Hosanagara | ಪ್ರಸಕ್ತ ಶೈಕ್ಷಣಿಕ ವರ್ಷದ ಶಾಲಾ (Schools) ತರಗತಿಗಳು ಇಂದಿನಿಂದ ಆರಂಭವಾಗಿದ್ದು, ಬೇಸಿಗೆ ರಜೆ ಮುಗಿಸಿ ಶಾಲೆಗೆ ಆಗಮಿಸಿದ ವಿದ್ಯಾರ್ಥಿಗಳನ್ನು (Students) ಶಿಕ್ಷಕರು (Teacher’s) ಹೂ ನೀಡಿ ಸ್ವಾಗತಿಸುವ ಮೂಲಕ ಮಕ್ಕಳಲ್ಲಿ ಸಂತಸ ಮೂಡಿಸಿದರು.
ಇನ್ನೂ ಶಾಲೆಗೆ ತಳಿರು ತೋರಣ, ಬಲೂನುಗಳಿಂದ ಶೃಂಗರಿಸಿ ಶಿಕ್ಷಕರು ಮಕ್ಕಳನ್ನು ಸ್ವಾಗತಿಸಿಕೊಳ್ಳುತ್ತಿರುವುದು ಇಂದು ತಾಲೂಕಿನೆಲ್ಲೆಡೆ ಕಂಡು ಬಂದಿದ್ದು ಹಬ್ಬದ ವಾತಾವರಣ ನಿರ್ಮಾಣವಾಗಿತ್ತು.

ಚಿಕ್ಕಜೇನಿ ಸರ್ಕಾರಿ ಹಿರಿಯ ಪ್ರಾಥಮಿಕ ಪಾಠಶಾಲೆಯಲ್ಲಿ ಇಂದು ಬೇಸಿಗೆ ರಜೆಯನ್ನು ಮುಗಿಸಿ ಶಾಲೆ ಆರಂಭವಾಗುತ್ತಿದ್ದಂತೆ ವಿದ್ಯಾರ್ಥಿಗಳು ಉತ್ತೀರ್ಣರಾಗಿ ಮುಂದಿನ ತರಗತಿಯ ಕೊಠಡಿಯಲ್ಲಿ ತಮ್ಮ ಆಸನವನ್ನು ಅಲಂಕರಿಸಿ ತಮ್ಮ ರಜಾ ದಿನದಲ್ಲಿ ಮದುವೆಮನೆ, ಅಜ್ಜ-ಅಜ್ಜಿ, ಸಂಬಂಧಿಕರ ಮನೆಗಳಲ್ಲಿಗೆ ಹೋಗಿ ಕಳೆದ ದಿನಗಳನ್ನು ಮೇಲಕು ಹಾಕುತ್ತಿದುದ್ದು ವಿಶೇಷವಾಗಿತ್ತು.

ಚಿಕ್ಕಜೇನಿ ಸರ್ಕಾರಿ ಹಿರಿಯ ಪ್ರಾಥಮಿಕ ಪಾಠಶಾಲೆಯ ಮುಖ್ಯ ಶಿಕ್ಷಕ ನಾಗರಾಜ್, ಸಹ ಶಿಕ್ಷಕಿಯರಾದ ಅನಿತಾ, ಕು.ಕಾವ್ಯ ಇನ್ನಿತರರು ಹಾಜರಿದ್ದರು.
ಇನ್ನೂ ಶಾಲೆಗಳಲ್ಲಿ ಸಿಹಿ ಹಾಗೂ ಪಾಯಸಗಳನ್ನು ಮಕ್ಕಳಿಗೆ, ಪೋಷಕರಿಗೆ, ಶಾಲಾ ಅಭಿವೃದ್ಧಿ ಸಮಿತಿಯವರಿಗೆ ಶಿಕ್ಷಕ ವೃಂದದವರು ವಿತರಿಸಿ ಸಂಭ್ರಮಿಸಿದರು.
ಆರಂಭದ ದಿನ ಮಕ್ಕಳಿಗೆ ಶಿಕ್ಷಕರು ಪಾಠ ಪ್ರವಚನ ಮಾಡದೇ ಸಂತೋಷದಿಂದ ಕಾಲಕಳೆಯುವಂತೆ ಬಿಟ್ಟಿರುವುದು ಇನ್ನೊಂದು ಸಂತಸದ ಸಂಗತಿಯಾಗಿತು.

