Crime News

ಶಿವಮೊಗ್ಗ ; ಟೆಸ್ಟ್ ಡ್ರೈವ್ ನೆಪದಲ್ಲಿ ಬೈಕ್‌ನೊಂದಿಗೆ ಪರಾರಿ !

ಶಿವಮೊಗ್ಗ ; ಬೈಕ್ ಖರೀದಿಗೆ ಬಂದವನೊಬ್ಬ ಟೆಸ್ಟ್ ಡ್ರೈವ್ ನೆಪದಲ್ಲಿ ಬೈಕ್ ಸಮೇತ ಪರಾರಿಯಾದ ಘಟನೆ ಶಿವಮೊಗ್ಗದಲ್ಲಿ ನಡೆದಿದೆ.

WhatsApp Group Join Now
Telegram Group Join Now
Instagram Group Join Now

ಏನಿದು ಘಟನೆ ?

📢 Stay Updated! Join our WhatsApp Channel Now →

ಹೊಸನಗರದ ಪ್ರಮೋದ್ ಭಟ್ ತಮ್ಮ ಪಲ್ಸರ್ ಬೈಕ್ ಮಾರಾಟ ಮಾಡಲು ನಿರ್ಧರಿಸಿ ಫೇಸ್ಬುಕ್ನಲ್ಲಿ ಮಾಹಿತಿ ಪ್ರಕಟಿಸಿದ್ದರು. ಅವರಿಗೆ ಕರೆ ಮಾಡಿದ ವ್ಯಕ್ತಿ ಬೆಂಗಳೂರಿನ ನಿವಾಸಿ ನವೀನ್ ಎಂದು ಪರಿಚಯಿಸಿಕೊಂಡಿದ್ದ. ಬೈಕಿನ ವಿವರಗಳನ್ನು ಪಡೆದುಕೊಂಡಿದ್ದ. ಮಾ. 30ರಂದು ಶಿವಮೊಗ್ಗಕ್ಕೆ ಬರುವುದಾಗಿ ಆತ ಹೇಳಿದ್ದು, ಪ್ರಮೋದ್ ಭಟ್ ಬೈಕ್ ಸಮೇತ ಶಿವಮೊಗ್ಗದ ಕೆಎಸ್‌ಆರ್ಟಿಸಿ ಬಸ್ ನಿಲ್ದಾಣಕ್ಕೆ ಬಂದಿದ್ದು, ನಿಲ್ದಾಣದ ಎದುರಿನ ಹೋಟೆಲ್ ಬಳಿ ಅವರನ್ನು ಭೇಟಿಯಾದ ನವೀನ್ 1.90 ಲಕ್ಷ ರೂ.ಗೆ ಬೈಕ್ ಖರೀದಿಸುವುದಾಗಿ ಹೇಳಿದ್ದಾನೆ. 70 ಸಾವಿರ ನಗದು ಕೊಡುತ್ತೇನೆ. ಬೈಕ್ ಮೇಲೆ ಇರುವ 1.20 ಲಕ್ಷ ರೂ. ಸಾಲವನ್ನು ತೀರಿಸುತ್ತೇನೆ ಎಂದು ತಿಳಿಸಿದ್ದ.

ಮಧ್ಯಾಹ್ನ 12 ಗಂಟೆಗೆ ಟ್ರಯಲ್ ನೋಡುವುದಾಗಿ ಬೈಕ್ ತೆಗೆದುಕೊಂಡು ಹೋದ ಆತ ಪರಾರಿಯಾಗಿದ್ದಾನೆ. ಮಧ್ಯಾಹ್ನ 2 ಗಂಟೆಗೆ ಫೋನ್ ಕರೆ ಸ್ವೀಕರಿಸಿದ್ದಾನೆ ನಂತರ ಫೋನ್ ಕರೆ ಸ್ವೀಕರಿಸದೆ ನಾಪತ್ತೆಯಾಗಿದ್ದಾನೆ.

Malnad Times App ಡೌನ್‌ಲೋಡ್ ಮಾಡಿಶಿವಮೊಗ್ಗ ಮತ್ತು ಮಲೆನಾಡಿನ ಸುದ್ದಿಗಳನ್ನು ತಕ್ಷಣ ಪಡೆಯಿರಿ.
GET IT ONGoogle Play
ಲೇಖನವನ್ನು ಮುಂದುವರಿಸಿ ಓದಿ

ಬೈಕ್ ಕಳೆದುಕೊಂಡ ಪ್ರಮೋದ್ ಭಟ್ ಶಿವಮೊಗ್ಗದ ದೊಡ್ಡಪೇಟೆ ಠಾಣೆ ಪೊಲೀಸರಿಗೆ ದೂರು ನೀಡಿದ್ದಾರೆ.

ಮಾಹಿತಿ ಮತ್ತು ಮೂಲ: ಈ ವರದಿಯ ಮಾಹಿತಿ ವರದಿಗಾರರು, ಅಧಿಕೃತ ಪ್ರಕಟಣೆಗಳು ಅಥವಾ ಸ್ಥಳದಲ್ಲಿನ ವಿಶ್ವಾಸಾರ್ಹ ಮೂಲಗಳಿಂದ ಪರಿಶೀಲಿಸಲಾಗಿದೆ.

Mahesh Hindlemane

ಮಲೆನಾಡಿನ ಹೆಬ್ಬಾಗಿಲು ಶಿವಮೊಗ್ಗದ ಸ್ಥಳೀಯ ನ್ಯೂಸ್ ವೆಬ್‌ಸೈಟ್‌ಗಳಲ್ಲಿ ಪ್ರತಿನಿಧಿಯಾಗಿ ವೃತ್ತಿ ಜೀವನ ಪ್ರಾರಂಭ. ಪತ್ರಿಕೋದ್ಯಮದಲ್ಲಿ 8 ವರ್ಷಗಳ ಅನುಭವ. ಜಿಲ್ಲಾ ಮಟ್ಟದ ದಿನಪತ್ರಿಕೆಗಳಲ್ಲಿ ಹಾಗೂ ವೆಬ್‌ಸೈಟ್‌ಗಳಲ್ಲಿ ಮಲೆನಾಡಿಗೆ ಸಂಬಂಧಿಸಿದ ವಿಷಯಗಳ ಲೇಖನಗಳನ್ನು ಬರೆದಿದ್ದೇನೆ. ಪ್ರಸ್ತುತ <strong>'ಮಲ್ನಾಡ್ ಟೈಮ್ಸ್'</strong> ಡಿಜಿಟಲ್ ನಲ್ಲಿ ಸಂಪಾದಕನಾಗಿ ಮುಂದುವರೆದಿದ್ದೇನೆ. <a href="mailto:[email protected]">[email protected]</a>