Shivamogga :ಬೆಳಗಿನ ಜಾವ ನಗರದ ಎಲ್ ಎಲ್ ಆರ್ ರಸ್ತೆಯಲ್ಲಿ ಬಸ್ ಮತ್ತು ಕಾರಿನ ನಡುವೆ ನಡೆದ ಭೀಕರ ಅಪಘಾತದಲ್ಲಿ ಓರ್ವ ವ್ಯಕ್ತಿ ಮೃತಪಟ್ಟಿದ್ದು, ಎಂಟು ಮಂದಿ ಗಾಯಗೊಂಡಿದ್ದಾರೆ.
ಬೆಂಗಳೂರಿನಿಂದ ಶಿವಮೊಗ್ಗದತ್ತ ಪ್ರಯಾಣಿಕರನ್ನು ಹೊತ್ತೊಯ್ಯುತ್ತಿದ್ದ ಬಸ್ ಎಲ್ ಎಲ್ ಆರ್ ರಸ್ತೆಗೆ ಪ್ರವೇಶಿಸುವ ಸಂದರ್ಭದಲ್ಲಿ ಎದುರಿನಿಂದ ಬಂದ ಕಾರಿಗೆ ಡಿಕ್ಕಿಯಾಗಿ ಅಪಘಾತ ಸಂಭವಿಸಿದೆ.
ಢಿಕ್ಕಿ ಹೊಡೆದ ತೀವ್ರತೆಗೆ ಕಾರಿನಲ್ಲಿದ್ದ ಪ್ರದೀಪ್ ಎನ್ನುವ ವ್ಯಕ್ತಿಯು ಗಂಭೀರ ಗಾಯಗಳಿಂದ ಸಾವನ್ನಪ್ಪಿದ್ದಾರೆ. ಬಸ್ ನಲ್ಲಿದ್ದ ಎಂಟು ಪ್ರಯಾಣಿಕರು ಗಾಯಗೊಂಡಿದ್ದು, ಅವರನ್ನು ತಕ್ಷಣವೇ ಮೆಗ್ಗಾನ್ ಆಸ್ಪತ್ರೆಗೆ ದಾಖಲು ಮಾಡಲಾಗಿದೆ.
ಅಪಘಾತಕ್ಕೆ ಕಾರಣ ಬಸ್ ಚಾಲಕನ ಅತಿವೇಗ ಹಾಗೂ ಅಜಾಗರೂಕ ಚಾಲನೆ ಎಂದು ಪ್ರಯಾಣಿಕರು ಆರೋಪ ಮಾಡಿದ್ದಾರೆ. ಕಿರಿದಾದ ರಸ್ತೆಯಲ್ಲಿ ಸುರಕ್ಷತೆಯನ್ನು ಲೆಕ್ಕಿಸದೇ ಚಾಲನೆ ಮಾಡಿದ ಕಾರಣ ಅಪಘಾತ ಸಂಭವಿಸಿದೆ ಎಂಬುದಾಗಿ ಹೇಳಿದ್ದಾರೆ.
ಘಟನೆ ಪಶ್ಚಿಮ ಸಂಚಾರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದ್ದು, ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆಯನ್ನು ಆರಂಭಿಸಿದ್ದಾರೆ.

