Ripponpete

ಪರೋಪಕಾರ ಮಾಡುವ ತ್ಯಾಗ ಮನೋಭಾವದಿಂದ ತೃಪ್ತಿ ; ಹೊಂಬುಜ ಶ್ರೀ

ರಿಪ್ಪನ್‌ಪೇಟೆ ; ಪ್ರತಿಯೋರ್ವರೂ ಧರ್ಮಾಚರಣೆಯಲ್ಲಿ ಪೂಜಾ ವಿಧಿ-ವಿಧಾನಗಳಲ್ಲಿ ಪಾಲ್ಗೊಂಡು ಆಧ್ಯಾತ್ಮದ ಒಲವು ತೋರಬೇಕು. ಹಾಗೆಯೇ ಯಥೋಚಿತವಾಗಿ ಸಂಕಷ್ಟದಲ್ಲಿರುವವರನ್ನು ಸಂತೈಸುವುದು, ಪರೋಪಕಾರ ಮಾಡುವುದೂ ಧರ್ಮಾಚರಣೆಯಲ್ಲಿ ಮಹತ್ವವನ್ನು ಪಡೆದಿದೆ ಎಂದು ಹೊಂಬುಜ ಅತಿಶಯ ಶ್ರೀಕ್ಷೇತ್ರದ ಪೀಠಾಧೀಶರಾದ ಪರಮಪೂಜ್ಯ ಜಗದ್ಗುರು ಸ್ವಸ್ತಿಶ್ರೀ ಡಾ. ದೇವೇಂದ್ರಕೀರ್ತಿ ಭಟ್ಟಾರಕ ಪಟ್ಟಾಚಾರ್ಯವರ್ಯ ಮಹಾಸ್ವಾಮಿಗಳವರು ಪರ್ಯೂಷಣ ಪರ್ವದ ಎಂಟನೇಯ ದಿನದಂದು ‘ಉತ್ತಮ ತ್ಯಾಗ’ ಧರ್ಮದ ಕುರಿತು ಪ್ರವಚನದಲ್ಲಿ ವಿವರಿಸಿದರು.

WhatsApp Group Join Now
Telegram Group Join Now
Instagram Group Join Now

ತ್ಯಾಗ ಧರ್ಮದಿಂದ ಬಾಳಿನಲ್ಲಿ ತೃಪ್ತಿ ದೊರಕುತ್ತದೆ. ಅಶಕ್ತರಿಗೆ ಸಹಾಯ ಮಾಡುವ, ಶೈಕ್ಷಣಿಕ ಪ್ರಗತಿಗೆ ಪೂರಕವಾಗಿ ಧನ ನೀಡುವ, ದುರ್ಬಲರ ಏಳಿಗೆಗೆ ಸಹಕರಿಸುವ ತ್ಯಾಗ ಪ್ರವೃತ್ತಿಯನ್ನು ಬೆಳೆಸಿಕೊಳ್ಳುವುದರಿಂದ ಸಾಮಾಜಿಕ, ಶೈಕ್ಷಣಿಕ, ಧಾರ್ಮಿಕ ಕ್ಷೇತ್ರದಲ್ಲಿ ಅಭಿವೃದ್ಧಿಯನ್ನು ಕಾಣಬಹುದು ಎಂದು ವ್ಯಾಖ್ಯಾನಿಸಿದರು.

ಭಗವಾನ್ ಶ್ರೀ 1008 ಪಾರ್ಶ್ವನಾಥ ಸ್ವಾಮಿ, ಮಹಾಮಾತೆ ಯಕ್ಷಿಶ್ರೀ ಪದ್ಮಾವತಿ ದೇವಿ, ಶ್ರೀ ಮಹಾವೀರ ಸ್ವಾಮಿ ಹಾಗೂ ಕ್ಷೇತ್ರದ ಎಲ್ಲ ಜಿನಮಂದಿರಗಳಲ್ಲಿ ವಿಶೇಷ ಪೂಜೆಗಳನ್ನು ನೆರವೇರಿಸಲಾಯಿತು.

Malnad Times App ಡೌನ್‌ಲೋಡ್ ಮಾಡಿಶಿವಮೊಗ್ಗ ಮತ್ತು ಮಲೆನಾಡಿನ ಸುದ್ದಿಗಳನ್ನು ತಕ್ಷಣ ಪಡೆಯಿರಿ.
GET IT ONGoogle Play

ಶ್ರೀ ಕುಂದಕುಂದ ವಿದ್ಯಾಪೀಠದ ವಿದ್ಯಾರ್ಥಿಗಳು, ಶ್ರೀ ಪದ್ಮಾವತಿ ಮಹಿಳಾ ಸಮಾಜದ, ಊರ ಪರವೂರ ಭಕ್ತರು ದಶಲಕ್ಷಣ ಪರ್ವದಲ್ಲಿ ಭಾಗಿಯಾದರು. ಶ್ರೀಗಳವರು ಶ್ರೀಮಂತ್ರಾಕ್ಷತೆ ನೀಡಿ, ‘ತ್ಯಾಗ ಧರ್ಮ’ ಪರಿಪಾಲಿಸಲು ಹರಸಿದರು.

ಮಾಹಿತಿ ಮತ್ತು ಮೂಲ: ಈ ವರದಿಯನ್ನು Malnad Times ಸಂಪಾದಕೀಯ ತಂಡವು ಲಭ್ಯ ಮಾಹಿತಿಯ ಆಧಾರದಲ್ಲಿ ಪರಿಶೀಲಿಸಿದೆ.

Mahesha Hindlemane

ಮಲೆನಾಡಿನ ಹೆಬ್ಬಾಗಿಲು ಶಿವಮೊಗ್ಗದ ಸ್ಥಳೀಯ ನ್ಯೂಸ್ ವೆಬ್‌ಸೈಟ್‌ಗಳಲ್ಲಿ ಪ್ರತಿನಿಧಿಯಾಗಿ ವೃತ್ತಿ ಜೀವನ ಪ್ರಾರಂಭ. ಪತ್ರಿಕೋದ್ಯಮದಲ್ಲಿ 8 ವರ್ಷಗಳ ಅನುಭವ. ಜಿಲ್ಲಾ ಮಟ್ಟದ ದಿನಪತ್ರಿಕೆಗಳಲ್ಲಿ ಹಾಗೂ ವೆಬ್‌ಸೈಟ್‌ಗಳಲ್ಲಿ ಮಲೆನಾಡಿಗೆ ಸಂಬಂಧಿಸಿದ ವಿಷಯಗಳ ಲೇಖನಗಳನ್ನು ಬರೆದಿದ್ದೇನೆ. ಪ್ರಸ್ತುತ 'ಮಲ್ನಾಡ್ ಟೈಮ್ಸ್' ಡಿಜಿಟಲ್ ನಲ್ಲಿ ಸಂಪಾದಕನಾಗಿ ಮುಂದುವರೆದಿದ್ದೇನೆ. ಇ-ಮೇಲ್ : [email protected]