ಶಿವಮೊಗ್ಗ:ಮಲೆನಾಡು ಮತ್ತು ಕರಾವಳಿ ಭಾಗಗಳಲ್ಲಿ ಕೋಮು ಹಿಂಸಾಚಾರ ತಡೆಯಲು ರಾಜ್ಯ ಸರ್ಕಾರ ವಿಶೇಷ ಕಾರ್ಯಪಡೆ ರಚನೆ ಮಾಡಿರುವ ಸಂದರ್ಭದಲ್ಲಿ, ಶಿವಮೊಗ್ಗದಲ್ಲಿ ಗಣೇಶ ವಿಸರ್ಜನೆ ವೇಳೆ ಸಂಭವಿಸಿದ ಸಣ್ಣ ಗಲಾಟೆ ಈಗ ರಾಜಕೀಯ ಬಣ್ಣ ಪಡೆದುಕೊಂಡಿದೆ. ಆಶ್ರಯ ಬಡಾವಣೆಯಲ್ಲಿ ನಿನ್ನೆ (ಆ.31) ಗಣೇಶ ವಿಸರ್ಜನೆ ಮೆರವಣಿಗೆ ವೇಳೆ ಹಿಂದೂಗಳ ನಡುವೆಯೇ ಜಗಳ ಉಂಟಾಗಿದೆ. ಆದರೆ, ಇದನ್ನು ಹಿಂದೂ–ಮುಸ್ಲಿಂ ಗಲಾಟೆ ಎಂದು ಬಿಂಬಿಸಲು ಯತ್ನ ನಡೆದಿರುವ ಆರೋಪ ಹೊರಬಿದ್ದಿದೆ.
ಸ್ಥಳೀಯರ ಪ್ರಕಾರ, ಬಿಜೆಪಿ ಕಾರ್ಯಕರ್ತ ಶಂಕರ್ ಎಂಬಾತ ಈ ಘಟನೆಗೆ ಧಾರ್ಮಿಕ ಬಣ್ಣ ಹಚ್ಚಲು ಪ್ರಯತ್ನಿಸಿದ್ದಾನೆ. ಇದರಿಂದ ಆಕ್ರೋಶಗೊಂಡ ನಿವಾಸಿಗಳು ಅವನ ವಿರುದ್ಧ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದು, ತುಂಗಾ ನಗರ ಪೊಲೀಸ್ ಠಾಣೆಯಲ್ಲಿ ಅಧಿಕೃತ ದೂರು ದಾಖಲಿಸಿದ್ದಾರೆ.
ಗೋವಿಂದಾಪುರ ಆಶ್ರಯ ಬಡಾವಣೆ ನಿವಾಸಿಗಳ ಸಂಘವು, “ಹಿಂದೂ ಮತ್ತು ಮುಸ್ಲಿಂ ಸಮುದಾಯಗಳು ಸಹಕಾರದಿಂದ ಬದುಕುತ್ತಿರುವ ಬಡಾವಣೆಯಲ್ಲಿ ಜಗಳ ಹಚ್ಚುವ ಯತ್ನ ಅಸಹ್ಯಕರ” ಎಂದು ಕಿಡಿಕಾರಿದ್ದು, ಶಂಕರ್ ವಿರುದ್ಧ ಕಾನೂನು ಕ್ರಮ ಕೈಗೊಳ್ಳಬೇಕೆಂದು ಆಗ್ರಹಿಸಿದೆ.
ಆದರೆ, ಈ ಆರೋಪಗಳಿಗೆ ಪ್ರತಿಕ್ರಿಯಿಸಿದ ಶಂಕರ್, “ನಾನು ಯಾವುದೇ ರೀತಿಯ ಹಿಂದೂ–ಮುಸ್ಲಿಂ ಗಲಾಟೆ ಎಂದು ಹೇಳಿಲ್ಲ. ಇದು ಅಸೂಯೆಯಿಂದ ಮಾಡಲಾದ ಅಪಪ್ರಚಾರ. ಬಡಾವಣೆಯ ಅಭಿವೃದ್ಧಿಗೆ ನಾನು ಹಲವಾರು ಕೆಲಸಗಳನ್ನು ಮಾಡಿದ್ದೇನೆ. ಆದರೆ ಕೆಲವು ಅಕ್ರಮ ಚಟುವಟಿಕೆಗಳನ್ನು ವಿರೋಧಿಸಿದ್ದರಿಂದ ನನ್ನ ವಿರುದ್ಧ ಸುಳ್ಳು ದೂರುಗಳು ಬಂದಿವೆ” ಎಂದು ಸ್ಪಷ್ಟಪಡಿಸಿದರು.
