Shivamogga

SHIVAMOGGA :ಜಿಲ್ಲಾ ಉಸ್ತುವಾರಿ ಸಚಿವ ಮಧು ಬಂಗಾರಪ್ಪ 2 ದಿನ ಜಿಲ್ಲಾ ಪ್ರವಾಸ, ಎಲ್ಲಿಗೆಲ್ಲ ಭೇಟಿ ನೀಡಲಿದ್ದಾರೆ ?

Madhu Bangarappa

SHIVAMOGGA | ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಹಾಗೂ ಜಿಲ್ಲಾ ಉಸ್ತುವಾರಿ ಸಚಿವರ ಜುಲೈ 20 ಮತ್ತು 21 ರಂದು ಜಿಲ್ಲೆಯ ವಿವಿಧ ತಾಲೂಕುಗಳಲ್ಲಿ ಪ್ರವಾಸ ಮಾಡಲಿದ್ದಾರೆ.

WhatsApp Group Join Now
Telegram Group Join Now
Instagram Group Join Now

SORABA :ಮೀನು ಹಿಡಿಯಲು ಹೋದ ವ್ಯಕ್ತಿ ನಾಪತ್ತೆ !

ಎಲ್ಲಿಗೆಲ್ಲ ಭೇಟಿ ನೀಡಲಿದ್ದಾರೆ ?

  • ಜು.20 ರಂದು ಸಂಜೆ 5.00ಕ್ಕೆ ಸೊರಬಕ್ಕೆ ಆಗಮಿಸಲಿರುವ ಸಚಿವರು ಕಡಸೂರು, ವರದಾ ನದಿ ಚೋಳದಗುಡ್ಡೆ ಮತ್ತು ಬಂಕಸಾಣ ಹೊಳೆ ಹತ್ತಿರ ಪ್ರವಾಹ ವೀಕ್ಷಣೆ ಮಾಡುವರು. ರಾತ್ರಿ 9:00ಕ್ಕೆ ಶಿವಮೊಗ್ಗಕ್ಕೆ ಆಗಮಿಸಿ ವಾಸ್ತವ್ಯ ಮಾಡಲಿದ್ದಾರೆ.
  • ಜು. 21 ರಂದು ಬೆ.9:00ಕ್ಕೆ ತಾಳಗುಪ್ಪ ಹೋಬಳಿ ಹಿರೇನೆಲ್ಲೂರು ಗ್ರಾಮದ ಮುಳಗಡೆ ಪ್ರದೇಶಕ್ಕೆ ಭೇಟಿ.
  • ಬೆಳಗ್ಗೆ. 9:50ಕ್ಕೆ ಸೈದೂರು ಕನ್ನಹೊಳೆ ಮುಳುಗಡೆ ಪ್ರದೇಶದ ವೀಕ್ಷಣೆ
  • ಬೆ.10:30ಕ್ಕೆ ಮಂಡಗಳಲೆ ಕಾಳಜಿ ಕೇಂದ್ರಕ್ಕೆ ಭೇಟಿ.
  • ಬೆ.11:15ಕ್ಕೆ ಸಾಗರ ನಗರದಲ್ಲಿ ಮಳೆಯಿಂದ ಹಾನಿಯಾದ ಮನೆ ವೀಕ್ಷಣೆ.
  • ಮ.12:20ಕ್ಕೆ ಹೊಸನಗರ ತಾಲೂಕು ಮಾರುತಿಪುರ ಗ್ರಾಮದಲ್ಲಿ ಎನ್.ಹೆಚ್-766ಸಿ ರಸ್ತೆ ಹಾನಿ ವೀಕ್ಷಣೆ.
  • ಮ.1:20ಕ್ಕೆ ತೀರ್ಥಹಳ್ಳಿ ಪ್ರವಾಸಿ ಮಂದಿರದಲ್ಲಿ ಅಧಿಕಾರಿಗಳೊಂದಿಗೆ ಚರ್ಚೆ ಹಾಗೂ ಪತ್ರಿಕಾಗೋಷ್ಠಿ ನಡೆಸಲಿರುವರು.
  • ಮಧ್ಯಾಹ್ನ 3:30ಕ್ಕೆ ತೀರ್ಥಹಳ್ಳಿ ತಾಲೂಕಿನ ಮೇಲಿನಕುರುವಳ್ಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ರಾಷ್ಟ್ರೀಯ ಹೆದ್ದಾರಿಯ ಗುಡ್ಡ ಕುಸಿದು ತಡೆಗೋಡೆ ಹಾನಿಯಾದ ಪ್ರವೇಶ ವೀಕ್ಷಸಲಿದ್ದಾರೆ.

Malenadu Rain | ಕಳೆದ 24 ಗಂಟೆಗಳಲ್ಲಿ ಹೊಸನಗರ ತಾಲೂಕಿನ ಎಲ್ಲೆಲ್ಲಿ ಎಷ್ಟಾಗಿದೆ ಮಳೆ ?

📢 Stay Updated! Join our WhatsApp Channel Now →

ಸಂಜೆ 5:00ಕ್ಕೆ ತೀರ್ಥಹಳ್ಳಿಯಿಂದ ರಸ್ತೆ ಮುಖಾಂತರ ಬೆಂಗಳೂರಿಗೆ ತೆರಳಲಿದ್ದಾರೆ ಎಂದು ಸಚಿವರ ಆಪ್ತ ಕಾರ್ಯದರ್ಶಿಗಳು ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ.

ಮಾಹಿತಿ ಮತ್ತು ಮೂಲ: ಈ ವರದಿಯ ಮಾಹಿತಿ ವರದಿಗಾರರು, ಅಧಿಕೃತ ಪ್ರಕಟಣೆಗಳು ಅಥವಾ ಸ್ಥಳದಲ್ಲಿನ ವಿಶ್ವಾಸಾರ್ಹ ಮೂಲಗಳಿಂದ ಪರಿಶೀಲಿಸಲಾಗಿದೆ.

Mahesh Hindlemane

ಮಲೆನಾಡಿನ ಹೆಬ್ಬಾಗಿಲು ಶಿವಮೊಗ್ಗದ ಸ್ಥಳೀಯ ನ್ಯೂಸ್ ವೆಬ್‌ಸೈಟ್‌ಗಳಲ್ಲಿ ಪ್ರತಿನಿಧಿಯಾಗಿ ವೃತ್ತಿ ಜೀವನ ಪ್ರಾರಂಭ. ಪತ್ರಿಕೋದ್ಯಮದಲ್ಲಿ 8 ವರ್ಷಗಳ ಅನುಭವ. ಜಿಲ್ಲಾ ಮಟ್ಟದ ದಿನಪತ್ರಿಕೆಗಳಲ್ಲಿ ಹಾಗೂ ವೆಬ್‌ಸೈಟ್‌ಗಳಲ್ಲಿ ಮಲೆನಾಡಿಗೆ ಸಂಬಂಧಿಸಿದ ವಿಷಯಗಳ ಲೇಖನಗಳನ್ನು ಬರೆದಿದ್ದೇನೆ. ಪ್ರಸ್ತುತ <strong>'ಮಲ್ನಾಡ್ ಟೈಮ್ಸ್'</strong> ಡಿಜಿಟಲ್ ನಲ್ಲಿ ಸಂಪಾದಕನಾಗಿ ಮುಂದುವರೆದಿದ್ದೇನೆ. <a href="mailto:[email protected]">[email protected]</a>