Shivamogga News

ನಕಲಿ ದಾಖಲೆ ಸೃಷ್ಟಿಸಿ ವಂಚನೆ: ಶಿವಮೊಗ್ಗದಲ್ಲಿ ಆರೋಪಿಗೆ 5 ವರ್ಷ ಕಠಿಣ ಕಾರಾಗೃಹ ಶಿಕ್ಷೆ

ನಕಲಿ ದಾಖಲೆ ಸೃಷ್ಟಿಸಿ ವಂಚನೆ: ಶಿವಮೊಗ್ಗದಲ್ಲಿ ಆರೋಪಿಗೆ 5 ವರ್ಷ ಕಠಿಣ ಕಾರಾಗೃಹ ಶಿಕ್ಷೆ – phpo

ಶಿವಮೊಗ್ಗ: ನಕಲಿ ದಾಖಲೆಗಳು, ಸರ್ಕಾರಿ ಸ್ಟ್ಯಾಂಪ್ ಹಾಗೂ ವಿವಿಧ ಸರ್ಕಾರಿ ಕಚೇರಿಗಳ ಮೊಹರುಗಳನ್ನು ಅಕ್ರಮವಾಗಿ ಸೃಷ್ಟಿಸಿ ವಂಚನೆ ನಡೆಸಿದ ಆರೋಪ ಸಾಬೀತಾದ ಹಿನ್ನೆಲೆಯಲ್ಲಿ ಆರೋಪಿಗೆ 5 ವರ್ಷ ಕಠಿಣ ಕಾರಾಗೃಹ ಶಿಕ್ಷೆ ಹಾಗೂ ₹17,000 ದಂಡ ವಿಧಿಸಿ ಶಿವಮೊಗ್ಗ ನ್ಯಾಯಾಲಯ ಆದೇಶಿಸಿದೆ.

WhatsApp Group Join Now
Telegram Group Join Now
Instagram Group Join Now
📢 Stay Updated! Join our WhatsApp Channel Now →

ಶಿವಮೊಗ್ಗ ನಗರದ ಎ.ಎನ್.ಕೆ. ರಸ್ತೆಯ ಗೋವಿಂದಪ್ಪ ಕಾಂಪ್ಲೆಕ್ಸ್‌ನಲ್ಲಿರುವ ಇಮೇಜ್ ಟೆಕ್ನಾಲಜೀಸ್ ಎಂಬ ಕಂಪ್ಯೂಟರ್ ಅಂಗಡಿಯಲ್ಲಿ ವಿಷ್ಣುಭಕ್ತ ಎಂಬಾತ ನಕಲಿ ದಾಖಲೆಗಳನ್ನು ಸೃಷ್ಟಿಸುತ್ತಿದ್ದಾನೆ ಎಂಬ ಆರೋಪ ಕೇಳಿಬಂದಿತ್ತು.

ಆರೋಪಿಯು ಮೋಸದ ಉದ್ದೇಶದಿಂದ ನಕಲಿ ದಾಖಲೆಗಳು, ಸರ್ಕಾರಿ ಸ್ಟ್ಯಾಂಪ್‌ಗಳು ಹಾಗೂ ಸರ್ಕಾರದ ವಿವಿಧ ಕಚೇರಿಗಳ ಮೊಹರುಗಳನ್ನು ಅಕ್ರಮವಾಗಿ ತಯಾರಿಸಿ, ಅವುಗಳನ್ನು ವಿವಿಧ ಸರ್ಕಾರಿ ಕಚೇರಿಗಳು ಹಾಗೂ ಬ್ಯಾಂಕ್‌ಗಳಿಗೆ ಸಲ್ಲಿಸುವ ಮೂಲಕ ಸರ್ಕಾರ ಮತ್ತು ಬ್ಯಾಂಕ್‌ಗಳಿಗೆ ಅಕ್ರಮ ನಷ್ಟ ಉಂಟುಮಾಡಿ ವಂಚನೆ ಮಾಡಿದ ಆರೋಪ ಎದುರಿಸುತ್ತಿದ್ದನು.

ಈ ಕುರಿತು ನೀಡಿದ ದೂರಿನ ಮೇರೆಗೆ ಜಯನಗರ ಪೊಲೀಸ್ ಠಾಣೆಯಲ್ಲಿ ಗುನ್ನೆ ಸಂಖ್ಯೆ 21/2021 ರಡಿ ಐಪಿಸಿ ಕಲಂ 255, 256, 258, 420, 465, 467, 468 ಅಡಿಯಲ್ಲಿ ಪ್ರಕರಣ ದಾಖಲಾಗಿತ್ತು.

