ರಿಪ್ಪನ್ಪೇಟೆ ; ಮುಂಬರುವ ಗಣೇಶ ಹಬ್ಬ ಹಾಗೂ ಈದ್ ಮಿಲಾದ್ ಹಿನ್ನೆಲೆಯಲ್ಲಿ ನಾಳೆ (ಆ.20) ಬೆಳಗ್ಗೆ 10:30ಕ್ಕೆ ರಿಪ್ಪನ್ಪೇಟೆಯ ಶಿವಮೊಗ್ಗ ರಸ್ತೆಯಲ್ಲಿರುವ ಶಿವಮಂದಿರದಲ್ಲಿ ಶಿವಮೊಗ್ಗ ಎಸ್.ಪಿ. ಮಿಥುನ್ ಕುಮಾರ್ ನೇತೃತ್ವದಲ್ಲಿ ಶಾಂತಿಸಭೆ ಏರ್ಪಡಿಸಲಾಗಿದೆ ಎಂದು ರಿಪ್ಪನ್ಪೇಟೆ ಪೊಲೀಸ್ ಠಾಣೆ ಪತ್ರಿಕಾ ಪ್ರಕಟಣೆ ಮೂಲಕ ತಿಳಿಸಿದೆ.
ಈ ಸಭೆಗೆ ಠಾಣಾ ವ್ಯಾಪ್ತಿಯ ಎಲ್ಲಾ ಗಣಪತಿ ಸಮಿತಿ ಹಾಗೂ ಈದ್ ಮಿಲಾದ್ ಸಮಿತಿ ಸದಸ್ಯರು, ಮುಖಂಡರುಗಳು ಮತ್ತು ಸಾರ್ವಜನಿಕರು ತಪ್ಪದೆ ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಸಭೆಯನ್ನು ಯಶಸ್ವಿಗೊಳಿಸಲು ಕೋರಲಾಗಿದೆ.

ಮಲೆನಾಡಿನ ಹೆಬ್ಬಾಗಿಲು ಶಿವಮೊಗ್ಗದ ಸ್ಥಳೀಯ ನ್ಯೂಸ್ ವೆಬ್ಸೈಟ್ಗಳಲ್ಲಿ ಪ್ರತಿನಿಧಿಯಾಗಿ ವೃತ್ತಿ ಜೀವನ ಪ್ರಾರಂಭ. ಪತ್ರಿಕೋದ್ಯಮದಲ್ಲಿ 7 ವರ್ಷಗಳ ಅನುಭವ. ಜಿಲ್ಲಾ ಮಟ್ಟದ ದಿನಪತ್ರಿಕೆಗಳಲ್ಲಿ ಹಾಗೂ ವೆಬ್ಸೈಟ್ಗಳಲ್ಲಿ ಮಲೆನಾಡಿಗೆ ಸಂಬಂಧಿಸಿದ ವಿಷಯಗಳ ಲೇಖನಗಳನ್ನು ಬರೆದಿದ್ದೇನೆ. ಪ್ರಸ್ತುತ ‘ಮಲ್ನಾಡ್ ಟೈಮ್ಸ್’ ಡಿಜಿಟಲ್ ನಲ್ಲಿ ಸಂಪಾದಕನಾಗಿ ಮುಂದುವರೆದಿದ್ದೇನೆ.