Ripponpete

ಲಕ್ಕಿ ಡ್ರಾ ವಿಜೇತ ಮಹಿಳೆಗೆ ಸ್ಕೂಟಿ ಹಸ್ತಾಂತರಿಸಿದ ಶಾಸಕ ಬೇಳೂರು ಗೋಪಾಲಕೃಷ್ಣ

RIPPONPETE ; ಇತ್ತೀಚೆಗೆ ಕಲಾಕೌಸ್ತುಭ ಕನ್ನಡ ಸಂಘದವರು 69ನೇ ಕನ್ನಡ ರಾಜ್ಯೋತ್ಸವದ ಅಂಗವಾಗಿ ಹಮ್ಮಿಕೊಂಡಿದ್ದ ಅದೃಷ್ಟ ಲಾಟರಿ ಡ್ರಾದಲ್ಲಿ ಬಡಕುಟುಂಬದ ಮಹಿಳೆ ರಾಣಿ ರಾಮಚಂದ್ರ ಎಂಬುವರಿಗೆ ಲಾಟರಿ ಬಹುಮಾನ ಬಂದಿದ್ದು ವಿಜೇತರಿಗೆ ಶಾಸಕ ಹಾಗೂ ರಾಜ್ಯ ಆರಣ್ಯ ಕೈಗಾರಿಕಾಭಿವೃದ್ದಿ ನಿಗಮದ ಅಧ್ಯಕ್ಷ ಗೋಪಾಲಕೃಷ್ಣ ಬೇಳೂರು ಬಹುಮಾನದ ದ್ವಿಚಕ್ರವಾಹದ ಕೀಯನ್ನು ನೀಡುವ ಮೂಲಕ ಹಸ್ತಾಂತರಿಸಿದರು.

WhatsApp Group Join Now
Telegram Group Join Now
Instagram Group Join Now
📢 Stay Updated! Join our WhatsApp Channel Now →

ಇಲ್ಲಿನ ಸಿದ್ದಿವಿನಾಯಕ ದೇವಸ್ಥಾನದ ಆವರಣದಲ್ಲಿ ನಡೆದ ಸರಳ ಸಮಾರಂಭದಲ್ಲಿ ಕಲಾಕೌಸ್ತುಭ ಸಂಘದ ಲಕ್ಕಿ ಡ್ರಾ ವಿಜೇತ ತೀರ್ಥಹಳ್ಳಿ ರಸ್ತೆಯ ರಾಣಿ ರಾಮಚಂದ್ರ ಕಡುಬಡ ಕುಟುಂಬದ ಮಹಿಳೆಗೆ ಬಹುಮಾನವನ್ನು ವಿತರಿಸಿ ಶುಭ ಹಾರೈಸಿದರು.

ಈ ಸಂದರ್ಭದಲ್ಲಿ ಕಲಾಕೌಸ್ತುಭ ಕನ್ನಡ ಸಂಘದ ಅಧ್ಯಕ್ಷ ರವೀಂದ್ರ ಕೆರೆಹಳ್ಳಿ, ಜಿ.ಪಂ.ಮಾಜಿ ಸದಸ್ಯ ಬಂಡಿ ರಾಮಚಂದ್ರ, ಡಿ.ಈ.ಮಧುಸೂಧನ್, ಆಸಿಫ್‌ಭಾಷಾ, ರಾಮಚಂದ್ರ ಬಳೆಗಾರ್, ಪದ್ಮ ಸುರೇಶ್, ಉಮಾ ಸುರೇಶ್, ಮುರುಳಿ ಕೆರೆಹಳ್ಳಿ, ರೇಖಾರವಿ, ಅಶ್ವಿನಿ ಸತೀಶ್, ಶೈಲಾ ಆರ್.ಪ್ರಭು, ನಾಗರತ್ನ ದೇವರಾಜ್, ಹಿರಿಯಣ್ಣ ಭಂಡಾರಿ, ದಿವಾಕರ್, ಉಲ್ಲಾಸ್, ಪರಮೇಶ ಇನ್ನಿತರ ಹಲವರು ಹಾಜರಿದ್ದರು.


ವಾಹನ ಮಾರಾಟ ಅಭಿಯಾನ

RIPPONPETE ; ಮಹೆಂತಾ ಮೋಟಾರ‍್ಸ್ ಮಹೀಂದ್ರಾ ಶೋರೂಂ ಶಿವಮೊಗ್ಗದವರು ಮಹೀಂದ್ರ ಕಂಪನಿಯ ಜೀಪ್ ಮಾರಾಟ ಪ್ರದರ್ಶನದೊಂದಿಗೆ ರೈತರಲ್ಲಿ ಅಭಿಯಾನ ನಡೆಸಿದರು.

ಕಂಪನಿಯ ಸೇಲ್ಸ್ ಮ್ಯಾನೇಜರ್ ಈ. ನಿರಂಜನ್, ತಬ್ರೇಜ್, ದೇವಾಜಕುರುವರಿ ಇನ್ನಿತರರು ಹಾಜರಿದ್ದರು.

ಮಾಹಿತಿ ಮತ್ತು ಮೂಲ: ಈ ವರದಿಯ ಮಾಹಿತಿ ವರದಿಗಾರರು, ಅಧಿಕೃತ ಪ್ರಕಟಣೆಗಳು ಅಥವಾ ಸ್ಥಳದಲ್ಲಿನ ವಿಶ್ವಾಸಾರ್ಹ ಮೂಲಗಳಿಂದ ಪರಿಶೀಲಿಸಲಾಗಿದೆ.

Mahesh Hindlemane

ಮಲೆನಾಡಿನ ಹೆಬ್ಬಾಗಿಲು ಶಿವಮೊಗ್ಗದ ಸ್ಥಳೀಯ ನ್ಯೂಸ್ ವೆಬ್‌ಸೈಟ್‌ಗಳಲ್ಲಿ ಪ್ರತಿನಿಧಿಯಾಗಿ ವೃತ್ತಿ ಜೀವನ ಪ್ರಾರಂಭ. ಪತ್ರಿಕೋದ್ಯಮದಲ್ಲಿ 8 ವರ್ಷಗಳ ಅನುಭವ. ಜಿಲ್ಲಾ ಮಟ್ಟದ ದಿನಪತ್ರಿಕೆಗಳಲ್ಲಿ ಹಾಗೂ ವೆಬ್‌ಸೈಟ್‌ಗಳಲ್ಲಿ ಮಲೆನಾಡಿಗೆ ಸಂಬಂಧಿಸಿದ ವಿಷಯಗಳ ಲೇಖನಗಳನ್ನು ಬರೆದಿದ್ದೇನೆ. ಪ್ರಸ್ತುತ <strong>'ಮಲ್ನಾಡ್ ಟೈಮ್ಸ್'</strong> ಡಿಜಿಟಲ್ ನಲ್ಲಿ ಸಂಪಾದಕನಾಗಿ ಮುಂದುವರೆದಿದ್ದೇನೆ. <a href="mailto:[email protected]">[email protected]</a>