ಪ್ರಕರಣದ ತನಿಖೆಯನ್ನು ತನಿಖಾಧಿಕಾರಿಯಾದ ಶಿವಮೊಗ್ಗ ಡಿವೈಎಸ್‌ಪಿ ಪ್ರಶಾಂತ್ ಮುನ್ನೊಳಿ ಅವರು ಪೂರ್ಣಗೊಳಿಸಿ ನ್ಯಾಯಾಲಯಕ್ಕೆ ದೋಷಾರೋಪಣಾ ಪತ್ರ ಸಲ್ಲಿಸಿದ್ದರು.

ಸರ್ಕಾರದ ಪರವಾಗಿ ಸರ್ಕಾರಿ ಅಭಿಯೋಜಕಿ ಮಮತಾ ಬಿ.ಎಸ್. ಅವರು ವಾದ ಮಂಡಿಸಿದರು. ಪ್ರಕರಣದ ವಿಚಾರಣೆ ಶಿವಮೊಗ್ಗದ 3ನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯದಲ್ಲಿ ನಡೆಯಿತು.

ವಿಚಾರಣೆ ಪೂರ್ಣಗೊಂಡ ಬಳಿಕ ನ್ಯಾಯಾಧೀಶರಾದ ಯಶವಂತ ಕುಮಾರ್ ಅವರು 2026ರ ಆಗಸ್ಟ್ 12ರಂದು ಆರೋಪಿತನಿಗೆ 5 ವರ್ಷ ಕಠಿಣ ಕಾರಾಗೃಹ ಶಿಕ್ಷೆ ಹಾಗೂ ₹17,000 ದಂಡ ವಿಧಿಸಿ ಆದೇಶ ನೀಡಿದ್ದಾರೆ.

ಮಾಹಿತಿ ಮತ್ತು ಮೂಲ: ಈ ವರದಿಯ ಮಾಹಿತಿ ವರದಿಗಾರರು, ಅಧಿಕೃತ ಪ್ರಕಟಣೆಗಳು ಅಥವಾ ಸ್ಥಳದಲ್ಲಿನ ವಿಶ್ವಾಸಾರ್ಹ ಮೂಲಗಳಿಂದ ಪರಿಶೀಲಿಸಲಾಗಿದೆ.

Koushik G K

MalnadTimes.com ವೆಬ್‌ಸೈಟ್‌ನ ಸ್ಥಾಪಕ ಮತ್ತು ನಿರ್ವಾಹಕರಾಗಿದ್ದಾರೆ. ಅಕ್ಟೋಬರ್ 3 2019 ರಲ್ಲಿ ಈ ತಾಣವನ್ನು ಆರಂಭಿಸಿದ ಅವರು, ಮೊದಲಿಗೆ ಐಟಿ ಕ್ಷೇತ್ರದಲ್ಲಿ ಕೆಲಸ ಮಾಡಿದ ಅನುಭವ ಹೊಂದಿದ್ದಾರೆ. ತಮ್ಮ ತಾಂತ್ರಿಕ ಪರಿಣತಿಯನ್ನು ಮತ್ತು ಸ್ಥಳೀಯ ಸುದ್ದಿಗಳ ಪ್ರೀತಿಯನ್ನು ಒಂದಾಗಿಸಿ, ಮಲ್ನಾಡಿನ ಜನತೆಗೆ ನಿಖರವಾದ, ವಿಶ್ವಾಸಾರ್ಹ ಹಾಗೂ ಸಮಗ್ರ ಸುದ್ದಿಗಳನ್ನು ತಲುಪಿಸುವ ನಿಟ್ಟಿನಲ್ಲಿ ಈ ತಾಣವನ್ನು ರೂಪಿಸಿದ್ದಾರೆ. Malnad Times ಮೂಲಕ  ಶಿವಮೊಗ್ಗ ಮತ್ತು ಮಲ್ನಾಡು ಭಾಗದ ಸಮುದಾಯದ ಧ್ವನಿಯಾಗಿ, ಗ್ರಾಮೀಣ ಬದುಕು, ಪರಿಸರ, ಕೃಷಿ, ಶಿಕ್ಷಣ, ಮತ್ತು ಸಾರ್ವಜನಿಕ ವಿಚಾರಗಳನ್ನು ತಲುಪಿಸುವ ಪ್ರಯತ್ನದಲ್ಲಿ ತೊಡಗಿದ್ದಾರೆ.ಈ ತಾಣದ ನಿರ್ವಹಣೆ, ತಾಂತ್ರಿಕ ಹಾಗೂ ಸಂಪಾದಕೀಯ ಕಾರ್ಯಗಳಲ್ಲಿ ನಿತ್ಯ ಭಾಗವಹಿಸುತ್ತಿದ್ದಾರೆ.Contact No -7022818650