ಶಿವಮೊಗ್ಗ ಸುದ್ದಿ

ಶಿವಮೊಗ್ಗ ಜೈಲಿನ ವಿಚಾರಣಾಧೀನ ಕೈದಿ ಅನಾರೋಗ್ಯದಿಂದ ಸಾವು !

ಶಿವಮೊಗ್ಗ:ಶಿವಮೊಗ್ಗ ಕೇಂದ್ರ ಕಾರಾಗೃಹದಲ್ಲಿ ವಿಚಾರಣಾಧೀನ ಕೈದಿಯಾಗಿದ್ದ ವ್ಯಕ್ತಿಯೊಬ್ಬ ಅನಾರೋಗ್ಯದ ಹಿನ್ನಲೆಯಲ್ಲಿ ಸಾವನ್ನಪ್ಪಿದ್ದಾನೆ. ಮೃತ ವ್ಯಕ್ತಿ ಮನ್ಸೂರ್‌ (43), ಟಿಪ್ಪುನಗರ ನಿವಾಸಿ ಎಂದು ಗುರುತಿಸಲಾಗಿದೆ.

WhatsApp Group Join Now
Telegram Group Join Now
Instagram Group Join Now

ಮೂರು ದಿನಗಳಲ್ಲಿ ಜೈಲಿನಿಂದ ಆಸ್ಪತ್ರೆ, ಬಳಿಕ ಮರಣ

📢 Stay Updated! Join our WhatsApp Channel Now →

ಮನ್ಸೂರ್‌ ಸೆಪ್ಟೆಂಬರ್ 15ರಂದು ವಿಚಾರಣಾಧೀನ ಕೈದಿಯಾಗಿ ಶಿವಮೊಗ್ಗ ಜೈಲಿಗೆ ಸೇರಿದ್ದ. ಆದರೆ ಸೆಪ್ಟೆಂಬರ್ 17ರ ಮಧ್ಯರಾತ್ರಿ ಆರೋಗ್ಯ ತೀವ್ರ ಹದಗೆಟ್ಟ ಹಿನ್ನೆಲೆಯಲ್ಲಿ ಕಾರಾಗೃಹ ಅಧಿಕಾರಿಗಳು ಅವರನ್ನು ಮೆಗ್ಗಾನ್‌ ಆಸ್ಪತ್ರೆಗೆ ದಾಖಲಿಸಿದ್ದರು. ಚಿಕಿತ್ಸೆ ಫಲಕಾರಿಯಾಗದೆ ಸೆಪ್ಟೆಂಬರ್ 18ರ ಬೆಳಿಗ್ಗೆ ಅವರು ಮೃತಪಟ್ಟಿದ್ದಾರೆ ಎಂದು ಕಾರಾಗೃಹ ಅಧೀಕ್ಷಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಕೊಲೆ ಯತ್ನ ಪ್ರಕರಣದ ಹಿನ್ನೆಲೆಯಲ್ಲಿ ಬಂಧನ

ಸೆಪ್ಟೆಂಬರ್ 14ರಂದು ಮನ್ಸೂರ್‌ ತನ್ನ ತಂದೆಯೊಂದಿಗೆ ಮನೆಯ ಆಸ್ತಿ ಹಕ್ಕು ಸಂಬಂಧಿತ ವಿಷಯವಾಗಿ ಜಗಳವಾಡಿದ್ದ. ಈ ವೇಳೆ ಕತ್ತರಿಯಿಂದ ತಂದೆಯ ಎದೆ ಹಾಗೂ ಕುತ್ತಿಗೆ ಸೇರಿ ಹಲವು ಭಾಗಗಳಲ್ಲಿ ಚುಚ್ಚಿ ಮಾರಣಾಂತಿಕವಾಗಿ ಗಾಯಪಡಿಸಿದ್ದ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ತುಂಗಾನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.

