ಸಾಗರ ತಾಲೂಕಿನ ಶಾಲೆ, ಕಾಲೇಜುಗಳಿಗೂ ಬುಧವಾರ ರಜೆ ಘೋಷಣೆ

Written by Mahesh Hindlemane

Published on:

SAGARA | ತಾಲೂಕಿನಾದ್ಯಂತ ವ್ಯಾಪಕ ಮಳೆ ಹಿನ್ನೆಲೆಯಲ್ಲಿ ಜು.31 ಬುಧವಾರ ಎಲ್ಲಾ ಶಾಲೆ, ಕಾಲೇಜುಗಳಿಗೆ ರಜೆ ಘೋಷಿಸಿ ತಹಶೀಲ್ದಾರ್‌ ಚಂದ್ರಶೇಖರ್ ನಾಯಕ್ ಆದೇಶಿಸಿದ್ದಾರೆ.

WhatsApp Group Join Now
Telegram Group Join Now
Instagram Group Join Now

ಸಾಗರ ತಾಲ್ಲೂಕಿನಲ್ಲಿ ತೀವ್ರ ಮಳೆಯಾಗುತ್ತಿದ್ದು ನಾಳೆಯೂ ಸಹ ಹೆಚ್ಚಿನ ಮಳೆಯಾಗುವ ಮುನ್ಸೂಚನೆ ಇರುವುದರಿಂದ ಮುಂಜಾಗ್ರತಾ ಕ್ರಮವಾಗಿ ವಿದ್ಯಾರ್ಥಿಗಳ ಹಿತದೃಷ್ಠಿಯಿಂದ ತಾಲ್ಲೂಕಿನಾದ್ಯಂತ ಎಲ್ಲಾ ಅಂಗನವಾಡಿಗಳು, ಶಾಲೆಗಳು ಹಾಗೂ ಪದವಿ ಪೂರ್ವ ಕಾಲೇಜುಗಳಿಗೆ ಜು. 31 ರಂದು ರಜೆ ಘೋಷಿಸಲಾಗಿದೆ. ಈ ದಿನದಂದು ನೀಡಿದ ರಜೆಯನ್ನು ಮುಂದಿನ ದಿನದಲ್ಲಿ ಹೊಂದಾಣಿಕೆ ಮಾಡಿ ಮಕ್ಕಳಿಗೆ ಪಾಠ ಪ್ರವಚನ ಮಾಡಲು ಸೂಚಿಸಲಾಗಿದೆ ಎಂದು ತಹಶೀಲ್ದಾರ್‌ ಚಂದ್ರಶೇಖರ್ ನಾಯಕ್ ತಿಳಿಸಿದ್ದಾರೆ.

ಇನ್ನೂ ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿ ಹಾಗೂ ಹೊಸನಗರ ತಾಲೂಕಿನಾದ್ಯಂತ ಈಗಾಗಲೇ ಶಾಲೆ, ಕಾಲೇಜುಗಳಿಗೆ ಆಯಾ ತಾಲೂಕಿನ ತಹಶೀಲ್ದಾರ್‌ ರಜೆ ಘೋಷಣೆ ಮಾಡಿದ್ದಾರೆ.

read more

School Holiday | ಧಾರಾಕಾರ ಮಳೆ ಹಿನ್ನೆಲೆಯಲ್ಲಿ ಮುಂಜಾಗ್ರತಾ ಕ್ರಮವಾಗಿ ಹೊಸನಗರ ತಾಲೂಕಿನಾದ್ಯಂತ ಶಾಲೆ, ಕಾಲೇಜುಗಳಿಗೆ ಬುಧವಾರ ರಜೆ ಘೋಷಣೆ

School Holiday | ನಾಳೆಯೂ ಚಿಕ್ಕಮಗಳೂರು ಜಿಲ್ಲೆಯ 6 ತಾಲೂಕಿನ ಶಾಲೆ, ಕಾಲೇಜುಗಳಿಗೆ ರಜೆ ಘೋಷಣೆ

Author Profile

Mahesh Hindlemane
Mahesh Hindlemane
ಅವರು MalnadTimes.com ನ ಸಂಪಾದಕರಾಗಿ ಸೇವೆ ಸಲ್ಲಿಸುತ್ತಿದ್ದಾರೆ. ಸ್ಥಳೀಯ ಪತ್ರಿಕೋದ್ಯಮದ ಮೇಲಿನ ನಿಷ್ಠೆ ಮತ್ತು ಸಾಮಾಜಿಕ ಜವಾಬ್ದಾರಿಯೊಂದಿಗೆ, ಅವರು ಮಲ್ನಾಡು ಪ್ರದೇಶದ ಜನಜೀವನ, ಪರಿಸರ, ಕೃಷಿ, ಶಿಕ್ಷಣ ಮತ್ತು ಅಭಿವೃದ್ಧಿ ಸಂಬಂಧಿತ ವಿಷಯಗಳನ್ನು ಪ್ರಾಮಾಣಿಕವಾಗಿ ಹಾಗೂ ನಿರಂತರವಾಗಿ ಹಂಚಿಕೊಂಡು ಬರುತ್ತಿದ್ದಾರೆ. ನಿಖರತೆ, ನೈತಿಕತೆ ಮತ್ತು ಸಾರ್ವಜನಿಕ ಹಿತಚಿಂತನೆಯಾದರೂ ಅವರ ಸಂಪಾದಕೀಯ ನಿಲುವುಗಳ ಹತ್ತಿರ ಇರುತ್ತದೆ. Malnad Times ನ್ನು ವಿಶ್ವಾಸಾರ್ಹ ಸುದ್ದಿಮೂಲವಾಗಿಸಲು ಅವರು ನಿರಂತರ ಶ್ರಮಿಸುತ್ತಿದ್ದಾರೆ.

Leave a Comment