ಬಾಳೆಹೊನ್ನೂರು ; ಶ್ರೀ ಜಗದ್ಗುರು ರಂಭಾಪುರಿ ವೀರಸಿಂಹಾಸನ ಮಹಾಸಂಸ್ಥಾನ ಪೀಠದಲ್ಲಿ ಜನವರಿ 19ರಿಂದ 21ರವರೆಗೆ ಶತರುದ್ರಯಾಗ ಪೂಜಾ ಕಾರ್ಯಕ್ರಮವನ್ನು ಬಾಳೆಹೊನ್ನೂರು ಶ್ರೀ ರಂಭಾಪುರಿ ಡಾ.ವೀರಸೋಮೇಶ್ವರ ಜಗದ್ಗುರುಗಳ ಸಾನ್ನಿಧ್ಯದಲ್ಲಿ ಹಮ್ಮಿಕೊಳ್ಳಲಾಗಿದೆ.
ಶ್ರೀ ಜಗದ್ಗುರು ರೇಣುಕಾಚಾರ್ಯ ಗುರುಕುಲದ ಕುಲಪತಿಗಳಾದ ಬೆಳಗಾಲಪೇಟೆ ವೇ.ಸಿದ್ಧಲಿಂಗಯ್ಯ ಶಾಸ್ತಿçಗಳು ಮತ್ತು ಗುರುಕುಲ ಸಾಧಕರ ವೈದಿಕತ್ವದಲ್ಲಿ ಜ. 19ರಂದು ನವಪದರುದ್ರ ಕಲಶ ಮಂಡಲ ಸ್ಥಾಪನೆ, ಆರಾಧನೆ, ದಶಶಕ್ತಿ ಮಹಾಕಲಶ ಪೂಜಾ, ದಶಪಾಲಕ ರುದ್ರನ ಆರಾಧನ, ರುದ್ರ ಪರಿವಾರ ಸಮೇತ ಪರಬ್ರಹ್ಮರುದ್ರ ಕಲಶ ಪೂಜಾ, ಗಣಹೋಮ, ವೀರಭದ್ರ ಹೋಮ, ಪೂರ್ಣಾಹುತಿ ಮಹಾಮಂಗಲ, ಜ. 20ರಂದು ಶತರುದ್ರಹೋಮ ಪೂರ್ಣಾಹುತಿ ಮಹಾಮಂಗಲ ಸಾಯಂಕಾಲ ಲಕ್ಷ ಶಿವಪಂಚಾಕ್ಷರಿ ಮಂತ್ರ ಜಪ, ಶಿವಪಂಚಾಕ್ಷರ ನಕ್ಷತ್ರಮಾಲಾ ಸ್ತೋತ್ರ ಶಿವನಾಮ ಸ್ಮರಣೆ ಹಾಗೂ ಶಿವಭಜನೆ ಹಾಗೂ ಜ. 21ರಂದು ರುದ್ರ ಪರಿವಾರ ಕಲಶ ಸಮೇತ ಶ್ರೀ ಜಗದ್ಗುರು ರೇಣುಕಾಚಾರ್ಯರ ಮತ್ತು ಕ್ಷೇತ್ರನಾಥ ಶ್ರೀ ವೀರಭದ್ರಸ್ವಾಮಿಯ ಮಂಗಲ ಮೂರ್ತಿಗೆ ಶತರುದ್ರಾಭಿಷೇಕ ರಾಜೋಪಚಾರ ಪೂಜಾ ಅಷ್ಟೋತ್ತರ ಮಹಾನೈವೇದ್ಯ ನಂತರ ಮಹಾಮಂಗಲ ಜರುಗುವುದು.

ದಿನ ನಿತ್ಯ ಪ್ರಾಥಃಕಾಲ ಶ್ರೀ ಜಗದ್ಗುರು ರೇಣುಕಾಚಾರ್ಯರು, ಕ್ಷೇತ್ರನಾಥ ಶ್ರೀ ವೀರಭದ್ರಸ್ವಾಮಿ, ಶ್ರೀ ಸೋಮೇಶ್ವರ ಮಹಾಲಿಂಗ ಹಾಗೂ ಶಕ್ತಿತ್ರಯ ದೇವಿಗೆ ವಿಶೇಷ ಪೂಜೆ ನಡೆಯುವುದು.
