದ ಹುಳು ದಾಳಿ; 8 ವರ್ಷದ ಬಾಲಕ ಸಾವು

ಸಾಗರ: ಮನೆಯ ಹಿತ್ತಲಲ್ಲಿ ಕಡಜದ ಹುಳು ದಾಳಿ; 8 ವರ್ಷದ ಬಾಲಕ ಸಾವು – sagaras

ಸಾಗರ: ತಾಲೂಕಿನ ಹತ್ತಿಸರ ಗ್ರಾಮದಲ್ಲಿ ಕಡಜದ ಹುಳು ಕಚ್ಚಿದ ಪರಿಣಾಮ 8 ವರ್ಷದ ಬಾಲಕನೊಬ್ಬ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟ ಘಟನೆ ನಡೆದಿದೆ. ಮೃತ ಬಾಲಕನನ್ನು ನಿಷ್ಮಿತ್ ಎಂದು ಗುರುತಿಸಲಾಗಿದೆ.

WhatsApp Group Join Now
Telegram Group Join Now
Instagram Group Join Now
📢 Stay Updated! Join our WhatsApp Channel Now →

ನಿಷ್ಮಿತ್ ಹತ್ತಿಸರ ಗ್ರಾಮದ ನಿವಾಸಿ ವೆಂಕಟೇಶ್ ಅವರ ಪುತ್ರನಾಗಿದ್ದು, ಎರಡನೇ ತರಗತಿಯಲ್ಲಿ ವ್ಯಾಸಂಗ ಮಾಡುತ್ತಿದ್ದನು. ಮನೆಯ ಹಿತ್ತಲಿನಲ್ಲಿದ್ದ ಬಾಳೆ ಗಿಡದ ಬಳಿ ಇದ್ದ ಕಡಜದ ಗೂಡಿನಿಂದ ಏಕಾಏಕಿ ಹುಳುಗಳು ದಾಳಿ ನಡೆಸಿದ ವೇಳೆ ನಿಷ್ಮಿತ್ ಹಾಗೂ ಆತನ ತಂದೆಗೆ ಕಡಿತವಾಗಿದೆ ಎಂದು ತಿಳಿದುಬಂದಿದೆ.

ಸಾಗರ ಮನೆಯ ಹಿತ್ತಲಲ್ಲಿ ಕಡಜದ ಹುಳು ದಾಳಿ: 8 ವರ್ಷದ ಬಾಲಕ ಸಾವು – sagara

ಹುಳು ಕಚ್ಚಿದ ತಕ್ಷಣ ಬಾಲಕ ಅಸ್ವಸ್ಥಗೊಂಡಿದ್ದರಿಂದ ಮೊದಲು ಸಮೀಪದ ಹೆಗ್ಗೂಡು ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಯಿತು. ಅಲ್ಲಿ ಪ್ರಾಥಮಿಕ ಚಿಕಿತ್ಸೆ ನೀಡಿದ ಬಳಿಕ ಹೆಚ್ಚಿನ ಚಿಕಿತ್ಸೆಗಾಗಿ ಶಿವಮೊಗ್ಗದ ಮೆಗ್ಗಾನ್ ಜಿಲ್ಲಾ ಆಸ್ಪತ್ರೆಗೆ ರವಾನಿಸಲಾಯಿತಾದರೂ, ಚಿಕಿತ್ಸೆ ಫಲಿಸದೆ ಬಾಲಕ ಮೃತಪಟ್ಟಿದ್ದಾನೆ.

ಈ ಘಟನೆ ವೇಳೆ ನಿಷ್ಮಿತ್ ತಂದೆ ವೆಂಕಟೇಶ್ ಅವರಿಗೂ ಕಡಜದ ಹುಳುಗಳು ಕಚ್ಚಿದ್ದು, ಅವರು ಕೂಡ ಗಾಯಗೊಂಡಿದ್ದಾರೆ. ಸದ್ಯ ಅವರಿಗೆ ಆಸ್ಪತ್ರೆಯಲ್ಲಿ ಚಿಕಿತ್ಸೆ ಮುಂದುವರಿದಿದೆ ಎಂದು ತಿಳಿದುಬಂದಿದೆ.