ಒಟ್ಟಾರೆಯಾಗಿ ಇನ್ನೂ 15 ದಿನ ರಜೆ ಇದ್ದಿದ್ದರೆ ಇನ್ನೂ ಕುಣಿದು ಕುಪ್ಪಳಿಸುತ್ತಿದ್ದವು ಎಂದು ಹಲವು ವಿದ್ಯಾರ್ಥಿಗಳು ತಮ್ಮ ರಜಾ ದಿನದ ಅನುಭವವನ್ನು ಮಾಧ್ಯಮದವರ ಬಳಿ ಹಂಚಿಕೊಂಡರು.
ಹೊಸನಗರ ತಾಲೂಕಿನ ಹಲವು ಶಾಲೆಗಳಲ್ಲಿ ಮಕ್ಕಳಿಗೆ ಶಾಲಾ ಸಮವಸ್ತ್ರ ಹಾಗೂ ಪುಸ್ತಕಗಳನ್ನು ವಿತರಿಸಲಾಯಿತು.
Read More
ಬಿಜೆಪಿ ಸಂಘಟನಾ ಶಕ್ತಿಯಿಂದ ದೇಶ ಅಭಿವೃದ್ಧಿ ಪಥದಲ್ಲಿ ; ಡಾ.ಧನಂಜಯ ಸರ್ಜಿ
Author Profile

- ಅವರು MalnadTimes.com ನ ಸಂಪಾದಕರಾಗಿ ಸೇವೆ ಸಲ್ಲಿಸುತ್ತಿದ್ದಾರೆ. ಸ್ಥಳೀಯ ಪತ್ರಿಕೋದ್ಯಮದ ಮೇಲಿನ ನಿಷ್ಠೆ ಮತ್ತು ಸಾಮಾಜಿಕ ಜವಾಬ್ದಾರಿಯೊಂದಿಗೆ, ಅವರು ಮಲ್ನಾಡು ಪ್ರದೇಶದ ಜನಜೀವನ, ಪರಿಸರ, ಕೃಷಿ, ಶಿಕ್ಷಣ ಮತ್ತು ಅಭಿವೃದ್ಧಿ ಸಂಬಂಧಿತ ವಿಷಯಗಳನ್ನು ಪ್ರಾಮಾಣಿಕವಾಗಿ ಹಾಗೂ ನಿರಂತರವಾಗಿ ಹಂಚಿಕೊಂಡು ಬರುತ್ತಿದ್ದಾರೆ. ನಿಖರತೆ, ನೈತಿಕತೆ ಮತ್ತು ಸಾರ್ವಜನಿಕ ಹಿತಚಿಂತನೆಯಾದರೂ ಅವರ ಸಂಪಾದಕೀಯ ನಿಲುವುಗಳ ಹತ್ತಿರ ಇರುತ್ತದೆ. Malnad Times ನ್ನು ವಿಶ್ವಾಸಾರ್ಹ ಸುದ್ದಿಮೂಲವಾಗಿಸಲು ಅವರು ನಿರಂತರ ಶ್ರಮಿಸುತ್ತಿದ್ದಾರೆ.
Latest entries
RipponpeteJune 4, 2025ಅಮ್ಮನಘಟ್ಟ ನೂತನ ಶಿಲಾಮಯ ದೇವಾಲಯ ಲೋಕಾರ್ಪಣೆ ; ದೇವಸ್ಥಾನದಲ್ಲಿ ಜಾತಿ ಭೇದ ಭಾವನೆ ಬೇಡ
ShivamoggaJune 3, 2025ಸಂಪತ್ತಿನೊಂದಿಗೆ ಒಂದಿಷ್ಟಾದರೂ ಧರ್ಮ ಪ್ರಜ್ಞೆ ಅವಶ್ಯಕ ; ರಂಭಾಪುರಿ ಜಗದ್ಗುರುಗಳು
RipponpeteJune 3, 2025ಅಮ್ಮನಘಟ್ಟ ಶ್ರೀಜೇನುಕಲ್ಲಮ್ಮ ದೇವಸ್ಥಾನದ 108 ಮೆಟ್ಟಿಲುಗಳ ನಿರ್ಮಾಣಕ್ಕೆ ಸಂಸದ ಬಿ.ವೈ. ರಾಘವೇಂದ್ರ ಶಿಲನ್ಯಾಸ
RipponpeteJune 2, 2025ಕೊಪ್ಪಳ ಗವಿಸಿದ್ದೇಶ್ವರ ಮಠದ ಶ್ರೀಗಳು ಶಿವಮೊಗ್ಗ ಬೆಕ್ಕಿನಕಲ್ಮಠಕ್ಕೆ ಭೇಟಿ