ಧರ್ಮಾಭಿಮಾನಿಗಳು ಮೇಲ್ಕಂಡ ಪೂಜಾ ಕಾರ್ಯಗಳಲ್ಲಿ ಪಾಲ್ಗೊಳ್ಳುವಂತೆ ಶ್ರೀ ಪೀಠದ ಪ್ರಕಟಣೆ ತಿಳಿಸಿದೆ.
Author Profile

- ಅವರು MalnadTimes.com ನ ಸಂಪಾದಕರಾಗಿ ಸೇವೆ ಸಲ್ಲಿಸುತ್ತಿದ್ದಾರೆ. ಸ್ಥಳೀಯ ಪತ್ರಿಕೋದ್ಯಮದ ಮೇಲಿನ ನಿಷ್ಠೆ ಮತ್ತು ಸಾಮಾಜಿಕ ಜವಾಬ್ದಾರಿಯೊಂದಿಗೆ, ಅವರು ಮಲ್ನಾಡು ಪ್ರದೇಶದ ಜನಜೀವನ, ಪರಿಸರ, ಕೃಷಿ, ಶಿಕ್ಷಣ ಮತ್ತು ಅಭಿವೃದ್ಧಿ ಸಂಬಂಧಿತ ವಿಷಯಗಳನ್ನು ಪ್ರಾಮಾಣಿಕವಾಗಿ ಹಾಗೂ ನಿರಂತರವಾಗಿ ಹಂಚಿಕೊಂಡು ಬರುತ್ತಿದ್ದಾರೆ. ನಿಖರತೆ, ನೈತಿಕತೆ ಮತ್ತು ಸಾರ್ವಜನಿಕ ಹಿತಚಿಂತನೆಯಾದರೂ ಅವರ ಸಂಪಾದಕೀಯ ನಿಲುವುಗಳ ಹತ್ತಿರ ಇರುತ್ತದೆ. Malnad Times ನ್ನು ವಿಶ್ವಾಸಾರ್ಹ ಸುದ್ದಿಮೂಲವಾಗಿಸಲು ಅವರು ನಿರಂತರ ಶ್ರಮಿಸುತ್ತಿದ್ದಾರೆ.
Latest entries
RipponpeteJune 2, 2025ಕೊಪ್ಪಳ ಗವಿಸಿದ್ದೇಶ್ವರ ಮಠದ ಶ್ರೀಗಳು ಶಿವಮೊಗ್ಗ ಬೆಕ್ಕಿನಕಲ್ಮಠಕ್ಕೆ ಭೇಟಿ
RipponpeteJune 1, 2025ಶ್ರುತಪಂಚಮಿ ಆಚರಣೆ | ಜೈನಧರ್ಮ ಸಿದ್ಧಾಂತಗಳು ಜೀವನ ಮೌಲ್ಯಗಳನ್ನು ವರ್ಧಿಸುತ್ತದೆ ; ಹೊಂಬುಜ ಶ್ರೀಗಳು
HosanagaraJune 1, 2025ಹೊಸನಗರ ; ಜೂ. 2 ಮತ್ತು 3ಕ್ಕೆ ತಾಲೂಕಿನಲ್ಲಿ ವಿಕಸಿತ ಕೃಷಿ ಸಂಕಲ್ಪ ಅಭಿಯಾನ 2025 ಕಾರ್ಯಕ್ರಮ
Adike RateJune 1, 2025Arecanut, Black Pepper Price 31 May 2025 | ರಾಜ್ಯದ ಪ್ರಮುಖ ಮಾರುಕಟ್ಟೆಗಳಲ್ಲಿ ಅಡಿಕೆ ಮತ್ತು ಕಾಳುಮೆಣಸು ರೇಟ್ ಎಷ್ಟಿದೆ ?