SHIVAMOGGA | ಜಿಲ್ಲಾದ್ಯಂತ ಕಳೆದ ಐದಾರು ದಿನಗಳಿಂದ ಧಾರಾಕಾರವಾಗಿ ವರುಣ ಅಬ್ಬರಿಸುತ್ತಿದ್ದು ಅದರಲ್ಲೂ ಹೊಸನಗರ, ತೀರ್ಥಹಳ್ಳಿ, ಸಾಗರ ತಾಲೂಕಿನಲ್ಲಿ ಭಾರಿ ಮಳೆಯಿಂದಾಗಿ ಜನಜೀವನ ಅಸ್ತವ್ಯಸ್ಥಗೊಂಡಿದೆ. ಹೊಸನಗರ ತಾಲೂಕಿನ ಬಿದನೂರುನಗರದಲ್ಲಿ ರಾಜ್ಯದಲ್ಲೇ ಅತ್ಯಧಿಕ ಮಳೆ ದಾಖಲಾಗಿದೆ.
ರಿಪ್ಪನ್ಪೇಟೆಯಲ್ಲಿ ಡೆಂಘೀ ರಣಕೇಕೆ, ಇವತ್ತು ಮತ್ತೊಂದು ಬಲಿ !
ಇನ್ನೂ ಗುರುವಾರ ಬೆಳಗ್ಗೆ 8:30ಕ್ಕೆ ಅಂತ್ಯಗೊಂಡಂತೆ ಕಳೆದ 24 ಗಂಟೆಗಳಲ್ಲಿ ಶಿವಮೊಗ್ಗ ಜಿಲ್ಲೆಯ ಯಾವೆಲ್ಲ ಪ್ರದೇಶದಲ್ಲಿ ಎಷ್ಟು ಮಳೆಯಾಗಿದೆ ಎಂದು ಇಲ್ಲಿ ಕೊಡಲಾಗಿದೆ.

ಎಲ್ಲೆಲ್ಲಿ ಎಷ್ಟು ಮಳೆಯಾಗಿದೆ ? (M.M.)
- ಬಿದನೂರುನಗರ (ಹೊಸನಗರ) : 250
- ಚಕ್ರಾನಗರ (ಹೊಸನಗರ) : 210
- ಸೊನಲೆ (ಹೊಸನಗರ) : 195
- ನೊಣಬೂರು (ತೀರ್ಥಹಳ್ಳಿ) : 172
- ಮಾಸ್ತಿಕಟ್ಟೆ (ಹೊಸನಗರ) : 165
- ಹುಲಿಕಲ್ (ಹೊಸನಗರ) : 158
- ಹುಂಚ (ಹೊಸನಗರ) : 156
- ಮೇಲಿನಬೆಸಿಗೆ (ಹೊಸನಗರ) : 132
- ಹೊಸೂರು-ಸಂಪೆಕಟ್ಟೆ (ಹೊಸನಗರ) : 130
- ಸುಳಗೋಡು (ಹೊಸನಗರ) : 126.5
- ಹಾದಿಗಲ್ಲು (ತೀರ್ಥಹಳ್ಳಿ) : 124.5
- ಯಡೂರು (ಹೊಸನಗರ) : 124
- ಮಾರುತಿಪುರ (ಹೊಸನಗರ) : 123
- ಕಂಡಿಕಾ (ಸಾಗರ) : 118.5
- ಕಲ್ಮನೆ (ಸಾಗರ) : 116
- ಕಾರ್ಗಲ್ (ಸಾಗರ) : 116
- ಬೆನ್ನೂರು (ಸೊರಬ) : 115.5
- ಮಾಣಿ (ಹೊಸನಗರ) : 110
- ಸಾವೇಹಕ್ಲು (ಹೊಸನಗರ) : 106
- ಹೊಸನಗರ (ಹೊಸನಗರ) : 92.4
- ಅರಸಾಳು (ಹೊಸನಗರ) : 75
ಲಿಂಗನಮಕ್ಕಿ ಜಲಾಶಯ :
1819 ಅಡಿ ಗರಿಷ್ಠ ಮಟ್ಟದ ಲಿಂಗನಮಕ್ಕಿ ಜಲಾಶಯದ ನೀರಿನ ಮಟ್ಟ ಗುರುವಾರ ಬೆಳಿಗ್ಗೆ 8:00 ಗಂಟೆಗೆ 1787.80 ಅಡಿ ತಲುಪಿದ್ದು ಜಲಾಶಯಕ್ಕೆ 69226 ಕ್ಯೂಸೆಕ್ ನೀರು ಹರಿದು ಬರುತ್ತಿದೆ. ಕಳೆದ ವರ್ಷ ಇದೆ ಅವಧಿಗೆ 1757.30 ಅಡಿ ನೀರು ಸಂಗ್ರಹವಾಗಿದ್ದು, ಕಳೆದ ಬಾರಿಗಿಂತ ಈ ಬಾರಿ 32 ಅಡಿ ಹೆಚ್ಚಿನ ನೀರು ಸಂಗ್ರಹವಾಗಿದೆ.
