School Holiday | ಧಾರಾಕಾರ ಮಳೆ ಹಿನ್ನೆಲೆಯಲ್ಲಿ ಮುಂಜಾಗ್ರತಾ ಕ್ರಮವಾಗಿ ಹೊಸನಗರ ತಾಲೂಕಿನಾದ್ಯಂತ ಶಾಲೆ, ಕಾಲೇಜುಗಳಿಗೆ ಬುಧವಾರ ರಜೆ ಘೋಷಣೆ

Written by Mahesh Hindlemane

Published on:

HOSANAGARA | ಭಾರಿ ಮಳೆ ಬೀಳುತ್ತಿರುವ ಹಿನ್ನೆಲೆಯಲ್ಲಿ ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲೂಕಿನಾದ್ಯಂತ ಜು.31ರ ಬುಧವಾರ ಶಾಲೆ, ಕಾಲೇಜುಗಳಿಗೆ ರಜೆ ಘೋಷಣೆ ಮಾಡಿ ತಹಶೀಲ್ದಾರ್‌ ರಶ್ಮಿ ಹಾಲೇಶ್ ಆದೇಶಿಸಿದ್ದಾರೆ.

WhatsApp Group Join Now
Telegram Group Join Now
Instagram Group Join Now

ತಾಲ್ಲೂಕಿನಲ್ಲಿ ತೀವ್ರ ಮಳೆಯಾಗುತ್ತಿದ್ದು ಮುಂದಿನ ದಿನಗಳಲ್ಲಿ ಹೆಚ್ಚಿನ ಮಳೆಯಾಗುವ ಮುನ್ಸೂಚನೆಯಿರುವುದರಿಂದ ಮುಂಜಾಗ್ರತಾ ಕ್ರಮವಾಗಿ ವಿದ್ಯಾರ್ಥಿಗಳ ಹಿತದೃಷ್ಟಿಯಿಂದ ಹೊಸನಗರ ತಾಲ್ಲೂಕಿನಾದ್ಯಂತ ಜು. 31ರಂದು ಎಲ್ಲಾ ಅಂಗನವಾಡಿ ಕೇಂದ್ರಗಳು, ಶಾಲೆಗಳು ಹಾಗೂ ಪದವಿ ಪೂರ್ವ ಕಾಲೇಜುಗಳಿಗೆ ರಜೆಯನ್ನು ಘೋಷಿಸಿದೆ. ಹಾಗೂ ಈ ರಜೆ ದಿನದಂದು ನಡೆಯಬೇಕಾಗಿದ್ದ ಪಾಠ ಪ್ರವಚನಗಳನ್ನು ಮುಂದಿನ ರಜೆ ದಿನಗಳಲ್ಲಿ ನಡೆಸಿ ಹೊಂದಾಣಿಕೆ ಮಾಡಿಕೊಳ್ಳಲು ಆದೇಶಿಸಿದೆ ಎಂದು ತಹಶೀಲ್ದಾರ್‌ ರಶ್ಮಿ ತಿಳಿಸಿದ್ದಾರೆ.

ಇನ್ನೂ ಈಗಾಗಲೇ ತೀರ್ಥಹಳ್ಳಿ ತಾಲ್ಲೂಕಿನಾದ್ಯಂತ ಶಾಲೆ, ಕಾಲೇಜುಗಳಿಗೆ ಬುಧವಾರ ರಜೆ ಘೋಷಣೆ ಮಾಡಲಾಗಿದೆ.

Author Profile

Mahesh Hindlemane
Mahesh Hindlemane
ಅವರು MalnadTimes.com ನ ಸಂಪಾದಕರಾಗಿ ಸೇವೆ ಸಲ್ಲಿಸುತ್ತಿದ್ದಾರೆ. ಸ್ಥಳೀಯ ಪತ್ರಿಕೋದ್ಯಮದ ಮೇಲಿನ ನಿಷ್ಠೆ ಮತ್ತು ಸಾಮಾಜಿಕ ಜವಾಬ್ದಾರಿಯೊಂದಿಗೆ, ಅವರು ಮಲ್ನಾಡು ಪ್ರದೇಶದ ಜನಜೀವನ, ಪರಿಸರ, ಕೃಷಿ, ಶಿಕ್ಷಣ ಮತ್ತು ಅಭಿವೃದ್ಧಿ ಸಂಬಂಧಿತ ವಿಷಯಗಳನ್ನು ಪ್ರಾಮಾಣಿಕವಾಗಿ ಹಾಗೂ ನಿರಂತರವಾಗಿ ಹಂಚಿಕೊಂಡು ಬರುತ್ತಿದ್ದಾರೆ. ನಿಖರತೆ, ನೈತಿಕತೆ ಮತ್ತು ಸಾರ್ವಜನಿಕ ಹಿತಚಿಂತನೆಯಾದರೂ ಅವರ ಸಂಪಾದಕೀಯ ನಿಲುವುಗಳ ಹತ್ತಿರ ಇರುತ್ತದೆ. Malnad Times ನ್ನು ವಿಶ್ವಾಸಾರ್ಹ ಸುದ್ದಿಮೂಲವಾಗಿಸಲು ಅವರು ನಿರಂತರ ಶ್ರಮಿಸುತ್ತಿದ್ದಾರೆ.

Leave a Comment