ಶಿವಮೊಗ್ಗ ಸುದ್ದಿ

ದ್ವಿತೀಯ ಪಿಯು ಮರು ಮೌಲ್ಯಮಾಪನ ; ತೀರ್ಥಹಳ್ಳಿಯ ದೀಕ್ಷಾ ಆರ್. ರಾಜ್ಯಕ್ಕೆ ಟಾಪರ್ !

ತೀರ್ಥಹಳ್ಳಿ ; ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿ ತಾಲ್ಲೂಕಿನ ಮೇಲಿನಕುರುವಳ್ಳಿಯ ವಾಗ್ದೇವಿ ಪಿಯು ಕಾಲೇಜಿನ ವಿದ್ಯಾರ್ಥಿನಿ ದೀಕ್ಷಾ ಆರ್. 2024-25ನೇ ಸಾಲಿನ ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆಯ ಮರು ಮೌಲ್ಯಮಾಪನದಲ್ಲಿ 600ಕ್ಕೆ 600 ಅಂಕ ಗಳಿಸುವ ಮೂಲಕ ವಿಜ್ಞಾನ ವಿಭಾಗದಲ್ಲಿ ರಾಜ್ಯಕ್ಕೆ ಟಾಪರ್ ಆಗಿ ಹೊರಹೊಮ್ಮಿದ್ದಾರೆ.

WhatsApp Group Join Now
Telegram Group Join Now
Instagram Group Join Now

ಈ ಮೊದಲು ದೀಕ್ಷಾ 600ಕ್ಕೆ 599 ಅಂಕ ಗಳಿಸಿ ದಕ್ಷಿಣ ಕನ್ನಡ ಜಿಲ್ಲೆಯ ಕೊಡಿಯಾಲಬೈಲಿನ ಎಕ್ಸ್‌ಪರ್ಟ್ ಪಿಯು ಕಾಲೇಜಿನ ವಿದ್ಯಾರ್ಥಿನಿ ಅಮೂಲ್ಯ ಕಾಮತ್ ಜತೆ ಅಗ್ರ ಸ್ಥಾನ ಹಂಚಿಕೊಂಡಿದ್ದರು.

ದೀಕ್ಷಾ ರಸಾಯನಶಾಸ್ತ್ರದಲ್ಲಿ ಈ ಮೊದಲು 99 ಅಂಕ ಗಳಿಸಿದ್ದು, ಮತ್ತೆ ಒಂದು ಅಂಕಕ್ಕಾಗಿ ಮರು ಮೌಲ್ಯಮಾಪನಕ್ಕೆ ಅರ್ಜಿ ಸಲ್ಲಿಸಿದ್ದರು. ಮರು ಮೌಲ್ಯಮಾಪನದಲ್ಲಿ 100ಕ್ಕೆ 100 ಅಂಕಗಳು ಬಂದಿದ್ದು, ಒಟ್ಟು 600ಕ್ಕೆ 600 ಅಂಕಗಳನ್ನು ಪಡೆದಿದ್ದಾರೆ.

Malnad Times App ಡೌನ್‌ಲೋಡ್ ಮಾಡಿಶಿವಮೊಗ್ಗ ಮತ್ತು ಮಲೆನಾಡಿನ ಸುದ್ದಿಗಳನ್ನು ತಕ್ಷಣ ಪಡೆಯಿರಿ.
GET IT ONGoogle Play

ಮರು ಮೌಲ್ಯಮಾಪನದ ನಂತರ 600 ಅಂಕ ಬಂದಿದ್ದು ಖುಷಿಯಾಗಿದೆ. ರಸಾಯನಶಾಸ್ತ್ರದಲ್ಲಿ ಪ್ರಶ್ನೆಯೊಂದಕ್ಕೆ ಐದು ಅಂಕಗಳ ಬದಲು ನಾಲ್ಕು ಅಂಕ ಕೊಟ್ಟಿದ್ದರು. ಈಗ ಆ ಒಂದು ಅಂಕವೂ ಸಿಕ್ಕಿದೆ.
– ಆರ್. ದೀಕ್ಷಾ, ವಾಗ್ದೇವಿ ಕಾಲೇಜು ವಿದ್ಯಾರ್ಥಿನಿ

ಬೆಂಗಳೂರಿನ ಆರ್.ವಿ. ಕಾಲೇಜಿನಲ್ಲಿ ದೀಕ್ಷಾ
ಇಂಜಿನಿಯರಿಂಗ್ ಮಾಡಲು ಬಯಸಿದ್ದಾಳೆ. ಸ್ಕ್ಯಾನ್ ಕಾಪಿ ನೋಡಿದ ಬಳಿಕ ಹೆಚ್ಚುವರಿ ಅಂಕದ ಬಗ್ಗೆ ವಿಶ್ವಾಸ ಮೂಡಿತ್ತು. ಹೀಗಾಗಿ ಮರುಮೌಲ್ಯಮಾಪನಕ್ಕೆ ಮೊರೆಹೋಗಲು ನಿರ್ಧರಿಸಿದೆವು.
– ಉಷಾ ಶಿಕ್ಷಕಿ, ದೀಕ್ಷಾ ತಾಯಿ

ಮಾಹಿತಿ ಮತ್ತು ಮೂಲ: ಈ ವರದಿಯನ್ನು Malnad Times ಸಂಪಾದಕೀಯ ತಂಡವು ಲಭ್ಯ ಮಾಹಿತಿಯ ಆಧಾರದಲ್ಲಿ ಪರಿಶೀಲಿಸಿದೆ.

Mahesha Hindlemane

ಮಲೆನಾಡಿನ ಹೆಬ್ಬಾಗಿಲು ಶಿವಮೊಗ್ಗದ ಸ್ಥಳೀಯ ನ್ಯೂಸ್ ವೆಬ್‌ಸೈಟ್‌ಗಳಲ್ಲಿ ಪ್ರತಿನಿಧಿಯಾಗಿ ವೃತ್ತಿ ಜೀವನ ಪ್ರಾರಂಭ. ಪತ್ರಿಕೋದ್ಯಮದಲ್ಲಿ 8 ವರ್ಷಗಳ ಅನುಭವ. ಜಿಲ್ಲಾ ಮಟ್ಟದ ದಿನಪತ್ರಿಕೆಗಳಲ್ಲಿ ಹಾಗೂ ವೆಬ್‌ಸೈಟ್‌ಗಳಲ್ಲಿ ಮಲೆನಾಡಿಗೆ ಸಂಬಂಧಿಸಿದ ವಿಷಯಗಳ ಲೇಖನಗಳನ್ನು ಬರೆದಿದ್ದೇನೆ. ಪ್ರಸ್ತುತ 'ಮಲ್ನಾಡ್ ಟೈಮ್ಸ್' ಡಿಜಿಟಲ್ ನಲ್ಲಿ ಸಂಪಾದಕನಾಗಿ ಮುಂದುವರೆದಿದ್ದೇನೆ. ಇ-ಮೇಲ್ : [email protected]