Crime News

SHIVAMOGGA | ಬಂಧಿಸಲು ತೆರಳಿದ್ದ ಪೊಲೀಸರ ಮೇಲೆ ಹಲ್ಲೆ, ರೌಡಿಶೀಟರ್ ಕಾಲಿಗೆ ಫೈರಿಂಗ್ !

Shivamogga
Shivamogga

SHIVAMOGGA | ಬಂಧಿಸಲು ತೆರಳಿದ್ದ ಪೊಲೀಸರ ಮೇಲೆ ಹಲ್ಲೆ ನಡೆಸಿ ಪರಾರಿಯಾಗಲು ಯತ್ನಿಸಿದ ರೌಡಿಶೀಟರ್ ಕಾಲಿಗೆ ಫೈರಿಂಗ್ ಮಾಡಿ ಬಂಧಿಸಲಾಗಿದೆ.

WhatsApp Group Join Now
Telegram Group Join Now
Instagram Group Join Now
📢 Stay Updated! Join our WhatsApp Channel Now →

ಸಾರ್ವಜನಿಕರನ್ನು ಅಡ್ಡಗಟ್ಟಿ ಹಲ್ಲೆ ನಡೆಸಿ, ಕೊಲೆಗೆ ಯತ್ನಿಸಿದ ರೌಡಿಶೀಟರ್ ಭವಿತ್ ಎಂಬಾತನ ಕಾಲಿಗೆ ಪೊಲೀಸರು ಗುಂಡು ಹಾರಿಸಲಾಗಿದೆ ಎಂದು ಶಿವಮೊಗ್ಗ ಎಸ್ಪಿ ಜಿ.ಕೆ.ಮಿಥುನ್ ಕುಮಾರ್ ತಿಳಿಸಿದ್ದಾರೆ.

Gruhalakshmi June Installment : ಜೂನ್ ತಿಂಗಳ ಗೃಹಲಕ್ಷ್ಮಿ ಹಣ ನಿಮಗೆ ಇನ್ನೂ ಬಂದಿಲ್ಲವೇ ತಪ್ಪದೇ ಈ ಕೆಲಸಗಳನ್ನು ಮಾಡಿ

ಕಳೆದ ರಾತ್ರಿ ಜಯನಗರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಭವಿತ್ ಮತ್ತು ಇತರೆ ಇಬ್ಬರು ಸಾರ್ವಜನಿಕರನ್ನು ಅಡ್ಡಗಟ್ಟಿ ಹಲ್ಲೆ ಮತ್ತು ಕೊಲೆಗೆ ಯತ್ನಿಸಿದ್ದಾರೆ. ಈ ಸಂಬಂಧ ಆರೋಪಿಗಳ ಹುಡುಕಾಟ ನಡೆಯುತಿತ್ತು. ರೌಡಿಶೀಟರ್ ಭವಿತ್ ಕುರಿತು ಮಾಹಿತಿ ಸಂಗ್ರಹಿಸಿ ಬಂಧನಕ್ಕೆ ತೆರಳಿದ್ದಾಗ ಆತ ಪೊಲೀಸ್ ಸಿಬ್ಬಂದಿ ಮೇಲೆ ದಾಳಿ ನಡೆಸಿ ಪರಾರಿಯಾಗಲು ಯತ್ನಿಸಿದ್ದಾನೆ. ಆತ್ಮರಕ್ಷಣೆಗಾಗಿ ಪಿಎಸ್‌ಐ ಸುನಿಲ್ ಅವರು ಭವಿತ್ ಕಾಲಿಗೆ ಗುಂಡು ಹಾರಿಸಿದ್ದಾರೆ.

Shivamogga
shivamogga police

ಗಾಯಾಳು ಪೊಲೀಸ್ ಸಿಬ್ಬಂದಿ ಮತ್ತು ರೌಡಿಶೀಟರ್ ಭವಿತ್‌ನನ್ನು ಆಸ್ಪತ್ರೆಗೆ ದಾಖಲು ಮಾಡಲಾಗಿದೆ.

ಜಯನಗರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಭವಿತ್ ವಿರುದ್ಧ ಕೊಲೆ ಪ್ರಕರಣ, ಕೊಲೆ ಯತ್ನ, ರಾಬರಿ ಸೇರಿ ಒಟ್ಟು ಏಳು ಪ್ರಕರಣಗಳಿವೆ. ವಿನೋಬಗರ ಠಾಣೆ ವ್ಯಾಪ್ತಿಯಲ್ಲಿ ಭವಿತ್ ಕಾಲಿಗೆ ಗುಂಡು ಹಾರಿಸಿ ಬಂಧಿಸಲಾಗಿದೆ..

Farmer Loan Waiver :ರೈತರಿಗೆ ಗುಡ್ ನ್ಯೂಸ್ ನೀಡಿದ ರಾಜ್ಯ ಸರ್ಕಾರ, ಇಂತಹ ರೈತರ ಸಾಲ ಮನ್ನಾ

ಮಾಹಿತಿ ಮತ್ತು ಮೂಲ: ಈ ವರದಿಯ ಮಾಹಿತಿ ವರದಿಗಾರರು, ಅಧಿಕೃತ ಪ್ರಕಟಣೆಗಳು ಅಥವಾ ಸ್ಥಳದಲ್ಲಿನ ವಿಶ್ವಾಸಾರ್ಹ ಮೂಲಗಳಿಂದ ಪರಿಶೀಲಿಸಲಾಗಿದೆ.

Mahesh Hindlemane

ಮಲೆನಾಡಿನ ಹೆಬ್ಬಾಗಿಲು ಶಿವಮೊಗ್ಗದ ಸ್ಥಳೀಯ ನ್ಯೂಸ್ ವೆಬ್‌ಸೈಟ್‌ಗಳಲ್ಲಿ ಪ್ರತಿನಿಧಿಯಾಗಿ ವೃತ್ತಿ ಜೀವನ ಪ್ರಾರಂಭ. ಪತ್ರಿಕೋದ್ಯಮದಲ್ಲಿ 8 ವರ್ಷಗಳ ಅನುಭವ. ಜಿಲ್ಲಾ ಮಟ್ಟದ ದಿನಪತ್ರಿಕೆಗಳಲ್ಲಿ ಹಾಗೂ ವೆಬ್‌ಸೈಟ್‌ಗಳಲ್ಲಿ ಮಲೆನಾಡಿಗೆ ಸಂಬಂಧಿಸಿದ ವಿಷಯಗಳ ಲೇಖನಗಳನ್ನು ಬರೆದಿದ್ದೇನೆ. ಪ್ರಸ್ತುತ <strong>'ಮಲ್ನಾಡ್ ಟೈಮ್ಸ್'</strong> ಡಿಜಿಟಲ್ ನಲ್ಲಿ ಸಂಪಾದಕನಾಗಿ ಮುಂದುವರೆದಿದ್ದೇನೆ. <a href="mailto:[email protected]">[email protected]</a>