ಇನ್ನು ಸ್ಥಳೀಯ ನಿವಾಸಿಗಳ ಆರೋಪ ಪ್ರಕಾರ, ಕುಂಟ ದೇವರಾಜ್ ಎನ್ನುವ ವ್ಯಕ್ತಿ ಅಕ್ರಮವಾಗಿ ಅಂಗಡಿ ಆರಂಭಿಸಿದ್ದ ಹಿನ್ನೆಲೆಯಲ್ಲಿ ಈ ಕಲಹಕ್ಕೆ ಕಾರಣವಾಗಿದ್ದು, ಶಂಕರ್ ಮೇಲೆ ತಪ್ಪು ಆರೋಪಗಳನ್ನು ಹೊರಿಸಲಾಗಿದೆ ಎಂಬುದಾಗಿ ತಿಳಿದುಬಂದಿದೆ.
ಈ ಬೆಳವಣಿಗೆ ಹಿನ್ನೆಲೆಯಲ್ಲಿ, ಸಾಮಾನ್ಯ ಗಲಾಟೆಯನ್ನು ಧಾರ್ಮಿಕ ಬಣ್ಣ ಹಚ್ಚಿ ರಾಜಕೀಯೀಕರಣ ಮಾಡುವ ಪ್ರಯತ್ನ ನಡೆದಿದೆ ಎಂಬ ಚರ್ಚೆ ವ್ಯಾಪಕವಾಗಿದ್ದು, ಪೊಲೀಸ್ ಇಲಾಖೆ ಎಲ್ಲಾ ಆಂಗಲ್ನಲ್ಲಿ ತನಿಖೆ ಮುಂದುವರಿಸಿದೆ.
ನಾಳೆ ಶಿವಮೊಗ್ಗದಿಂದ ಧರ್ಮಸ್ಥಳಕ್ಕೆ ಕೆ.ಎಸ್. ಈಶ್ವರಪ್ಪ ನೇತೃತ್ವದಲ್ಲಿ ‘ಧರ್ಮ ರಕ್ಷಾ ಜಾಥಾ’
MalnadTimes.com ವೆಬ್ಸೈಟ್ನ ಸ್ಥಾಪಕ ಮತ್ತು ನಿರ್ವಾಹಕರಾಗಿದ್ದಾರೆ. ಅಕ್ಟೋಬರ್ 3 2019 ರಲ್ಲಿ ಈ ತಾಣವನ್ನು ಆರಂಭಿಸಿದ ಅವರು, ಮೊದಲಿಗೆ ಐಟಿ ಕ್ಷೇತ್ರದಲ್ಲಿ ಕೆಲಸ ಮಾಡಿದ ಅನುಭವ ಹೊಂದಿದ್ದಾರೆ. ತಮ್ಮ ತಾಂತ್ರಿಕ ಪರಿಣತಿಯನ್ನು ಮತ್ತು ಸ್ಥಳೀಯ ಸುದ್ದಿಗಳ ಪ್ರೀತಿಯನ್ನು ಒಂದಾಗಿಸಿ, ಮಲ್ನಾಡಿನ ಜನತೆಗೆ ನಿಖರವಾದ, ವಿಶ್ವಾಸಾರ್ಹ ಹಾಗೂ ಸಮಗ್ರ ಸುದ್ದಿಗಳನ್ನು ತಲುಪಿಸುವ ನಿಟ್ಟಿನಲ್ಲಿ ಈ ತಾಣವನ್ನು ರೂಪಿಸಿದ್ದಾರೆ.
Malnad Times ಮೂಲಕ ಶಿವಮೊಗ್ಗ ಮತ್ತು ಮಲ್ನಾಡು ಭಾಗದ ಸಮುದಾಯದ ಧ್ವನಿಯಾಗಿ, ಗ್ರಾಮೀಣ ಬದುಕು, ಪರಿಸರ, ಕೃಷಿ, ಶಿಕ್ಷಣ, ಮತ್ತು ಸಾರ್ವಜನಿಕ ವಿಚಾರಗಳನ್ನು ತಲುಪಿಸುವ ಪ್ರಯತ್ನದಲ್ಲಿ ತೊಡಗಿದ್ದಾರೆ.ಈ ತಾಣದ ನಿರ್ವಹಣೆ, ತಾಂತ್ರಿಕ ಹಾಗೂ ಸಂಪಾದಕೀಯ ಕಾರ್ಯಗಳಲ್ಲಿ ನಿತ್ಯ ಭಾಗವಹಿಸುತ್ತಿದ್ದಾರೆ.Contact No -7022818650