ರಿಪ್ಪನ್ಪೇಟೆಯಲ್ಲಿ ಡೆಂಘೀ ರಣಕೇಕೆ, ಇವತ್ತು ಮತ್ತೊಂದು ಬಲಿ !
Author Profile

- ಅವರು MalnadTimes.com ನ ಸಂಪಾದಕರಾಗಿ ಸೇವೆ ಸಲ್ಲಿಸುತ್ತಿದ್ದಾರೆ. ಸ್ಥಳೀಯ ಪತ್ರಿಕೋದ್ಯಮದ ಮೇಲಿನ ನಿಷ್ಠೆ ಮತ್ತು ಸಾಮಾಜಿಕ ಜವಾಬ್ದಾರಿಯೊಂದಿಗೆ, ಅವರು ಮಲ್ನಾಡು ಪ್ರದೇಶದ ಜನಜೀವನ, ಪರಿಸರ, ಕೃಷಿ, ಶಿಕ್ಷಣ ಮತ್ತು ಅಭಿವೃದ್ಧಿ ಸಂಬಂಧಿತ ವಿಷಯಗಳನ್ನು ಪ್ರಾಮಾಣಿಕವಾಗಿ ಹಾಗೂ ನಿರಂತರವಾಗಿ ಹಂಚಿಕೊಂಡು ಬರುತ್ತಿದ್ದಾರೆ. ನಿಖರತೆ, ನೈತಿಕತೆ ಮತ್ತು ಸಾರ್ವಜನಿಕ ಹಿತಚಿಂತನೆಯಾದರೂ ಅವರ ಸಂಪಾದಕೀಯ ನಿಲುವುಗಳ ಹತ್ತಿರ ಇರುತ್ತದೆ. Malnad Times ನ್ನು ವಿಶ್ವಾಸಾರ್ಹ ಸುದ್ದಿಮೂಲವಾಗಿಸಲು ಅವರು ನಿರಂತರ ಶ್ರಮಿಸುತ್ತಿದ್ದಾರೆ.
Latest entries
HosanagaraJune 5, 2025ಹೊಸನಗರದಲ್ಲಿ ತ್ರೈಮಾಸಿಕ ಕೆಡಿಪಿ ಸಭೆ | ವಿದ್ಯುತ್ ಸಮಸ್ಯೆ ಬಗೆಹರಿಸಲು ತುರ್ತು ಕ್ರಮಕೈಗೊಳ್ಳಿ ; ಶಾಸಕ ಬೇಳೂರು ಗೋಪಾಲಕೃಷ್ಣ
RipponpeteJune 5, 2025ಮುರುಘಾಮಠದ ಉತ್ತರಾಧಿಕಾರಿ ಉನ್ನತ ಅಧ್ಯಯನಕ್ಕಾಗಿ ಶಿವಯೋಗ ಮಂದಿರದ ಗುರುಕುಲಕ್ಕೆ
HosanagaraJune 5, 2025ಹೊಸನಗರ ಪ.ಪಂ. ವ್ಯಾಪ್ತಿಯಲ್ಲಿ ಕುಡಿಯುವ ನೀರಿಗಾಗಿ ಪರದಾಟ…!
RipponpeteJune 4, 2025ಅಮ್ಮನಘಟ್ಟ ನೂತನ ಶಿಲಾಮಯ ದೇವಾಲಯ ಲೋಕಾರ್ಪಣೆ ; ದೇವಸ್ಥಾನದಲ್ಲಿ ಜಾತಿ ಭೇದ ಭಾವನೆ ಬೇಡ