Malnad Times App ಡೌನ್‌ಲೋಡ್ ಮಾಡಿಶಿವಮೊಗ್ಗ ಮತ್ತು ಮಲೆನಾಡಿನ ಸುದ್ದಿಗಳನ್ನು ತಕ್ಷಣ ಪಡೆಯಿರಿ.
GET IT ONGoogle Play

ಪೊಲೀಸರು ಅವರನ್ನು ಬಂಧಿಸಿ ಸೆಪ್ಟೆಂಬರ್ 15ರಂದು ನ್ಯಾಯಾಲಯಕ್ಕೆ ಹಾಜರುಪಡಿಸಿ, ವಿಚಾರಣಾಧೀನ ಕೈದಿಯಾಗಿ ಶಿವಮೊಗ್ಗ ಜೈಲಿಗೆ ರವಾನಿಸಿದ್ದರು. ಆದರೆ ಕೇವಲ ಮೂರು ದಿನಗಳಲ್ಲೇ ಅವರ ಆರೋಗ್ಯ ಹದಗೆಟ್ಟು ಸಾವಿಗೆ ದಾರಿ ಮಾಡಿಕೊಟ್ಟಿದೆ.

ಈ ಕುರಿತು ಕಾರಾಗೃಹ ಅಧಿಕಾರಿಗಳು ಅಗತ್ಯ ವರದಿ ಸಲ್ಲಿಸಿದ್ದು, ಪ್ರಕರಣವನ್ನು ಕಾನೂನು ಪ್ರಕ್ರಿಯೆ ಅನುಸಾರ ಮುಂದಿನ ತನಿಖೆಗೆ ಒಳಪಡಿಸಲಾಗಿದೆ.

ಮಾಹಿತಿ ಮತ್ತು ಮೂಲ: ಈ ವರದಿಯನ್ನು Malnad Times ಸಂಪಾದಕೀಯ ತಂಡವು ಲಭ್ಯ ಮಾಹಿತಿಯ ಆಧಾರದಲ್ಲಿ ಪರಿಶೀಲಿಸಿದೆ.

Koushik G K

MalnadTimes.com ವೆಬ್‌ಸೈಟ್‌ನ ಸ್ಥಾಪಕ ಮತ್ತು ನಿರ್ವಾಹಕರಾಗಿದ್ದಾರೆ. ಅಕ್ಟೋಬರ್ 3 2019 ರಲ್ಲಿ ಈ ತಾಣವನ್ನು ಆರಂಭಿಸಿದ ಅವರು, ಮೊದಲಿಗೆ ಐಟಿ ಕ್ಷೇತ್ರದಲ್ಲಿ ಕೆಲಸ ಮಾಡಿದ ಅನುಭವ ಹೊಂದಿದ್ದಾರೆ. ತಮ್ಮ ತಾಂತ್ರಿಕ ಪರಿಣತಿಯನ್ನು ಮತ್ತು ಸ್ಥಳೀಯ ಸುದ್ದಿಗಳ ಪ್ರೀತಿಯನ್ನು ಒಂದಾಗಿಸಿ, ಮಲ್ನಾಡಿನ ಜನತೆಗೆ ನಿಖರವಾದ, ವಿಶ್ವಾಸಾರ್ಹ ಹಾಗೂ ಸಮಗ್ರ ಸುದ್ದಿಗಳನ್ನು ತಲುಪಿಸುವ ನಿಟ್ಟಿನಲ್ಲಿ ಈ ತಾಣವನ್ನು ರೂಪಿಸಿದ್ದಾರೆ. Malnad Times ಮೂಲಕ  ಶಿವಮೊಗ್ಗ ಮತ್ತು ಮಲ್ನಾಡು ಭಾಗದ ಸಮುದಾಯದ ಧ್ವನಿಯಾಗಿ, ಗ್ರಾಮೀಣ ಬದುಕು, ಪರಿಸರ, ಕೃಷಿ, ಶಿಕ್ಷಣ, ಮತ್ತು ಸಾರ್ವಜನಿಕ ವಿಚಾರಗಳನ್ನು ತಲುಪಿಸುವ ಪ್ರಯತ್ನದಲ್ಲಿ ತೊಡಗಿದ್ದಾರೆ.ಈ ತಾಣದ ನಿರ್ವಹಣೆ, ತಾಂತ್ರಿಕ ಹಾಗೂ ಸಂಪಾದಕೀಯ ಕಾರ್ಯಗಳಲ್ಲಿ ನಿತ್ಯ ಭಾಗವಹಿಸುತ್ತಿದ್ದಾರೆ.Contact No -7022818650