Hosanagara

ನಿಧನವಾರ್ತೆ ; ಹೃದಯಾಘಾತದಿಂದ ಸರಸ್ವತಿ ನಿಧನ !

HOSANAGARA ; ಪಟ್ಟಣದ ಸಾರ್ವಜನಿಕಾ ಆಸ್ಪತ್ರೆಯಲ್ಲಿ ಜಿಲ್ಲಾ ಆರೋಗ್ಯ ಶಿಕ್ಷಣಾಧಿಕಾರಿಯಾಗಿ ಸೇವೆ ಸಲ್ಲಿಸಿ ನಿವೃತ್ತರಾಗಿದ್ದ ಕೆಬಿಸಿ ಕೃಷ್ಣಪ್ಪನವರ ಧರ್ಮಪತ್ನಿ ಸರಸ್ವತಿ ಕೃಷ್ಣಪ್ಪ (73) ಶುಕ್ರವಾರ ಬೆಳಗ್ಗೆ 11:30 ಸಮಯದಲ್ಲಿ ತೀವ್ರ ಹೃದಯಘಾತಕ್ಕೀಡಾಗಿ ಕೊನೆಯುಸಿರೆಳೆದರು.

WhatsApp Group Join Now
Telegram Group Join Now
Instagram Group Join Now
📢 Stay Updated! Join our WhatsApp Channel Now →

ಮೃತರು ಪತಿ, ಇಬ್ಬರ ಪುತ್ರರು ಅಪಾರ ಬಂಧು-ಬಳಗ ಅಗಲಿದ್ದು ಶನಿವಾರ ಬೆಳಗ್ಗೆ ಅವರ ನಿವಾಸದ ಪಕ್ಕದ ಜಮೀನಿನಲ್ಲಿ ಅಂತ್ಯಕ್ರಿಯೆ ನೆರವೇರಿಸಲಾಯಿತು.

ಸರಸ್ವತಿ ಅವರ ನಿಧನದ ಸುದ್ದಿ ತಿಳಿಯುತ್ತಿದ್ದಂತೆ ಅವರ ಅಪಾರ ಬಂಧು-ಬಳಗದವರು ಅವರ ನಿವಾಸಕ್ಕೆ ತೆರಳಿ ಅಂತಿಮ ದರ್ಶನ ಪಡೆದರು.

ಮಾಹಿತಿ ಮತ್ತು ಮೂಲ: ಈ ವರದಿಯ ಮಾಹಿತಿ ವರದಿಗಾರರು, ಅಧಿಕೃತ ಪ್ರಕಟಣೆಗಳು ಅಥವಾ ಸ್ಥಳದಲ್ಲಿನ ವಿಶ್ವಾಸಾರ್ಹ ಮೂಲಗಳಿಂದ ಪರಿಶೀಲಿಸಲಾಗಿದೆ.

Mahesh Hindlemane

ಮಲೆನಾಡಿನ ಹೆಬ್ಬಾಗಿಲು ಶಿವಮೊಗ್ಗದ ಸ್ಥಳೀಯ ನ್ಯೂಸ್ ವೆಬ್‌ಸೈಟ್‌ಗಳಲ್ಲಿ ಪ್ರತಿನಿಧಿಯಾಗಿ ವೃತ್ತಿ ಜೀವನ ಪ್ರಾರಂಭ. ಪತ್ರಿಕೋದ್ಯಮದಲ್ಲಿ 8 ವರ್ಷಗಳ ಅನುಭವ. ಜಿಲ್ಲಾ ಮಟ್ಟದ ದಿನಪತ್ರಿಕೆಗಳಲ್ಲಿ ಹಾಗೂ ವೆಬ್‌ಸೈಟ್‌ಗಳಲ್ಲಿ ಮಲೆನಾಡಿಗೆ ಸಂಬಂಧಿಸಿದ ವಿಷಯಗಳ ಲೇಖನಗಳನ್ನು ಬರೆದಿದ್ದೇನೆ. ಪ್ರಸ್ತುತ <strong>'ಮಲ್ನಾಡ್ ಟೈಮ್ಸ್'</strong> ಡಿಜಿಟಲ್ ನಲ್ಲಿ ಸಂಪಾದಕನಾಗಿ ಮುಂದುವರೆದಿದ್ದೇನೆ. <a href="mailto:[email protected]">[email protected]</a>