ನಿಷ್ಮಿತ್ ಎರಡನೇ ತರಗತಿಯಲ್ಲಿ ಓದುತ್ತಿದ್ದ ಚುರುಕು ಬಾಲಕನಾಗಿದ್ದನು. ಆತನ ಸಾವಿನಿಂದ ಕುಟುಂಬಸ್ಥರು ಹಾಗೂ ಗ್ರಾಮಸ್ಥರಲ್ಲಿ ಆಳವಾದ ದುಃಖ ಆವರಿಸಿದೆ.

ಈ ಸಂಬಂಧ ಸಾಗರ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ಮುಂದಿನ ಕ್ರಮ ಕೈಗೊಂಡಿದ್ದಾರೆ.

ಮಾಹಿತಿ ಮತ್ತು ಮೂಲ: ಈ ವರದಿಯ ಮಾಹಿತಿ ವರದಿಗಾರರು, ಅಧಿಕೃತ ಪ್ರಕಟಣೆಗಳು ಅಥವಾ ಸ್ಥಳದಲ್ಲಿನ ವಿಶ್ವಾಸಾರ್ಹ ಮೂಲಗಳಿಂದ ಪರಿಶೀಲಿಸಲಾಗಿದೆ.

Koushik G K

MalnadTimes.com ವೆಬ್‌ಸೈಟ್‌ನ ಸ್ಥಾಪಕ ಮತ್ತು ನಿರ್ವಾಹಕರಾಗಿದ್ದಾರೆ. ಅಕ್ಟೋಬರ್ 3 2019 ರಲ್ಲಿ ಈ ತಾಣವನ್ನು ಆರಂಭಿಸಿದ ಅವರು, ಮೊದಲಿಗೆ ಐಟಿ ಕ್ಷೇತ್ರದಲ್ಲಿ ಕೆಲಸ ಮಾಡಿದ ಅನುಭವ ಹೊಂದಿದ್ದಾರೆ. ತಮ್ಮ ತಾಂತ್ರಿಕ ಪರಿಣತಿಯನ್ನು ಮತ್ತು ಸ್ಥಳೀಯ ಸುದ್ದಿಗಳ ಪ್ರೀತಿಯನ್ನು ಒಂದಾಗಿಸಿ, ಮಲ್ನಾಡಿನ ಜನತೆಗೆ ನಿಖರವಾದ, ವಿಶ್ವಾಸಾರ್ಹ ಹಾಗೂ ಸಮಗ್ರ ಸುದ್ದಿಗಳನ್ನು ತಲುಪಿಸುವ ನಿಟ್ಟಿನಲ್ಲಿ ಈ ತಾಣವನ್ನು ರೂಪಿಸಿದ್ದಾರೆ. Malnad Times ಮೂಲಕ  ಶಿವಮೊಗ್ಗ ಮತ್ತು ಮಲ್ನಾಡು ಭಾಗದ ಸಮುದಾಯದ ಧ್ವನಿಯಾಗಿ, ಗ್ರಾಮೀಣ ಬದುಕು, ಪರಿಸರ, ಕೃಷಿ, ಶಿಕ್ಷಣ, ಮತ್ತು ಸಾರ್ವಜನಿಕ ವಿಚಾರಗಳನ್ನು ತಲುಪಿಸುವ ಪ್ರಯತ್ನದಲ್ಲಿ ತೊಡಗಿದ್ದಾರೆ.ಈ ತಾಣದ ನಿರ್ವಹಣೆ, ತಾಂತ್ರಿಕ ಹಾಗೂ ಸಂಪಾದಕೀಯ ಕಾರ್ಯಗಳಲ್ಲಿ ನಿತ್ಯ ಭಾಗವಹಿಸುತ್ತಿದ್ದಾರೆ.Contact No -7022818650